ಬ್ರೇಕಿಂಗ್ ನ್ಯೂಸ್
23-09-21 09:09 pm Headline Karnataka News Network ಕ್ರೈಂ
ಚೆನ್ನೈ, ಸೆ.23: ತಮಿಳುನಾಡು ರಾಜಧಾನಿ ಚೆನ್ನೈ ನಗರದ ತಂಬರಂ ರೈಲ್ವೇ ನಿಲ್ದಾಣದ ಹೊರಭಾಗದಲ್ಲಿ ಕಾಲೇಜು ಯುವತಿಯ ಕುತ್ತಿಗೆಯನ್ನು ಕೊಯ್ದು ಯುವಕನೊಬ್ಬ ಹಾಡಹಗಲೇ ಕೊಲೆಗೈದ ಘಟನೆ ನಡೆದಿದೆ.
ಯುವತಿಯ ಕತ್ತು ಕೊಯ್ದು ಕೊಲೆಗೈದ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಳ್ಳಲು ಯುವಕ ಯತ್ನಿಸಿದ್ದಾನೆ. ಸ್ಥಳೀಯರು ಆತನನ್ನು ಆಸ್ಪತ್ರೆಗೆ ಸೇರಿಸಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಪ್ರೀತಿಯ ವಿಷಯದಲ್ಲಿ ಬೇಸತ್ತು ಯುವತಿಯನ್ನು ಯುವಕ ಕೊಲೆ ಮಾಡಿರುವ ಅನುಮಾನ ವ್ಯಕ್ತವಾಗಿದೆ. ಆದರೆ, ಯುವಕನ ಹುಚ್ಚಾಟಕ್ಕೆ ಮದ್ರಾಸ್ ಕ್ರಿಶ್ಚಿಯನ್ ಕಾಲೇಜಿನ 20 ವರ್ಷದ ವಿದ್ಯಾರ್ಥಿನಿ ಶ್ವೇತಾ ಪ್ರಾಣ ಕಳೆದುಕೊಂಡಿದ್ದಾಳೆ. ಆಕೆಯ ಕುತ್ತಿಗೆಯನ್ನು ಚಾಕುವಿನಿಂದ ಸೀಳಿದ ಬಳಿಕ ತನ್ನ ಕುತ್ತಿಗೆಯನ್ನೂ ಚುಚ್ಚಿಕೊಂಡ ಯುವಕನಿಗೆ ತೀವ್ರ ರಕ್ತಸ್ರಾವವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಯುವತಿಯ ಮೇಲೆ ಚುಚ್ಚಿದರೂ, ಆಕೆಯನ್ನು ಆಸ್ಪತ್ರೆಗೆ ದಾಖಲಿಸುವುದು ತಡವಾಗಿತ್ತು. ತೀವ್ರ ರಕ್ತಸ್ರಾವದಿಂದ ರಸ್ತೆಯಲ್ಲೇ ಆಕೆ ಪ್ರಾಣ ಬಿಟ್ಟಿದ್ದಾಳೆ. 2016ರಲ್ಲಿ ಸ್ವಾತಿ ಎಂಬ ಯುವತಿಯನ್ನು ಕೂಡ ಇದೇ ರೀತಿಯಲ್ಲಿ ಕೊಲೆ ಮಾಡಲಾಗಿತ್ತು. ನುಂಗಂಬಾಕ್ಕಂ ರೈಲ್ವೆ ನಿಲ್ದಾಣದ ಹೊರಗೆ 5 ವರ್ಷದ ಹಿಂದೆ ಯುವಕನೊಬ್ಬ ಸ್ವಾತಿ ಎಂಬ ಯುವತಿಯ ಕುತ್ತಿಗೆ ಸೀಳಿ ಕೊಲೆ ಮಾಡಿದ್ದ.
A private college student was stabbed to death in front of the Tambaram Railway Station today afternoon. As per the reports, the man was conversing with the girl before stabbing her. He attempted suicide after and is undergoing treatment at a government hospital is in Chrompet.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm