ಬ್ರೇಕಿಂಗ್ ನ್ಯೂಸ್
25-09-21 11:14 am Headline Karnataka News Network ಕ್ರೈಂ
ಮುಂಬೈ, ಸೆ. 25: ಹಿಂದಿಯ ಜನಪ್ರಿಯ ಕಾರ್ಯಕ್ರಮ ‘ಕಪಿಲ್ ಶರ್ಮಾ’ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸೋನಿ ಟಿವಿಯಲ್ಲಿ ಪ್ರಸಾರವಾಗುತ್ತಿರುವ ಈ ಕಾರ್ಯಕ್ರಮಕ್ಕೆ ಇದೀಗ ಕಾನೂನಿನ ಕಂಟಕ ಎದುರಾಗಿದೆ.
ನ್ಯಾಯಾಲಯದಲ್ಲಿ ಮದ್ಯಪಾನ ಮಾಡುವ ದೃಶ್ಯವೊಂದನ್ನು ಕಪಿಲ್ ಶರ್ಮಾ ಶೋನಲ್ಲಿ ಸೃಷ್ಟಿಸಿ ಟಿವಿಯಲ್ಲಿ ಪ್ರಸಾರ ಮಾಡಿದ ಹಿನ್ನೆಲೆ ಮಧ್ಯಪ್ರದೇಶದ ಶಿವಪುರಿ ಜಿಲ್ಲಾ ನ್ಯಾಯಾಲಯದಲ್ಲಿ ವಕೀಲರೊಬ್ಬರು ಈ ಕಾರ್ಯಕ್ರಮದ ವಿರುದ್ಧ ಮೊಕದ್ದಮೆ ಹೂಡಿದ್ದಾರೆ.


ಕಾರ್ಯಕ್ರಮದಲ್ಲಿ ನ್ಯಾಯಾಲಯದ ದೃಶ್ಯವೊಂದರಲ್ಲಿ ನಟರು ಮದ್ಯಪಾನ ಮಾಡುತ್ತಿದ್ದ ದೃಶ್ಯ ಚಿತ್ರೀಕರಿಸಲಾಗಿತ್ತು. ಇದು 2020ರ ಜನವರಿ 19 ರಂದು ಪ್ರಸಾರಗೊಂಡಿತ್ತು. ಈ ವರ್ಷದ ಏಪ್ರಿಲ್ 24ರಂದು ಮರು ಪ್ರಸಾರ ಮಾಡಲಾಗಿತ್ತು. ಈ ದೃಶ್ಯದ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿರುವ ವಕೀಲರು, ನ್ಯಾಯಾಲಯದಲ್ಲಿ ಮದ್ಯ ಸೇವನೆಯಂತಹ ದೃಶ್ಯವನ್ನು ಸೃಷ್ಟಿಸಿದ್ದು ತಪ್ಪು. ಇದು ನ್ಯಾಯಾಂಗ ವ್ಯವಸ್ಥೆಗೆ ಮಾಡಿದ ಅಪಮಾನ. ಈ ದೃಶ್ಯದ ಮೂಲಕ ನ್ಯಾಯಲಯದ ಘನತೆಗೆ ಧಕ್ಕೆ ತಂದಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಕಪಿಲ್ ಶರ್ಮಾ ಮೊದಲಿನಿಂದಲೂ ಇಂತಹದೆ ತಪ್ಪುಗಳನ್ನು ಮಾಡುತ್ತ ಬಂದಿದೆ. ಮಹಿಳೆಯ ಬಗ್ಗೆ ಕೀಳು ಮಟ್ಟದ ಮಾತುಗಳು, ಡಬಲ್ ಮೀನಿಂಗ್ ಮಾತುಗಳ ಮೂಲಕ ನೋಡುಗರಲ್ಲಿ ಅಸಹ್ಯ ಹುಟ್ಟಿಸುತ್ತಿದೆ ಎಂದು ವಕೀಲರು ಆರೋಪಿಸಿದ್ದಾರೆ.
ಇನ್ನು ಈ ಅರ್ಜಿಯ ವಿಚಾರಣೆ ಅಕ್ಟೋಬರ್ 1 ರಂದು ವಿಚಾರಣೆಗೆ ಬರಲಿದ್ದು, ಕಪಿಲ್ ಶರ್ಮಾ ಶೋ ನಿರ್ಮಾಪಕರು ನ್ಯಾಯಾಲಯದ ಮುಂದೆ ಹಾಜರಾಗಬೇಕಾಗಿದೆ.
An FIR has been filed against The Kapil Sharma Show makers in the district court of Shivpuri, Madhya Pradesh, as per a report by India Today. The complaint has been filed against one episode where actors were shown consuming alcohol while performing a courtroom scene. The complainant reportedly alleged that the actors disrespected the court.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm