ಬ್ರೇಕಿಂಗ್ ನ್ಯೂಸ್
10-09-20 12:52 pm Headline Karnataka News Network ಕ್ರೈಂ
ಅಯೋಧ್ಯೆ, ಸೆಪ್ಟೆಂಬರ್ 10: ರಾಮನ ಜನ್ಮಸ್ಥಾನ ಅಯೋಧ್ಯೆಯಲ್ಲಿ ರಾಮನ ಮಂದಿರಕ್ಕೆ ಅಡಿಗಲ್ಲು ಹಾಕಲಾಗಿದೆ. ದೇಶಾದ್ಯಂತ ರಾಮನ ಭಕ್ತರು ಬಹುಕಾಲದ ಬೇಡಿಕೆ ಬಹುಬೇಗ ಈಡೇರಲೆಂದು ಹಣದ ನೆರವನ್ನೂ ನೀಡುತ್ತಿದ್ದಾರೆ. ಆದರೆ, ಇದೇ ವೇಳೆ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಖಾತೆಗೇ ಕಿಡಿಗೇಡಿಗಳು ಕನ್ನ ಹಾಕಿದ್ದಾರೆ. ನಕಲಿ ಚೆಕ್ ಬಳಸಿ ಬ್ಯಾಂಕಿನಿಂದ ಹಣ ವಿತ್ಡ್ರಾ ಮಾಡಿಕೊಳ್ಳಲಾಗಿದೆ.
ಲಕ್ನೋದ ಬ್ಯಾಂಕ್ನಲ್ಲಿ ಇರುವ ಟ್ರಸ್ಟ್ ಖಾತೆಗಳಿಂದ ಹಣವನ್ನು ಲಪಟಾಯಿಸಲಾಗಿದೆ. ಎರಡು ಖಾತೆಗಳಿಂದ ಈ ಹಣವನ್ನು ವಿತ್ಡ್ರಾ ಮಾಡಲಾಗಿದೆ. ಎರಡು ಬಾರಿ ವಿತ್ಡ್ರಾ ಮಾಡಿದ ಬಳಿಕ ಮೂರನೇ ಬಾರಿಗೆ ಪ್ರಯತ್ನಿಸಿದಾಗ, ಬ್ಯಾಂಕ್ನವರಿಗೆ ಸಂದೇಹ ಬಂದಿದೆ. ಅವರು ಕೂಡಲೇ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರಿಗೆ ಮಾಹಿತಿ ನೀಡಿದ್ದಾರೆ. ಆಗಲೇ ಪ್ರಕರಣ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೊದಲು ಸೆಪ್ಟೆಂಬರ್ 1ರಂದು ಹಣ ವಿತ್ಡ್ರಾ ಮಾಡಿಕೊಳ್ಳಲಾಗಿತ್ತು. ನಂತರ 3ನೇ ತಾರೀಕಿನಂದು ಮತ್ತೆ ಹಣವನ್ನು ವಿತ್ಡ್ರಾ ಮಾಡಿಕೊಳ್ಳಲಾಗಿದೆ. ಮೂರನೇ ಬಾರಿಗೆ ಲಕ್ನೋದ ಬ್ಯಾಂಕ್ ಆಫ್ ಬರೋಡಾದಲ್ಲಿ 9.86 ಲಕ್ಷ ಚೆಕ್ ವಿತ್ ಡ್ರಾ ಮಾಡುವ ಯತ್ನದಲ್ಲಿ ಬ್ಯಾಂಕ್ ಅಧಿಕಾರಿಗಳಿಗೆ ಸಂಶಯ ಬಂದಿದ್ದು ಚಂಪತ್ ರಾಯ್ ಕರೆ ಮಾಡಿದ್ದಾರೆ.
ಸದ್ಯ ಅಪರಿಚಿತರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಶುರು ಮಾಡಿದ್ದಾರೆ. ಈಗಾಗ್ಲೇ ನಕಲಿ ಚೆಕ್ ಬಳಸಿ ಸುಮಾರು 6 ಲಕ್ಷ ರೂಪಾಯಿ ವಿತ್ ಡ್ರಾ ಮಾಡಿರುವ ಬಗ್ಗೆ ಹೇಳಲಾಗುತ್ತಿದೆ. ಅತ್ತ ರಾಮನ ಮಂದಿರದ ಕೆಲಸ ಆಗುತ್ತಿದ್ದರೆ ಇತ್ತ ರಾಮನ ಹೆಸರಿನ ಹಣವನ್ನು ಕಿಡಿಗೇಡಿಗಳು ನುಂಗಲು ಯತ್ನಿಸಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am