ಬ್ರೇಕಿಂಗ್ ನ್ಯೂಸ್
29-09-21 03:10 pm Headline Karnataka News Network ಕ್ರೈಂ
ಬೆಂಗಳೂರು, ಸೆ. 29: ಅಪರಾಧ ಪ್ರಕರಣವೊಂದರಲ್ಲಿ ವಿಚಾರಣೆಗೆ ಕರೆತಂದ ಯುವಕನನ್ನು ಠಾಣೆಯಲ್ಲಿಯೇ ಪೊಲೀಸ್ ಪೇದೆಯೊಬ್ಬ ದೊಣ್ಣೆಯಿಂದ ಮನಬಂದಂತೆ ಹಲ್ಲೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದ್ದು ಗ್ರಾಮಾಂತರ ಜಿಲ್ಲಾ ಪೊಲೀಸರ ಮಾನ ಬೀದಿಯಲ್ಲಿ ಹರಾಜು ಹಾಕಿದೆ.
ಪೊಲೀಸರ ದೌರ್ಜನ್ಯ ಸಂಬಂಧ ರಾಜ್ಯ ಮಾನವ ಹಕ್ಕು ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದೆ.

ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದ್ದು, ಅಪ್ರಾಪ್ತನಂತೆ ಕಾಣುವ ಯುವಕನ ಬಟ್ಟೆ ಬಿಚ್ಚಿಸಿ ಕಿಟಕಿ ಮುಂದೆ ನಿಲ್ಲಿಸಿ ದೊಣ್ಣೆಯಿಂದ ಕುಂಡೆ ಮೇಲೆ ವಿಕೃತವಾಗಿ ಹಲ್ಲೆ ಮಾಡಿ ಆ ಬಳಿಕ ಕೂರಿಸಿ ಪಾದಕ್ಕೆ ವಿಕೃತವಾಗಿ ಬಾರಿಸಿದ್ದಾನೆ. ಆತ ಕಾಲಿಗೆ ಬಿದ್ದು ಬೇಡಿಕೊಂಡರೂ ಪೇದೆ ತನ್ನ ದರ್ಪ ಮುಂದುವರೆಸಿದ್ದಾನೆ.

ಯಾವುದೇ ಆರೋಪಿಯನ್ನು ವಶಕ್ಕೆ ಪಡೆದರೆ ವಿಚಾರಣೆಗೆ ಅದರದ್ದೇ ಆದ ನೀತಿ ನಿಯಮಗಳಿವೆ. ಪೊಲೀಸರು ಹಲ್ಲೆ ಮಾಡುವ ವಿಡಿಯೋ ನೋಡಿದರೆ ಎಂಥವರಿಗೂ ಪೊಲೀಸರ ಮೇಲೆ ಸಿಟ್ಟು ಬರುತ್ತೆ. ಪದೇಪದೆ ಬೇಡಿಕೊಂಡರೂ ದೊಣ್ಣೆಯಿಂದ ಹಲ್ಲೆ ಮಾಡಿ ವಿಕೃತಿ ಮೆರೆದಿರುವ ವಿಡಿಯೋ ನೋಡುಗರನ್ನೇ ಬೆಚ್ಚಿ ಬೀಳಿಸುತ್ತದೆ. ನಾವು ನಾಗರಿಕ ಸಮಾಜದಲ್ಲಿ ಬದುಕುತ್ತಿದ್ದೇವಾ ಎಂಬ ಪ್ರಶ್ನೆ ಕಾಡುತ್ತದೆ. ಇನ್ನು ಈ ದೃಶ್ಯವನ್ನು ಸಾರ್ವಜನಿಕರು ವಿಡಿಯೋ ಮಾಡಿಕೊಂಡು ಸಾಮಾಜಿಕ ಜಾಲ ತಾಣದಲ್ಲಿ ಹರಿದು ಬಿಟ್ಟಿದ್ದಾರೆ. ಕರ್ನಾಟಕ ರಾಷ್ಟ್ರ ಸಮಿತಿ ಅಧ್ಯಕ್ಷ ರವಿಕೃಷ್ಣರೆಡ್ಡಿ ಪಕ್ಷದ ಫೇಸ್ ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದು, ಪೊಲೀಸರ ಕೃತ್ಯವನ್ನು ಖಂಡಿಸಿದ್ದಾರೆ.
ವಿಚಾರಣೆ ನೆಪದಲ್ಲಿ ಯುವಕನನ್ನು ಕರೆತಂದು ವಿಕೃತವಾಗಿ ಹಲ್ಲೆ ಮಾಡುವ ವಿಡಿಯೋ ಕುರಿತು ಪ್ರತಿಕ್ರಿಯೆ ನೀಡಿದ ರಾಜ್ಯ ಮಾನವ ಹಕ್ಕು ಅಯೋಗದ ಸದಸ್ಯ ಆರ್.ಕೆ. ದತ್ತಾ ಅವರು, ''ಹೆಬ್ಬಗೋಡಿ ಪೊಲೀಸರು ಹಲ್ಲೆ ಮಾಡುವ ಈ ಕೃತ್ಯದ ಬಗ್ಗೆ ರಾಜ್ಯ ಮಾನವ ಹಕ್ಕು ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ.

ಘಟನೆ ಕುರಿತು ಪ್ರತಿಕ್ರಿಯೆ ನೀಡಿದ ಬೆಂಗಳೂರು ಗ್ರಾಮಾಂತರ ಪೊಲೀಸ್ ಅಧೀಕ್ಷಕ ಡಾ. ಕೋನಾ ವಂಶಿ ಕೃಷ್ಣ, ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಹಲ್ಲೆ ಮಾಡಿರುವ ವಿಡಿಯೋ ನನ್ನ ಗಮನಕ್ಕೆ ಬಂದಿದೆ. ಈ ಕುರಿತು ಪ್ರಾಥಮಿಕ ವಿಚಾರಣೆ ನಡೆಸಿ ವರದಿ ನೀಡುವಂತೆ ಸೂಚಿಸಿದ್ದೇನೆ. ವರದಿ ಆಧರಿಸಿ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.
Youth brutally beaten by Police constable of Hebbagodi Police station Human right case registered. The video of their has gone viral on social media.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm