ಬ್ರೇಕಿಂಗ್ ನ್ಯೂಸ್
24-09-21 04:13 pm Mangaluru Correspondent ಕ್ರೈಂ
ಉಳ್ಳಾಲ, ಸೆ.24: ಸೋಮೇಶ್ವರದ ಉಳ್ಳಾಲ ರೈಲ್ವೇ ಸ್ಟೇಷನ್ ಹಿಂಬದಿಯ ಬೀಚ್ ರಸ್ತೆಯಲ್ಲಿರುವ ಮನೆ ಮನೆಗಳಿಗೆ ಅಪರಿಚಿತ ವ್ಯಕ್ತಿಯೊಬ್ಬ ಕ್ರೈಸ್ತ ಮಿಷನರಿಗಳ ಧರ್ಮ ಪ್ರಚೋದಿತ ಕರಪತ್ರ ಮತ್ತು ಪುಸ್ತಕಗಳನ್ನ ಹಂಚಿದ್ದು ಬಜರಂಗದಳ ಕಾರ್ಯಕರ್ತರು ಅಪರಿಚಿತ ವ್ಯಕ್ತಿಯ ಹುಡುಕಾಟದಲ್ಲಿ ತೊಡಗಿದ್ದಾರೆ.






ಇಂದು ಬೆಳಗ್ಗೆ ಲುಂಗಿ ಧರಿಸಿದ್ದ ವ್ಯಕ್ತಿಯೊಬ್ಬ ಈ ಪ್ರದೇಶಕ್ಕೆ ಆಗಮಿಸಿದ್ದು ಕ್ರೈಸ್ತ ಧರ್ಮ ಪ್ರಚೋದಿತ ಮಳಯಾಲಂ ಮತ್ತು ಕನ್ನಡದಲ್ಲಿ ಮುದ್ರಿತ ಕರಪತ್ರ, ಪುಸ್ತಕಗಳನ್ನು ಇಟ್ಟು ಹೋಗಿದ್ದಾನೆ. ಸೋಮೇಶ್ವರದ ಬೀಚ್ ರಸ್ತೆಯಲ್ಲಿರುವ 15ಕ್ಕೂ ಹೆಚ್ಚು ಮನೆಗಳ ಹೊರಭಾಗ ಮತ್ತು ಗೇಟಲ್ಲಿ ಪುಸ್ತಕದ ಕಟ್ಟನ್ನು ಇಟ್ಟು ಹೋಗಿದ್ದಾನೆ. ಇದೇ ವೇಳೆ, ಸ್ಥಳೀಯ ವ್ಯಕ್ತಿಯೊಬ್ಬರು ಆತನಲ್ಲಿ ಸೇಲ್ಸ್ ಮೆನ್ ಎಂದುಕೊಂಡು ಮಾತನಾಡಿದ್ದು ಆತ ಕೊಟ್ಟ ಪುಸ್ತಕಗಳನ್ನು ನಿರಾಕರಿಸಿದ್ದಾನೆ. ಆದರೂ ಅವರ ಗೇಟಲ್ಲಿ ಪುಸ್ತಕ, ಸ್ಟಿಕ್ಕರ್, ಕರಪತ್ರಗಳನ್ನ ಇರಿಸಿ ಹೋಗಿದ್ದಾನೆ.






ಕರಪತ್ರ ಮತ್ತು ಪುಸ್ತಕಗಳಲ್ಲಿ ಸಂಪರ್ಕದ ಮೊಬೈಲ್ ಸಂಖ್ಯೆಯನ್ನೂ ನಮೂದಿಸಲಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಬಜರಂಗದಳ ಉಳ್ಳಾಲ ನಗರ ಸಂಚಾಲಕ ಅರ್ಜುನ್ ಮಾಡೂರು ಮತ್ತು ಕಾರ್ಯಕರ್ತರು ಉಳ್ಳಾಲ ಪೊಲೀಸರಿಗೆ ದೂರು ನೀಡಿದ್ದು ಕರಪತ್ರ, ಪುಸ್ತಕ ಹಂಚಿದ ಅಪರಿಚಿತ ವ್ಯಕ್ತಿಯ ಹುಡುಕಾಟ ನಡೆಸಿದ್ದಾರೆ. ಮತಾಂತರ ಮಾಡುವ ಉದ್ದೇಶದಿಂದ ಈ ಕೃತ್ಯ ನಡೆಸಲಾಗಿದೆಯೆಂದು ಬಜರಂಗದಳದ ಕಾರ್ಯಕರ್ತರು ಆರೋಪಿಸಿದ್ದಾರೆ.
Christian books and Magazines found at the gates of Hindu houses in Ullal in Mangalore VHP condemns the act. New testament Bible along with some Kannada and Malayalam books were found.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm