ಬ್ರೇಕಿಂಗ್ ನ್ಯೂಸ್
10-09-20 12:52 pm Headline Karnataka News Network ಕ್ರೈಂ
ಅಯೋಧ್ಯೆ, ಸೆಪ್ಟೆಂಬರ್ 10: ರಾಮನ ಜನ್ಮಸ್ಥಾನ ಅಯೋಧ್ಯೆಯಲ್ಲಿ ರಾಮನ ಮಂದಿರಕ್ಕೆ ಅಡಿಗಲ್ಲು ಹಾಕಲಾಗಿದೆ. ದೇಶಾದ್ಯಂತ ರಾಮನ ಭಕ್ತರು ಬಹುಕಾಲದ ಬೇಡಿಕೆ ಬಹುಬೇಗ ಈಡೇರಲೆಂದು ಹಣದ ನೆರವನ್ನೂ ನೀಡುತ್ತಿದ್ದಾರೆ. ಆದರೆ, ಇದೇ ವೇಳೆ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಖಾತೆಗೇ ಕಿಡಿಗೇಡಿಗಳು ಕನ್ನ ಹಾಕಿದ್ದಾರೆ. ನಕಲಿ ಚೆಕ್ ಬಳಸಿ ಬ್ಯಾಂಕಿನಿಂದ ಹಣ ವಿತ್ಡ್ರಾ ಮಾಡಿಕೊಳ್ಳಲಾಗಿದೆ.
ಲಕ್ನೋದ ಬ್ಯಾಂಕ್ನಲ್ಲಿ ಇರುವ ಟ್ರಸ್ಟ್ ಖಾತೆಗಳಿಂದ ಹಣವನ್ನು ಲಪಟಾಯಿಸಲಾಗಿದೆ. ಎರಡು ಖಾತೆಗಳಿಂದ ಈ ಹಣವನ್ನು ವಿತ್ಡ್ರಾ ಮಾಡಲಾಗಿದೆ. ಎರಡು ಬಾರಿ ವಿತ್ಡ್ರಾ ಮಾಡಿದ ಬಳಿಕ ಮೂರನೇ ಬಾರಿಗೆ ಪ್ರಯತ್ನಿಸಿದಾಗ, ಬ್ಯಾಂಕ್ನವರಿಗೆ ಸಂದೇಹ ಬಂದಿದೆ. ಅವರು ಕೂಡಲೇ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರಿಗೆ ಮಾಹಿತಿ ನೀಡಿದ್ದಾರೆ. ಆಗಲೇ ಪ್ರಕರಣ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೊದಲು ಸೆಪ್ಟೆಂಬರ್ 1ರಂದು ಹಣ ವಿತ್ಡ್ರಾ ಮಾಡಿಕೊಳ್ಳಲಾಗಿತ್ತು. ನಂತರ 3ನೇ ತಾರೀಕಿನಂದು ಮತ್ತೆ ಹಣವನ್ನು ವಿತ್ಡ್ರಾ ಮಾಡಿಕೊಳ್ಳಲಾಗಿದೆ. ಮೂರನೇ ಬಾರಿಗೆ ಲಕ್ನೋದ ಬ್ಯಾಂಕ್ ಆಫ್ ಬರೋಡಾದಲ್ಲಿ 9.86 ಲಕ್ಷ ಚೆಕ್ ವಿತ್ ಡ್ರಾ ಮಾಡುವ ಯತ್ನದಲ್ಲಿ ಬ್ಯಾಂಕ್ ಅಧಿಕಾರಿಗಳಿಗೆ ಸಂಶಯ ಬಂದಿದ್ದು ಚಂಪತ್ ರಾಯ್ ಕರೆ ಮಾಡಿದ್ದಾರೆ.
ಸದ್ಯ ಅಪರಿಚಿತರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಶುರು ಮಾಡಿದ್ದಾರೆ. ಈಗಾಗ್ಲೇ ನಕಲಿ ಚೆಕ್ ಬಳಸಿ ಸುಮಾರು 6 ಲಕ್ಷ ರೂಪಾಯಿ ವಿತ್ ಡ್ರಾ ಮಾಡಿರುವ ಬಗ್ಗೆ ಹೇಳಲಾಗುತ್ತಿದೆ. ಅತ್ತ ರಾಮನ ಮಂದಿರದ ಕೆಲಸ ಆಗುತ್ತಿದ್ದರೆ ಇತ್ತ ರಾಮನ ಹೆಸರಿನ ಹಣವನ್ನು ಕಿಡಿಗೇಡಿಗಳು ನುಂಗಲು ಯತ್ನಿಸಿದ್ದಾರೆ.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
14-06-26 09:46 pm
HK News Staffer
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
ದಿನಕ್ಕೆ ಒಂದು ವಾಹನಕ್ಕೆ 200 ಲೀಟರ್ ಡೀಸೆಲ್ ಮಾತ್ರ...
13-06-26 03:01 pm
14-06-26 09:47 pm
HK News Staffer
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
14-06-26 10:30 pm
HK News Staffer
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಅಪಪ್ರಚಾರ; ಸ್ನೇಹಿ...
13-06-26 09:17 pm
ಬೆಂಗಳೂರಿನ ನ್ಯಾಯಮಿತ್ರ ಸಹಕಾರಿ ಬ್ಯಾಂಕ್ ನಲ್ಲಿ ಅನ್...
13-06-26 08:43 pm
ಕಾಲೇಜು ಫೀಸ್ಗೆ ಕೊಟ್ಟ 10 ಸಾವಿರವೇ ಜೀವ ತೆಗೆಯಿತು!...
13-06-26 06:14 pm