ಬ್ರೇಕಿಂಗ್ ನ್ಯೂಸ್
25-09-21 12:10 pm Headline Karnataka News Network ಕ್ರೈಂ
ಮಂಗಳೂರು, ಸೆ.23 : ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ದರ್ಬೆ ರಸ್ತೆಯಿಂದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರಗೈದ ಪ್ರಕರಣದಲ್ಲಿ ಆರೋಪಿಯ ಅಪರಾಧ ಸಾಬೀತಾಗಿದೆ ಎಂದು ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ (ಪೋಕ್ಸೊ) ನ್ಯಾಯಾಧೀಶೆ ಸಾವಿತ್ರಿ ವಿ.ಭಟ್ ತೀರ್ಪು ನೀಡಿದ್ದಾರೆ.
ಬಂಟ್ವಾಳ ವಿಟ್ಲ ಕಸಬಾ ಉಕ್ಕುಡದ ಬಾಲಕೃಷ್ಣ (25) ಎಂಬಾತ ಆರೋಪಿಯಾಗಿದ್ದು ಅಪರಾಧ ಸಾಬೀತಾಗಿದೆ. ಶಿಕ್ಷೆಯ ಪ್ರಮಾಣವನ್ನು ನ್ಯಾಯಾಧೀಶರು ಸೆ.27ರಂದು ಪ್ರಕಟಿಸಲಿದ್ದಾರೆ. 2019ರ ಜುಲೈ 25ರಂದು ಬೆಳಗ್ಗೆ ಆರೋಪಿಗೆ ಪರಿಚಿತಳಾಗಿರುವ ಬಾಲಕಿಯು ಶಾಲೆಗೆ ನಡೆದುಕೊಂಡು ಹೋಗುತ್ತಿದ್ದಳು. ಈ ವೇಳೆ, ಆರೋಪಿ ಬಾಲಕೃಷ್ಣ ಸ್ನೇಹಿತ ಪರಶುರಾಮನ ಬೈಕ್ನಲ್ಲಿ ಆತನ ಸಹಕಾರದೊಂದಿಗೆ ಬಾಲಕಿಯನ್ನು ಅಪಹರಿಸಿದ್ದು ಬಿ.ಸಿ.ರೋಡ್ ವರೆಗೆ ಬೈಕ್ನಲ್ಲಿ ಕರೆದೊಯ್ದು ನಂತರ ಬಸ್ನಲ್ಲಿ ಮೂಡುಬಿದಿರೆ ನೆಲ್ಲಿಕಾರಿನ ಸಂಬಂಧಿಕರ ಮನೆಗೆ ಕರೆದೊಯ್ದಿದ್ದ. ಅಲ್ಲಿ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದ ಎಂದು ಆರೋಪಿಸಲಾಗಿತ್ತು.
ನಂತರ ಆರೋಪಿಯು ಬಾಲಕಿಯನ್ನು ಬೆಂಗಳೂರಿಗೆ ಕರೆದೊಯ್ದಿದ್ದು ಬಾಲಕಿ ನಾಪತ್ತೆಯಾದ ಬಗ್ಗೆ ಆಕೆಯ ತಾಯಿ ವಿಟ್ಲ ಪೊಲೀಸರಿಗೆ ದೂರು ನೀಡಿದ್ದರು.
ಬೆಂಗಳೂರಿನಲ್ಲಿ ಆರೋಪಿ ಮತ್ತು ಬಾಲಕಿಯನ್ನು ಕಂಡ ಪೊಲೀಸರು ಸಂಶಯಗೊಂಡು ವಿಚಾರಿಸಿದಾಗ ಅದು ವಿಟ್ಲ ಠಾಣೆಗೆ ಸಂಬಂಧಿಸಿದ ಪ್ರಕರಣ ಎನ್ನುವುದು ಬೆಳಕಿಗೆ ಬಂದಿತ್ತು.
ನಂತರ ವಿಟ್ಲ ಪೊಲೀಸರು ಅವರಿಬ್ಬರನ್ನು ಕರೆತಂದಿದ್ದರು. ಅಂದಿನ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ್ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ನ್ಯಾಯಾಲಯದಲ್ಲಿ 18 ಮಂದಿ ಸಾಕ್ಷಿದಾರರನ್ನು ವಿಚಾರಿಸಲಾಗಿದೆ. ಅಪಹರಣಕ್ಕೆ ಸಹಕರಿಸಿದ ಆರೋಪದಲ್ಲಿ ಪರಶುರಾಮನ ವಿರುದ್ಧವೂ ಪ್ರಕರಣ ದಾಖಲಾಗಿತ್ತು. ಪ್ರಾಸಿಕ್ಯೂಷನ್ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ (ಪೋಕ್ಸೊ) ವೆಂಕಟರಮಣ ಸ್ವಾಮಿ ಸಿ. ವಾದಿಸಿದ್ದಾರೆ.
Vitla Girl kidnapped and raped court sentences accused
22-08-25 10:28 pm
Bangalore Correspondent
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
Mahesh Thimarodi, Kalladka Prabhakar Bhat: ಮಹ...
22-08-25 09:47 am
Dharmasthala Case, Minister Eshwar Khandre: ಧ...
21-08-25 10:31 pm
22-08-25 10:00 pm
HK News Desk
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
ಮಹಾ ಸಿಎಂ ದೇವೇಂದ್ರ ಫಡ್ನವೀಸ್ - ಎಂಎನ್ಎಸ್ ಮುಖ್ಯಸ್...
21-08-25 06:09 pm
23-08-25 01:29 pm
Udupi Correspondent
ಹಿಂದುಗಳ ಹಬ್ಬ, ಆಚರಣೆಗೆ ತೊಂದರೆ ಇಲ್ಲ, ಬಿಜೆಪಿ ಶಾಸ...
22-08-25 05:07 pm
ಪೊಲೀಸರ ಕರ್ತವ್ಯಕ್ಕೆ ಅಡ್ಡಿ ; ಬೆಳ್ತಂಗಡಿ ಠಾಣೆಯಲ್ಲ...
22-08-25 04:21 pm
Activist Mahesh Shetty Timarodi Arrest: ಬಿ.ಎಲ...
21-08-25 09:35 pm
Vhp, Mangalore, Sharan Pumpwell: ಗಣೇಶೋತ್ಸವ, ದ...
21-08-25 09:12 pm
23-08-25 11:11 am
Mangaluru Correspondent
ಕ್ಲಾಸ್ ನಲ್ಲಿ ಹೊಡೆದಿದ್ದಕ್ಕೆ ಶಿಕ್ಷಕನ ಮೇಲೆ 9ನೇ ತ...
22-08-25 09:57 pm
Lucky Scheme, Shine Enterprises, Arrest, Mang...
22-08-25 09:17 pm
Mangalore Church, Moodbidri, Fraud: ಕಿಡ್ನಿ ವೈ...
21-08-25 11:00 pm
ಶೀಲ ಶಂಕೆ ; ಕ್ರಿಮಿನಾಶಕ ಕೊಡಿಸಿ ಕೊಲೆ, ಪ್ರಿಯಕರನೊ...
21-08-25 10:39 pm