ಬ್ರೇಕಿಂಗ್ ನ್ಯೂಸ್
24-09-21 12:50 pm Headline Karnataka News Network ಕ್ರೈಂ
ಮುಂಬೈ, ಸೆ.24: ಅಪ್ರಾಪ್ತ ಹುಡುಗಿಯನ್ನು 33 ಮಂದಿ ದುರುಳರು ಸೇರಿಕೊಂಡು ಕಳೆದ ಎಂಟು ತಿಂಗಳಲ್ಲಿ ವಿವಿಧ ಕಡೆಗಳಿಗೆ ಕೊಂಡೊಯ್ದು ಸಾಮೂಹಿಕ ಅತ್ಯಾಚಾರ ನಡೆಸಿರುವ ಅಮಾನುಷ ಘಟನೆ ಥಾಣೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದ್ದು, ಪೊಲೀಸರು 24 ಮಂದಿಯನ್ನು ಬಂಧಿಸಿದ್ದಾರೆ.
ಬಾಲಕಿಯ ದೂರಿನಂತೆ ಎರಡು ದಿನಗಳ ಹಿಂದೆ ದೊಂಬಿವಿಲಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ಪೋಕ್ಸೋ ಸೇರಿದಂತೆ ಗ್ಯಾಂಗ್ ರೇಪ್ ಇನ್ನಿತರ ಸೆಕ್ಷನ್ ಗಳಡಿ ಕೇಸು ದಾಖಲಿಸಿದ್ದರು. ಕಳೆದ ಜನವರಿ 29ರಿಂದ ತೊಡಗಿ ಸೆಪ್ಟಂಬರ್ 22ರ ವರೆಗೂ ಬಾಲಕಿಯನ್ನು ಲೈಂಗಿಕವಾಗಿ ಕಿರುಕುಳ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೊದಲಿಗೆ ಪಾರ್ಟಿಯೊಂದಕ್ಕೆ ಕರೆದು ಅಲ್ಲಿ ಮದ್ಯಪಾನ ಮಾಡಿಸಿ, ಗೆಳೆಯನೇ ರೇಪ್ ಮಾಡಿದ್ದ. ಆನಂತರ, ಆಕೆಯ ವಿಡಿಯೋವನ್ನು ಮಾಡಿದ್ದು, ಅದೇ ವಿಡಿಯೋ ಮುಂದಿಟ್ಟು ಬೇರೆ ಬೇರೆ ಕಡೆಗೆ ಕರೆದೊಯ್ದು ತನ್ನ ಇತರ ಗೆಳೆಯರಿಂದಲೂ ರೇಪ್ ಮಾಡಿಸಿದ್ದಾನೆ. ವಿಡಿಯೋ ಮುಂದಿಟ್ಟು ಬ್ಲಾಕ್ಮೇಲ್ ಮಾಡುತ್ತಲೇ ಎಂಟು ತಿಂಗಳಲ್ಲಿ ಥಾಣೆ ಜಿಲ್ಲೆಯ ದೊಂಬಿವಿಲಿ, ಬದ್ಲಾಪುರ್, ಮುರ್ಬಾದ್ ಮತ್ತು ರಬಾಲೆ ಮುಂತಾದ ಕಡೆಗೆ ಕೊಂಡೊಯ್ದು ಅಲ್ಲಲ್ಲಾ ಗ್ಯಾಂಗ್ ರೇಪ್ ಮಾಡಿದ್ದಾರೆ. ಹುಡುಗರ ಕುಕೃತ್ಯದಿಂದ ಬೇಸತ್ತ ಬಾಲಕಿ ಮೊನ್ನೆ ಸೆ.22ರಂದು ಮನೆಯವರಿಗೆ ವಿಚಾರ ತಿಳಿಸಿ, ಪೊಲೀಸ್ ದೂರು ನೀಡಿದ್ದಾಳೆ ಎಂದು ಪೂರ್ವ ವಲಯ ಎಸಿಪಿ ದತ್ತಾತ್ರೇಯ ಕರಾಳೆ ತಿಳಿಸಿದ್ದಾರೆ.
33 ಮಂದಿಯ ಹೆಸರನ್ನು ಸಂತ್ರಸ್ತ ಬಾಲಕಿ ನೀಡಿದ್ದಾಳೆ. ಅದರಲ್ಲಿ 24 ಮಂದಿಯನ್ನು ವಶಕ್ಕೆ ಪಡೆದಿದ್ದೇವೆ. ಈ ಪೈಕಿ ಇಬ್ಬರು ಅಪ್ರಾಪ್ತರು ಇದ್ದಾರೆ. ಅವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿ, ಸೆ.29ರ ವರೆಗೆ ಪೊಲೀಸ್ ಕಸ್ಟಡಿ ಪಡೆಯಲಾಗಿದೆ. ಒಟ್ಟು ಪ್ರಕರಣದ ಬಗ್ಗೆ ತನಿಖೆ ನಡೆಸಲು ಮಹಿಳಾ ಅಧಿಕಾರಿ ಎಸಿಪಿ ಸೋನಾಲಿ ಧೋಳೆ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಲಾಗಿದೆ ಎಂದು ಕರಾಳೆ ತಿಳಿಸಿದ್ದಾರೆ.ದೆ.
A 15-year-old girl was allegedly gang-raped multiple times over a period of eight months in Maharashtra's Thane district and the police have arrested 24 persons and detained two minors in the case, an official said on Thursday.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm