ಬ್ರೇಕಿಂಗ್ ನ್ಯೂಸ್
27-09-21 10:52 am Headline Karnataka News Network ಕ್ರೈಂ
ತಿರುವನಂತಪುರ, ಸೆ.26: ಒಂದನೇ ಕ್ಲಾಸ್ ಓದುತ್ತಿದ್ದ ಹೆಣ್ಣು ಮಗುವಿನ ಮೇಲೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕನಿಗೆ ತೃಶ್ಶೂರಿನ ವಿಶೇಷ ತ್ವರಿತ ನ್ಯಾಯಾಲಯ 29 ವರ್ಷಗಳ ಕಠಿಣ ಶಿಕ್ಷೆ ಜಾರಿಗೊಳಿಸಿದೆ.
ಆರೂವರೆ ವರ್ಷದ ಏನೂ ಅರಿಯದ ಮುಗ್ಧ ಕಂದಮ್ಮನ ಮೇಲೆ ಶಾಲೆಯ ಶಿಕ್ಷಕನೇ ಲೈಂಗಿಕ ಕಿರುಕುಳ ನೀಡಿದ್ದು ಅಸಹ್ಯ. ಇಂಥ ಘೋರ ಪ್ರಮಾದವನ್ನು ಮಾಡಿದ್ದಕ್ಕಾಗಿ ಶಿಕ್ಷಕನಿಗೆ ಘೋರ ಶಿಕ್ಷೆಯನ್ನೇ ನೀಡಬೇಕಾಗಿದೆ ಎಂದು ನ್ಯಾಯಾಧೀಶರು ತೀರ್ಪು ಘೋಷಣೆ ಮಾಡಿದ್ದಾರೆ.

2012ರಲ್ಲಿ ಶಾಲೆಯಿಂದ ಸ್ಟಡಿ ಟೂರ್ ತೆರಳಿದ್ದ ಸಂದರ್ಭದಲ್ಲಿ ಆರೂವರೆ ವರ್ಷದ ಮಗುವಿನ ಮೇಲೆ ಶಿಕ್ಷಕನೇ ಕಿರುಕುಳ ನೀಡಿದ್ದ. ಈ ಬಗ್ಗೆ ಮಗು ಮನೆಗೆ ಬಂದ ಬಳಿಕ ಹೆತ್ತವರಿಗೆ ತಿಳಿಸಿದ್ದರಿಂದ ಪೊಲೀಸ್ ದೂರು ದಾಖಲಾಗಿತ್ತು. ವಿಚಾರಣೆ ನಡೆಸಿದ ಕೋರ್ಟ್ ಈ ತೀರ್ಪು ಘೋಷಣೆ ಮಾಡಿದ್ದು, ಗುರು ಅಂದರೆ ಎಲ್ಲ ಉತ್ತಮ ಗುಣಗಳನ್ನು ಹೊಂದಿರಬೇಕು. ವಿದ್ಯಾರ್ಥಿಗಳಿಗೆ ಮಾದರಿ ಅನ್ನುವಂತಿರಬೇಕು ಎಂದು ಕಿವಿಮಾತು ಹೇಳಿದ್ದಾರೆ.
ಗುರು ಅಂದರೆ, ಶಿಕ್ಷಕ ಮಾತ್ರವಲ್ಲ. ಆತ ಉತ್ತಮ ಗೆಳೆಯ, ತತ್ವಶಾಸ್ತ್ರಜ್ಞ, ತರಬೇತುದಾರ, ಸಮಾಜ ಘಟಕದ ಇಂಜಿನಿಯರ್ ಮತ್ತು ರಾಷ್ಟ್ರ ನಿರ್ಮಾಣದ ಕಾಯಕ ಯೋಗಿ. ಭಾರತೀಯ ತತ್ವಶಾಸ್ತ್ರದಲ್ಲಿ ಗುರುವಿಗೆ ವಿಶೇಷ ಸ್ಥಾನವಿದೆ. ಆತನಿಂದ ಒದಗುವ ಸ್ಫೂರ್ತಿ ಒಬ್ಬನಿಗಷ್ಟೇ ಅಲ್ಲ, ಇಡೀ ಕುಟುಂಬಕ್ಕೆ ಸಿಗಬೇಕು. ಆಯಾ ಶಾಲೆ, ಶಿಕ್ಷಣ ಸಂಸ್ಥೆಗೆ ಸಿಗಬೇಕು. ಅಂದರೆ, ಜೀವನದ ಎಲ್ಲ ವಿಚಾರಗಳಲ್ಲಿ ಆತ ಮಾದರಿ ಆಗಿರಬೇಕು. ಆತ ಜ್ಞಾನಿಯಾಗಿರಬೇಕು, ಅಷ್ಟೇ ಅಲ್ಲಾ ಜೀವನದ ಶಿಕ್ಷಣವನ್ನೂ ವಿದ್ಯಾರ್ಥಿಗಳಿಗೆ ಕಲಿಸುವಂತಿರಬೇಕು. ಆಮೂಲಕ ರಾಷ್ಟ್ರ ಕಟ್ಟುವ ಕಾಯಕದಲ್ಲಿ ನಿರತರಾಗಬೇಕು ಎಂದು ನ್ಯಾಯಾಧೀಶರು ತೀರ್ಪಿನಲ್ಲಿ ವಿಶೇಷವಾಗಿ ಉಲ್ಲೇಖಿಸಿದ್ದಾರೆ.
A POSCO Court has sentenced a moral science teacher to imprisonment for a period of 29 years for sexually assaulting a Class-1 student during a school picnic.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm