ಬ್ರೇಕಿಂಗ್ ನ್ಯೂಸ್
10-09-20 12:52 pm Headline Karnataka News Network ಕ್ರೈಂ
ಅಯೋಧ್ಯೆ, ಸೆಪ್ಟೆಂಬರ್ 10: ರಾಮನ ಜನ್ಮಸ್ಥಾನ ಅಯೋಧ್ಯೆಯಲ್ಲಿ ರಾಮನ ಮಂದಿರಕ್ಕೆ ಅಡಿಗಲ್ಲು ಹಾಕಲಾಗಿದೆ. ದೇಶಾದ್ಯಂತ ರಾಮನ ಭಕ್ತರು ಬಹುಕಾಲದ ಬೇಡಿಕೆ ಬಹುಬೇಗ ಈಡೇರಲೆಂದು ಹಣದ ನೆರವನ್ನೂ ನೀಡುತ್ತಿದ್ದಾರೆ. ಆದರೆ, ಇದೇ ವೇಳೆ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಖಾತೆಗೇ ಕಿಡಿಗೇಡಿಗಳು ಕನ್ನ ಹಾಕಿದ್ದಾರೆ. ನಕಲಿ ಚೆಕ್ ಬಳಸಿ ಬ್ಯಾಂಕಿನಿಂದ ಹಣ ವಿತ್ಡ್ರಾ ಮಾಡಿಕೊಳ್ಳಲಾಗಿದೆ.
ಲಕ್ನೋದ ಬ್ಯಾಂಕ್ನಲ್ಲಿ ಇರುವ ಟ್ರಸ್ಟ್ ಖಾತೆಗಳಿಂದ ಹಣವನ್ನು ಲಪಟಾಯಿಸಲಾಗಿದೆ. ಎರಡು ಖಾತೆಗಳಿಂದ ಈ ಹಣವನ್ನು ವಿತ್ಡ್ರಾ ಮಾಡಲಾಗಿದೆ. ಎರಡು ಬಾರಿ ವಿತ್ಡ್ರಾ ಮಾಡಿದ ಬಳಿಕ ಮೂರನೇ ಬಾರಿಗೆ ಪ್ರಯತ್ನಿಸಿದಾಗ, ಬ್ಯಾಂಕ್ನವರಿಗೆ ಸಂದೇಹ ಬಂದಿದೆ. ಅವರು ಕೂಡಲೇ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರಿಗೆ ಮಾಹಿತಿ ನೀಡಿದ್ದಾರೆ. ಆಗಲೇ ಪ್ರಕರಣ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೊದಲು ಸೆಪ್ಟೆಂಬರ್ 1ರಂದು ಹಣ ವಿತ್ಡ್ರಾ ಮಾಡಿಕೊಳ್ಳಲಾಗಿತ್ತು. ನಂತರ 3ನೇ ತಾರೀಕಿನಂದು ಮತ್ತೆ ಹಣವನ್ನು ವಿತ್ಡ್ರಾ ಮಾಡಿಕೊಳ್ಳಲಾಗಿದೆ. ಮೂರನೇ ಬಾರಿಗೆ ಲಕ್ನೋದ ಬ್ಯಾಂಕ್ ಆಫ್ ಬರೋಡಾದಲ್ಲಿ 9.86 ಲಕ್ಷ ಚೆಕ್ ವಿತ್ ಡ್ರಾ ಮಾಡುವ ಯತ್ನದಲ್ಲಿ ಬ್ಯಾಂಕ್ ಅಧಿಕಾರಿಗಳಿಗೆ ಸಂಶಯ ಬಂದಿದ್ದು ಚಂಪತ್ ರಾಯ್ ಕರೆ ಮಾಡಿದ್ದಾರೆ.
ಸದ್ಯ ಅಪರಿಚಿತರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಶುರು ಮಾಡಿದ್ದಾರೆ. ಈಗಾಗ್ಲೇ ನಕಲಿ ಚೆಕ್ ಬಳಸಿ ಸುಮಾರು 6 ಲಕ್ಷ ರೂಪಾಯಿ ವಿತ್ ಡ್ರಾ ಮಾಡಿರುವ ಬಗ್ಗೆ ಹೇಳಲಾಗುತ್ತಿದೆ. ಅತ್ತ ರಾಮನ ಮಂದಿರದ ಕೆಲಸ ಆಗುತ್ತಿದ್ದರೆ ಇತ್ತ ರಾಮನ ಹೆಸರಿನ ಹಣವನ್ನು ಕಿಡಿಗೇಡಿಗಳು ನುಂಗಲು ಯತ್ನಿಸಿದ್ದಾರೆ.
30-07-26 09:27 pm
HK News Staffer
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
30-07-26 09:24 pm
HK News Staffer
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm
ಪರಿಷತ್ ಸ್ಥಾನ ಕೊಡಿಸುವುದಾಗಿ ಹೇಳಿ ಒಂದೂವರೆ ಕೋಟಿ ಪ...
30-07-26 12:18 pm
ಮಂಗಳೂರು ಪೊಲೀಸರಿಂದ 82 ಕೋಟಿ ರೂ. ಮೌಲ್ಯದ ಡ್ರಗ್ಸ್...
29-07-26 10:45 pm