ಬ್ರೇಕಿಂಗ್ ನ್ಯೂಸ್
28-09-21 05:58 pm Mangaluru Correspondent ಕ್ರೈಂ
ಮಂಗಳೂರು, ಸೆ.28: ಬ್ಯಾಂಕಿಗೆ ಹಣ ಕಟ್ಟಲು ತೆರಳುತ್ತಿದ್ದ ಪೆಟ್ರೋಲ್ ಪಂಪ್ ಮ್ಯಾನೇಜರ್ ಮೇಲೆ ಹಲ್ಲೆಗೈದು 4.20 ಲಕ್ಷ ರೂಪಾಯಿ ಹಣವನ್ನು ಸುಲಿಗೆ ಮಾಡಿಕೊಂಡು ಹೋದ ಘಟನೆ ನಗರದ ಚಿಲಿಂಬಿಯಲ್ಲಿ ನಡೆದಿದೆ.
ನಗರದ ಗಾಂಧಿ ನಗರದ ಆಶೀರ್ವಾದ್ ಪೆಟ್ರೋಲ್ ಪಂಪ್ ಮ್ಯಾನೇಜರ್ ಭೋಜಪ್ಪ (57) ಮಧ್ಯಾಹ್ನ 12.30ರ ಸುಮಾರಿಗೆ ಚಿಲಿಂಬಿಯ ಸಾರಸ್ವತ್ ಬ್ಯಾಂಕ್ ಶಾಖೆಗೆ ನಗದು ಕಟ್ಟಲೆಂದು 4.20 ಲಕ್ಷ ಹಣವನ್ನು ಬ್ಯಾಗಿನಲ್ಲಿ ಇಟ್ಟು ಬೈಕಿನಲ್ಲಿ ತೆರಳುತ್ತಿದ್ದರು. ಈ ವೇಳೆ, ಭೋಜಪ್ಪ ಚಿಲಿಂಬಿಯಲ್ಲಿ ಬೈಕನ್ನು ಯು ಟರ್ನ್ ಮಾಡಿ ಬರುತ್ತಿದ್ದಾಗ ಅಲ್ಲಿ ಸ್ವಿಗ್ಗಿ ಟೀ ಶರ್ಟ್ ಹಾಕ್ಕೊಂಡು ಬೈಕಿನಲ್ಲಿ ನಿಂತಿದ್ದ ಇಬ್ಬರು ಕ್ರಿಕೆಟ್ ಬ್ಯಾಟಿನಲ್ಲಿ ಹಲ್ಲೆ ನಡೆಸಿದ್ದಾರೆ.

ಭೋಜಪ್ಪ ಅವರ ತಲೆ, ಭುಜಕ್ಕೆ ಬ್ಯಾಟಿನಲ್ಲಿ ಪೆಟ್ಟು ನೀಡಿದ್ದು, ಅವರಲ್ಲಿದ್ದ ಹಣದ ಗಂಟನ್ನು ಕಿತ್ತುಕೊಂಡು ಬೈಕಿನಲ್ಲಿ ಪರಾರಿಯಾಗಿದ್ದಾರೆ. ಭೋಜಪ್ಪ ತಲೆಗೆ ಹೆಲ್ಮೆಟ್ ಹಾಕಿದ್ದರಿಂದ ಅಪಾಯದಿಂದ ಬಚಾವ್ ಆಗಿದ್ದಾರೆ. ಇಲ್ಲದಿದ್ದರೆ ತಲೆಗೆ ಪೆಟ್ಟು ಬಿದ್ದು ಅಪಾಯಕ್ಕೀಡಾಗುತ್ತಿದ್ದರು. ಭೋಜಪ್ಪ ಅವರು ಸೋಮವಾರ ಪೆಟ್ರೋಲ್ ಪಂಪಿನಲ್ಲಿ ಕಲೆಕ್ಷನ್ ಆಗಿದ್ದ 7.50 ಲಕ್ಷ ನಗದನ್ನು ಬ್ಯಾಂಕಿಗೆ ತೆರಳಿ ಕಟ್ಟಿದ್ದರು. ಇಂದು ಮಧ್ಯಾಹ್ನ ಅದೇ ರೀತಿ ಹಣ ಕಟ್ಟುವುದಕ್ಕಾಗಿ ಬ್ಯಾಂಕಿಗೆ ತೆರಳುತ್ತಿದ್ದಾಗ ಆಗಂತುಕರು ಮೊದಲೇ ಹೊಂಚು ಹಾಕಿದ್ದು ಹಲ್ಲೆಗೈದು ಹಣವನ್ನು ದರೋಡೆ ನಡೆಸಿದ್ದಾರೆ.
ಪೆಟ್ರೋಲ್ ಪಂಪ್ ಅಥವಾ ಬ್ಯಾಂಕ್ ಶಾಖೆಯಿಂದ ಈ ಬಗ್ಗೆ ಮಾಹಿತಿ ಸೋರಿಕೆಯಾಗಿದ್ದರಿಂದಲೇ ಕೃತ್ಯ ನಡೆದಿದೆ ಎನ್ನಲಾಗುತ್ತಿದೆ. ಉರ್ವಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಶೋಧ ನಡೆಸುತ್ತಿದ್ದಾರೆ.
Mangalore Robbers snatch 4.20 lakhs cash from two after assaulting them with cricket bat near Chilimbi. The two were attacked by two persons who came on bike. Robbers had worn swiggy t-shirt. A case has been registered at the Urwa Police station.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
01-11-25 07:27 pm
HK News Desk
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm