ಬ್ರೇಕಿಂಗ್ ನ್ಯೂಸ್
28-09-21 05:58 pm Mangaluru Correspondent ಕ್ರೈಂ
ಮಂಗಳೂರು, ಸೆ.28: ಬ್ಯಾಂಕಿಗೆ ಹಣ ಕಟ್ಟಲು ತೆರಳುತ್ತಿದ್ದ ಪೆಟ್ರೋಲ್ ಪಂಪ್ ಮ್ಯಾನೇಜರ್ ಮೇಲೆ ಹಲ್ಲೆಗೈದು 4.20 ಲಕ್ಷ ರೂಪಾಯಿ ಹಣವನ್ನು ಸುಲಿಗೆ ಮಾಡಿಕೊಂಡು ಹೋದ ಘಟನೆ ನಗರದ ಚಿಲಿಂಬಿಯಲ್ಲಿ ನಡೆದಿದೆ.
ನಗರದ ಗಾಂಧಿ ನಗರದ ಆಶೀರ್ವಾದ್ ಪೆಟ್ರೋಲ್ ಪಂಪ್ ಮ್ಯಾನೇಜರ್ ಭೋಜಪ್ಪ (57) ಮಧ್ಯಾಹ್ನ 12.30ರ ಸುಮಾರಿಗೆ ಚಿಲಿಂಬಿಯ ಸಾರಸ್ವತ್ ಬ್ಯಾಂಕ್ ಶಾಖೆಗೆ ನಗದು ಕಟ್ಟಲೆಂದು 4.20 ಲಕ್ಷ ಹಣವನ್ನು ಬ್ಯಾಗಿನಲ್ಲಿ ಇಟ್ಟು ಬೈಕಿನಲ್ಲಿ ತೆರಳುತ್ತಿದ್ದರು. ಈ ವೇಳೆ, ಭೋಜಪ್ಪ ಚಿಲಿಂಬಿಯಲ್ಲಿ ಬೈಕನ್ನು ಯು ಟರ್ನ್ ಮಾಡಿ ಬರುತ್ತಿದ್ದಾಗ ಅಲ್ಲಿ ಸ್ವಿಗ್ಗಿ ಟೀ ಶರ್ಟ್ ಹಾಕ್ಕೊಂಡು ಬೈಕಿನಲ್ಲಿ ನಿಂತಿದ್ದ ಇಬ್ಬರು ಕ್ರಿಕೆಟ್ ಬ್ಯಾಟಿನಲ್ಲಿ ಹಲ್ಲೆ ನಡೆಸಿದ್ದಾರೆ.

ಭೋಜಪ್ಪ ಅವರ ತಲೆ, ಭುಜಕ್ಕೆ ಬ್ಯಾಟಿನಲ್ಲಿ ಪೆಟ್ಟು ನೀಡಿದ್ದು, ಅವರಲ್ಲಿದ್ದ ಹಣದ ಗಂಟನ್ನು ಕಿತ್ತುಕೊಂಡು ಬೈಕಿನಲ್ಲಿ ಪರಾರಿಯಾಗಿದ್ದಾರೆ. ಭೋಜಪ್ಪ ತಲೆಗೆ ಹೆಲ್ಮೆಟ್ ಹಾಕಿದ್ದರಿಂದ ಅಪಾಯದಿಂದ ಬಚಾವ್ ಆಗಿದ್ದಾರೆ. ಇಲ್ಲದಿದ್ದರೆ ತಲೆಗೆ ಪೆಟ್ಟು ಬಿದ್ದು ಅಪಾಯಕ್ಕೀಡಾಗುತ್ತಿದ್ದರು. ಭೋಜಪ್ಪ ಅವರು ಸೋಮವಾರ ಪೆಟ್ರೋಲ್ ಪಂಪಿನಲ್ಲಿ ಕಲೆಕ್ಷನ್ ಆಗಿದ್ದ 7.50 ಲಕ್ಷ ನಗದನ್ನು ಬ್ಯಾಂಕಿಗೆ ತೆರಳಿ ಕಟ್ಟಿದ್ದರು. ಇಂದು ಮಧ್ಯಾಹ್ನ ಅದೇ ರೀತಿ ಹಣ ಕಟ್ಟುವುದಕ್ಕಾಗಿ ಬ್ಯಾಂಕಿಗೆ ತೆರಳುತ್ತಿದ್ದಾಗ ಆಗಂತುಕರು ಮೊದಲೇ ಹೊಂಚು ಹಾಕಿದ್ದು ಹಲ್ಲೆಗೈದು ಹಣವನ್ನು ದರೋಡೆ ನಡೆಸಿದ್ದಾರೆ.
ಪೆಟ್ರೋಲ್ ಪಂಪ್ ಅಥವಾ ಬ್ಯಾಂಕ್ ಶಾಖೆಯಿಂದ ಈ ಬಗ್ಗೆ ಮಾಹಿತಿ ಸೋರಿಕೆಯಾಗಿದ್ದರಿಂದಲೇ ಕೃತ್ಯ ನಡೆದಿದೆ ಎನ್ನಲಾಗುತ್ತಿದೆ. ಉರ್ವಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಶೋಧ ನಡೆಸುತ್ತಿದ್ದಾರೆ.
Mangalore Robbers snatch 4.20 lakhs cash from two after assaulting them with cricket bat near Chilimbi. The two were attacked by two persons who came on bike. Robbers had worn swiggy t-shirt. A case has been registered at the Urwa Police station.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 02:16 pm
HK News Staffer
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm