ಬ್ರೇಕಿಂಗ್ ನ್ಯೂಸ್
25-09-21 12:10 pm Headline Karnataka News Network ಕ್ರೈಂ
ಮಂಗಳೂರು, ಸೆ.23 : ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ದರ್ಬೆ ರಸ್ತೆಯಿಂದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರಗೈದ ಪ್ರಕರಣದಲ್ಲಿ ಆರೋಪಿಯ ಅಪರಾಧ ಸಾಬೀತಾಗಿದೆ ಎಂದು ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ (ಪೋಕ್ಸೊ) ನ್ಯಾಯಾಧೀಶೆ ಸಾವಿತ್ರಿ ವಿ.ಭಟ್ ತೀರ್ಪು ನೀಡಿದ್ದಾರೆ.
ಬಂಟ್ವಾಳ ವಿಟ್ಲ ಕಸಬಾ ಉಕ್ಕುಡದ ಬಾಲಕೃಷ್ಣ (25) ಎಂಬಾತ ಆರೋಪಿಯಾಗಿದ್ದು ಅಪರಾಧ ಸಾಬೀತಾಗಿದೆ. ಶಿಕ್ಷೆಯ ಪ್ರಮಾಣವನ್ನು ನ್ಯಾಯಾಧೀಶರು ಸೆ.27ರಂದು ಪ್ರಕಟಿಸಲಿದ್ದಾರೆ. 2019ರ ಜುಲೈ 25ರಂದು ಬೆಳಗ್ಗೆ ಆರೋಪಿಗೆ ಪರಿಚಿತಳಾಗಿರುವ ಬಾಲಕಿಯು ಶಾಲೆಗೆ ನಡೆದುಕೊಂಡು ಹೋಗುತ್ತಿದ್ದಳು. ಈ ವೇಳೆ, ಆರೋಪಿ ಬಾಲಕೃಷ್ಣ ಸ್ನೇಹಿತ ಪರಶುರಾಮನ ಬೈಕ್ನಲ್ಲಿ ಆತನ ಸಹಕಾರದೊಂದಿಗೆ ಬಾಲಕಿಯನ್ನು ಅಪಹರಿಸಿದ್ದು ಬಿ.ಸಿ.ರೋಡ್ ವರೆಗೆ ಬೈಕ್ನಲ್ಲಿ ಕರೆದೊಯ್ದು ನಂತರ ಬಸ್ನಲ್ಲಿ ಮೂಡುಬಿದಿರೆ ನೆಲ್ಲಿಕಾರಿನ ಸಂಬಂಧಿಕರ ಮನೆಗೆ ಕರೆದೊಯ್ದಿದ್ದ. ಅಲ್ಲಿ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದ ಎಂದು ಆರೋಪಿಸಲಾಗಿತ್ತು.

ನಂತರ ಆರೋಪಿಯು ಬಾಲಕಿಯನ್ನು ಬೆಂಗಳೂರಿಗೆ ಕರೆದೊಯ್ದಿದ್ದು ಬಾಲಕಿ ನಾಪತ್ತೆಯಾದ ಬಗ್ಗೆ ಆಕೆಯ ತಾಯಿ ವಿಟ್ಲ ಪೊಲೀಸರಿಗೆ ದೂರು ನೀಡಿದ್ದರು.
ಬೆಂಗಳೂರಿನಲ್ಲಿ ಆರೋಪಿ ಮತ್ತು ಬಾಲಕಿಯನ್ನು ಕಂಡ ಪೊಲೀಸರು ಸಂಶಯಗೊಂಡು ವಿಚಾರಿಸಿದಾಗ ಅದು ವಿಟ್ಲ ಠಾಣೆಗೆ ಸಂಬಂಧಿಸಿದ ಪ್ರಕರಣ ಎನ್ನುವುದು ಬೆಳಕಿಗೆ ಬಂದಿತ್ತು.
ನಂತರ ವಿಟ್ಲ ಪೊಲೀಸರು ಅವರಿಬ್ಬರನ್ನು ಕರೆತಂದಿದ್ದರು. ಅಂದಿನ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ್ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ನ್ಯಾಯಾಲಯದಲ್ಲಿ 18 ಮಂದಿ ಸಾಕ್ಷಿದಾರರನ್ನು ವಿಚಾರಿಸಲಾಗಿದೆ. ಅಪಹರಣಕ್ಕೆ ಸಹಕರಿಸಿದ ಆರೋಪದಲ್ಲಿ ಪರಶುರಾಮನ ವಿರುದ್ಧವೂ ಪ್ರಕರಣ ದಾಖಲಾಗಿತ್ತು. ಪ್ರಾಸಿಕ್ಯೂಷನ್ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ (ಪೋಕ್ಸೊ) ವೆಂಕಟರಮಣ ಸ್ವಾಮಿ ಸಿ. ವಾದಿಸಿದ್ದಾರೆ.
Vitla Girl kidnapped and raped court sentences accused
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm