ಬ್ರೇಕಿಂಗ್ ನ್ಯೂಸ್
27-09-21 04:43 pm Mangaluru Correspondent ಕ್ರೈಂ
ಬಂಟ್ವಾಳ, ಸೆ.27: ಜಮೀನು ನಿಮಿತ್ತ ತೆರಳಿದ್ದ ಮಹಿಳೆ ಮತ್ತು ಕುಟುಂಬಕ್ಕೆ ಮಂಗಳೂರಿನ ವಕೀಲ ಸೇರಿದಂತೆ ನಾಲ್ವರು ಗುಂಪು ಸೇರಿಕೊಂಡು ಅಶ್ಲೀಲ ಪದಗಳಿಂದ ನಿಂದಿಸಿದ್ದಲ್ಲದೆ, ಜಮೀನಿಗೆ ಪ್ರವೇಶಿಸದಂತೆ ಜೀವ ಬೆದರಿಕೆ ಒಡ್ಡಿದ ಘಟನೆ ಮಂಚಿ ಗ್ರಾಮದಲ್ಲಿ ನಡೆದಿದೆ.
ಮಂಗಳೂರಿನ ನಾಗೇಶ್ ರಾವ್ ಪತ್ತುಮುಡಿ ಎಂಬವರು ತನ್ನ ಪತ್ನಿ ಮತ್ತು ಮಗನ ಜೊತೆ ಮಂಚಿ ಗ್ರಾಮದಲ್ಲಿರುವ ತಮ್ಮ ಕೃಷಿ ಜಮೀನಿಗೆ ಹೋಗಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ. ರಸ್ತೆಗೆ ಅಡ್ಡಗಟ್ಟಿದ ಮಂಗಳೂರಿನಲ್ಲಿ ವಕೀಲ ವೃತ್ತಿಯಲ್ಲಿರುವ ಚಿದಾನಂದ ರಾವ್, ಅವರ ಸಹೋದರ ನಿವೃತ್ತ ಬಿಎಸ್ಸೆನ್ನೆಲ್ ಅಧಿಕಾರಿ ಯಜ್ಞೇಶ್ವರ ರಾವ್, ಸಂಬಂಧಿಕರಾದ ಆತ್ಮರಂಜನ ಕಾರಂತ ಮತ್ತು ಶರತ್ಚಂದ್ರ ಕಾರಂತ ಎಂಬವರು ಮಹಿಳೆಯೆಂದು ನೋಡದೇ ತೀರಾ ಅಶ್ಲೀಲ ಪದಗಳಿಂದ ನಿಂದಿಸಿದ್ದಾರೆ. ಹೀಗೆ ನಿಂದಿಸಿ ಬೆದರಿಕೆ ಹಾಕಿದ್ದನ್ನು ನಾಗೇಶ ರಾವ್ ಮಗ ವಿಡಿಯೋ ಮಾಡಿದ್ದಾರೆ. ವಿವಾಹಿತ ಮಹಿಳೆಯನ್ನು ತೀರಾ ಅಸಹ್ಯ ಪದಗಳಿಂದ ನಿಂದಿಸಿದ್ದಲ್ಲದೆ, ಕೃಷಿ ಜಮೀನಿಗೆ ಹೋಗದಂತೆ ತಡೆದು ಜೀವ ಬೆದರಿಕೆ ಒಡ್ಡಿದ್ದಾರೆ.




ಮಂಚಿ ಗ್ರಾಮದಲ್ಲಿ ನಾಗೇಶ ರಾವ್ ಕುಟುಂಬಕ್ಕೆ 4.5 ಎಕ್ರೆ ಜಮೀನು ಇದ್ದು ಈ ವಿಚಾರದಲ್ಲಿ ಪಕ್ಕದಲ್ಲಿ ಜಮೀನು ಹೊಂದಿರುವ ಚಿದಾನಂದ ರಾವ್ ಮತ್ತು ತಂಡದವರು ಕಳೆದ ಹಲವು ಸಮಯದಿಂದ ಜಟಾಪಟಿ ನಡೆಸುತ್ತಿದ್ದಾರೆ. ಜಮೀನು ವಿಚಾರದ ವ್ಯಾಜ್ಯ ಸದ್ಯ ಎಸಿ ಕೋರ್ಟಿನಲ್ಲಿದ್ದು ಸದ್ರಿ ಜಮೀನಿಗೆ ಬಾರದಂತೆ ಚಿದಾನಂದ ರಾವ್ ತಡೆ ಒಡ್ಡುತ್ತಿದ್ದಾರೆ ಎನ್ನಲಾಗಿದೆ.
ಸೆ.24 ರಂದು ಮಧ್ಯಾಹ್ನ ಜಮೀನಿಗೆ ತೆರಳಿದ್ದ ವೇಳೆ ರಸ್ತೆಗೆ ಕಲ್ಲು ಇಡಲಾಗಿತ್ತು. ಇದನ್ನು ತೆರವು ಮಾಡಲು ಪ್ರಯತ್ನಿಸಿದಾಗ ಅಡ್ಡಗಟ್ಟಿದ ತಂಡ ಅವಾಚ್ಯ ಪದಗಳಿಂದ ನಿಂದಿಸಿದೆ. ಅಲ್ಲದೆ, ತಾವು ತೆರಳಿದ್ದ ಓಮ್ನಿ ಕಾರಿಗೆ ಹಾನಿ ಮಾಡಿದ್ದಾರೆ ಎಂದು ನಾಗೇಶ್ ರಾವ್ ಬಂಟ್ವಾಳ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ.
Bail matter dispute Mangalore Lawyer harrasing woman with vulgur words and life threatening statements video goes viral. A case has been registered at the Bantwal rural police station. The lawyer has been identided as Chidananda Rao.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm