ಬ್ರೇಕಿಂಗ್ ನ್ಯೂಸ್
27-09-21 04:43 pm Mangaluru Correspondent ಕ್ರೈಂ
ಬಂಟ್ವಾಳ, ಸೆ.27: ಜಮೀನು ನಿಮಿತ್ತ ತೆರಳಿದ್ದ ಮಹಿಳೆ ಮತ್ತು ಕುಟುಂಬಕ್ಕೆ ಮಂಗಳೂರಿನ ವಕೀಲ ಸೇರಿದಂತೆ ನಾಲ್ವರು ಗುಂಪು ಸೇರಿಕೊಂಡು ಅಶ್ಲೀಲ ಪದಗಳಿಂದ ನಿಂದಿಸಿದ್ದಲ್ಲದೆ, ಜಮೀನಿಗೆ ಪ್ರವೇಶಿಸದಂತೆ ಜೀವ ಬೆದರಿಕೆ ಒಡ್ಡಿದ ಘಟನೆ ಮಂಚಿ ಗ್ರಾಮದಲ್ಲಿ ನಡೆದಿದೆ.
ಮಂಗಳೂರಿನ ನಾಗೇಶ್ ರಾವ್ ಪತ್ತುಮುಡಿ ಎಂಬವರು ತನ್ನ ಪತ್ನಿ ಮತ್ತು ಮಗನ ಜೊತೆ ಮಂಚಿ ಗ್ರಾಮದಲ್ಲಿರುವ ತಮ್ಮ ಕೃಷಿ ಜಮೀನಿಗೆ ಹೋಗಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ. ರಸ್ತೆಗೆ ಅಡ್ಡಗಟ್ಟಿದ ಮಂಗಳೂರಿನಲ್ಲಿ ವಕೀಲ ವೃತ್ತಿಯಲ್ಲಿರುವ ಚಿದಾನಂದ ರಾವ್, ಅವರ ಸಹೋದರ ನಿವೃತ್ತ ಬಿಎಸ್ಸೆನ್ನೆಲ್ ಅಧಿಕಾರಿ ಯಜ್ಞೇಶ್ವರ ರಾವ್, ಸಂಬಂಧಿಕರಾದ ಆತ್ಮರಂಜನ ಕಾರಂತ ಮತ್ತು ಶರತ್ಚಂದ್ರ ಕಾರಂತ ಎಂಬವರು ಮಹಿಳೆಯೆಂದು ನೋಡದೇ ತೀರಾ ಅಶ್ಲೀಲ ಪದಗಳಿಂದ ನಿಂದಿಸಿದ್ದಾರೆ. ಹೀಗೆ ನಿಂದಿಸಿ ಬೆದರಿಕೆ ಹಾಕಿದ್ದನ್ನು ನಾಗೇಶ ರಾವ್ ಮಗ ವಿಡಿಯೋ ಮಾಡಿದ್ದಾರೆ. ವಿವಾಹಿತ ಮಹಿಳೆಯನ್ನು ತೀರಾ ಅಸಹ್ಯ ಪದಗಳಿಂದ ನಿಂದಿಸಿದ್ದಲ್ಲದೆ, ಕೃಷಿ ಜಮೀನಿಗೆ ಹೋಗದಂತೆ ತಡೆದು ಜೀವ ಬೆದರಿಕೆ ಒಡ್ಡಿದ್ದಾರೆ.




ಮಂಚಿ ಗ್ರಾಮದಲ್ಲಿ ನಾಗೇಶ ರಾವ್ ಕುಟುಂಬಕ್ಕೆ 4.5 ಎಕ್ರೆ ಜಮೀನು ಇದ್ದು ಈ ವಿಚಾರದಲ್ಲಿ ಪಕ್ಕದಲ್ಲಿ ಜಮೀನು ಹೊಂದಿರುವ ಚಿದಾನಂದ ರಾವ್ ಮತ್ತು ತಂಡದವರು ಕಳೆದ ಹಲವು ಸಮಯದಿಂದ ಜಟಾಪಟಿ ನಡೆಸುತ್ತಿದ್ದಾರೆ. ಜಮೀನು ವಿಚಾರದ ವ್ಯಾಜ್ಯ ಸದ್ಯ ಎಸಿ ಕೋರ್ಟಿನಲ್ಲಿದ್ದು ಸದ್ರಿ ಜಮೀನಿಗೆ ಬಾರದಂತೆ ಚಿದಾನಂದ ರಾವ್ ತಡೆ ಒಡ್ಡುತ್ತಿದ್ದಾರೆ ಎನ್ನಲಾಗಿದೆ.
ಸೆ.24 ರಂದು ಮಧ್ಯಾಹ್ನ ಜಮೀನಿಗೆ ತೆರಳಿದ್ದ ವೇಳೆ ರಸ್ತೆಗೆ ಕಲ್ಲು ಇಡಲಾಗಿತ್ತು. ಇದನ್ನು ತೆರವು ಮಾಡಲು ಪ್ರಯತ್ನಿಸಿದಾಗ ಅಡ್ಡಗಟ್ಟಿದ ತಂಡ ಅವಾಚ್ಯ ಪದಗಳಿಂದ ನಿಂದಿಸಿದೆ. ಅಲ್ಲದೆ, ತಾವು ತೆರಳಿದ್ದ ಓಮ್ನಿ ಕಾರಿಗೆ ಹಾನಿ ಮಾಡಿದ್ದಾರೆ ಎಂದು ನಾಗೇಶ್ ರಾವ್ ಬಂಟ್ವಾಳ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ.
Bail matter dispute Mangalore Lawyer harrasing woman with vulgur words and life threatening statements video goes viral. A case has been registered at the Bantwal rural police station. The lawyer has been identided as Chidananda Rao.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 04:31 pm
HK News Staffer
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm