ಬ್ರೇಕಿಂಗ್ ನ್ಯೂಸ್
30-09-21 05:02 pm Headline Karnataka News Network ಕ್ರೈಂ
ಬೆಂಗಳೂರು, ಸೆ.30: ಇತ್ತೀಚೆಗೆ ಒಂದೇ ಕುಟುಂಬದ ಐವರು ಮನೆಯಲ್ಲಿ ನೇಣು ಬಿಗಿದು ಸಾವಿಗೆ ಶರಣಾಗಿದ್ದ ಘಟನೆ ಭಾರೀ ಸಂಚಲನ ಸೃಷ್ಟಿಸಿತ್ತು. ಹೀಗೆ ಸಾವು ಕಂಡವರ ಪೈಕಿ, ಒಂಬತ್ತು ತಿಂಗಳ ಮಗುವೂ ಇತ್ತು. ಬೆಡ್ಡಿನಲ್ಲಿ ಮಲಗಿಯೇ ಇದ್ದ ಮಗುವಿನ ಸಾವಿನ ಬಗ್ಗೆ ಸಂಶಯವೂ ಹುಟ್ಟಿತ್ತು. ಮಗುವಿಗೆ ಆಹಾರ ಸಿಗದೆ ನಿತ್ರಾಣಗೊಂಡು ಸಾವನ್ನಪ್ಪಿದ್ದಾಗಿ ಸಂಶಯ ಪಡಲಾಗಿತ್ತು. ಆದರೆ, ಮಗುವಿನ ಪೋಸ್ಟ್ ಮಾರ್ಟಂ ವರದಿಯಲ್ಲಿ ಬೇರೆಯದೇ ವರದಿ ಬಂದಿದೆ.
ಮಗು ಉಸಿರು ಕಟ್ಟಿ ಸಾವನ್ನಪ್ಪಿದ್ದಾಗಿ ಪೋಸ್ಟ್ ಮಾರ್ಟಂ ವರದಿ ಬಂದಿದ್ದು, ಈ ಹಿನ್ನೆಲೆಯಲ್ಲಿ ತಾಯಿ ಸಿಂಧೂರಾಣಿ ಸಾಯೋದಕ್ಕೂ ಮುನ್ನ ಮಗುವನ್ನು ನೇಣಿಗೆ ಹಾಕಿಸುವ ಪ್ರಯತ್ನ ಮಾಡಿದ್ದಾಳೆಯೇ ಎಂಬ ಶಂಕೆ ಮೂಡಿದೆ. ನೇಣಿಗೆ ಹಾಕಿಸಿ, ಆನಂತರ ಬೆಡ್ಡಿನಲ್ಲಿ ಮಲಗಿಸಿದ್ದಾಳೆಯೇ ಅಥವಾ ತಲೆದಿಂಬು ಮುಖಕ್ಕೆ ಇಟ್ಟು ಉಸಿರು ಕಟ್ಟಿಸಿ ಸಾಯಿಸಿದ್ದಾರೆಯೇ ಎಂಬ ಶಂಕೆಯೂ ಕೇಳಿಬಂದಿದೆ.

ಮಗು ಸಾಯೋದಕ್ಕೂ ಮುನ್ನ ಉಸಿರು ಕಟ್ಟಿಸಿದ ಬಗ್ಗೆ ವರದಿಯಿದ್ದು, ಪೊಲೀಸರು ಈ ಕುರಿತ ವರದಿ ಕೇಳಿ ಅಚ್ಚರಿಗೆ ಒಳಗಾಗಿದ್ದಾರೆ. ಸೆ.17ರಂದು ಬೆಂಗಳೂರಿನ ತಿಗಳರಪಾಳ್ಯದಲ್ಲಿ ಘಟನೆ ಬೆಳಕಿಗೆ ಬಂದಿತ್ತು. ಮನೆಯವರು ಸತ್ತು ಐದು ದಿನಗಳ ಬಳಿಕ ಪ್ರಕರಣ ಬೆಳಕಿಗೆ ಬಂದಿತ್ತು. ಸ್ಥಳೀಯ ಪತ್ರಿಕೆಯೊಂದರ ಸಂಪಾದಕನಾಗಿದ್ದ ಶಂಕರ್ ಎಂಬವರ ಮನೆಯಾಗಿದ್ದು, ಆತನ ಪತ್ನಿ, ಇಬ್ಬರು ಹೆಣ್ಮಕ್ಕಳು ಮತ್ತು ಒಬ್ಬ ಮಗ ನೇಣು ಬಿಗಿದು ಸಾವಿಗೆ ಶರಣಾಗಿದ್ದರು.

ಶಂಕರ್ ವಾರದ ಹಿಂದೆ ಮನೆಯಲ್ಲಿ ಕುಟುಂಬ ಕಲಹ ಉಂಟಾಗಿ ಮನೆ ಬಿಟ್ಟು ಹೋಗಿದ್ದ. ಆನಂತರ, ಅದೇ ಸಿಟ್ಟಿನಲ್ಲಿ ಮದುವೆಯಾಗಿದ್ದರೂ ತಾಯಿ ಮನೆಯಲ್ಲೇ ಉಳಿದುಕೊಂಡಿದ್ದ ಇಬ್ಬರು ಹೆಣ್ಮಕ್ಕಳು ಮತ್ತು ಅವಿವಾಹಿತ ಮಗ ಸಾವಿಗೆ ಶರಣಾಗಿದ್ದರು. ಮನೆಯಲ್ಲಿ ಡೆತ್ ನೋಟ್ ಸಿಕ್ಕಿದ್ದು, ಶಂಕರ್ ಅವರ ಅನೈತಿಕ ಸಂಬಂಧ ಮತ್ತು ಮನೆಯವರನ್ನು ನಿರ್ಲಕ್ಷ್ಯ ಮಾಡುತ್ತಿದ್ದ ಕಾರಣ ಸಾವಿಗೆ ಶರಣಾಗಿದ್ದೇವೆ ಎಂದು ಪತ್ರದಲ್ಲಿ ಬರೆಯಲಾಗಿತ್ತು.
ಈ ವೇಳೆ, ಮೂರು ವರ್ಷದ ಹೆಣ್ಣು ಮಗು ಮಾತ್ರ ಐದು ದಿನಗಳ ಕಾಲವೂ ಐದು ಶವಗಳ ನಡುವೆ ಬದುಕಿ ಉಳಿದಿದ್ದು, ಪವಾಡ ಎನ್ನುವಂತಾಗಿತ್ತು. ವಾರದ ನಂತರ ಶಂಕರ್, ಮರಳಿ ಮನೆಗೆ ಬಂದು ಲಾಕ್ ಆಗಿದ್ದ ಮನೆಯನ್ನು ಓಪನ್ ಮಾಡಿ ನೋಡಿದಾಗ ಘಟನೆ ಬೆಳಕಿಗೆ ಬಂದಿತ್ತು.
Post mortem report into the death of five family members, including a 9-month-old, in Bengaluru, has revealed that the toddler was suffocated to death, police sources said on Thursday.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 02:16 pm
HK News Staffer
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm