ಬ್ರೇಕಿಂಗ್ ನ್ಯೂಸ್
02-10-21 04:14 pm Mangaluru Correspondent ಕ್ರೈಂ
ಉಳ್ಳಾಲ, ಅ.2: ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಜಯಂತಿ ದಿನವೇ ಗಾಂಧೀಜಿ ಯುವತಿಯೊಂದಿಗಿದ್ದ ಹಳೆಯ ಫೋಟೊ ಒಂದನ್ನು ತುಳುವಿನ ಸಜ್ಜಿಗೆ, ಬಜಿಲ್ ಹಾಡಿಗೆ ಹೆಜ್ಜೆ ಹಾಕಿದ ರೀತಿ ವೀಡಿಯೊ ಸೃಷ್ಟಿಸಿ ಅದನ್ನು ಮೊಬೈಲ್ ಸ್ಟೇಟಸ್ ಹಾಕಿ ವಿಕೃತಿ ಮೆರೆದ ಕಿಡಿಗೇಡಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೊಣಾಜೆ ಠಾಣೆಗೆ ಡಿವೈಎಫ್ ಐ ಕಾರ್ಯಕರ್ತರು ದೂರು ನೀಡಿದ್ದಾರೆ.
ದೇಶದೆಲ್ಲೆಡೆ ಇಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯ ಜನ್ಮ ದಿನವನ್ನ ಆಚರಿಸುತ್ತಿದ್ದರೆ, ಹರೇಕಳ ಗ್ರಾಮದ ಪ್ರಜ್ವಲ್ ಎಂಬ ಯುವಕ ತನ್ನ ಮೊಬೈಲ್ ನಲ್ಲಿ ಗಾಂಧೀಜಿ ಕುರಿತಾಗಿದ್ದ ಎಡಿಟೆಡ್ ವೀಡಿಯೋವನ್ನ ವಾಟ್ಸಪ್ ಸ್ಟೇಟಸ್ ಹಾಕಿ, ವಿಕೃತಿ ಮೆರೆದಿರುವುದಾಗಿ ಡಿವೈಎಫ್ ಐ ಸಂಘಟನೆ ದೂರಿನಲ್ಲಿ ಆರೋಪಿಸಿದೆ.

ಬ್ರಿಟಿಷರ ಆಳ್ವಿಕೆಯ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯನ್ನ ಅವರ ಜನ್ಮದಿನದಂದೇ ಅವಮಾನಿಸಿರುವ ಪ್ರಜ್ವಲ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಈತನ ಈ ಕೃತ್ಯದಿಂದ ಪ್ರದೇಶದಲ್ಲಿ ಶಾಂತಿ ಕದಡುವ ಸ್ಥಿತಿ ಉಂಟಾಗಲಿದ್ದು ಸಂಘರ್ಷಕ್ಕೆ ಎಡೆಮಾಡಿಕೊಡುವ ಅವಕಾಶಗಳು ಬಹಳಷ್ಟು ಇದೆ. ಈತ ರಾಷ್ಟ್ರಪಿತ ಗಾಂಧೀಜಿಯನ್ನು ಅವಮಾನಿಸಿದನೆಂದರೆ ದೇಶವನ್ನೇ ಅವಮಾನಿಸಿದಂತೆ. ಹಾಗಾಗಿ ತಪ್ಪಿತಸ್ಥನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಡಿವೈಎಫ್ ಐ ನಿಯೋಗ ಎಚ್ಚರಿಸಿದೆ.
ದೂರು ನೀಡಿದ ನಿಯೋಗದಲ್ಲಿ DYFI ಉಳ್ಳಾಲ ವಲಯ ಅಧ್ಯಕ್ಷರಾದ ರಫೀಕ್ ಹರೇಕಳ, ಮುಖಂಡರಾದ ಅಶ್ರಪ್ ಹರೇಕಳ, ರಿಝ್ವಾನ್ ಖಂಡಿಗ, ರಶೀದ್, ಬದ್ರುದ್ದೀನ್, ಇಸ್ಮಾಯಿಲ್ ಖಂಡಿಗ ಮೊದಲಾದವರು ಇದ್ದರು.
Mangalore Gandhi photo morphed with woman and posted on status complaint filed at Konaje station. Such a status was posted on Whatsapp and had gone viral on social media. The status was put today as a mark of Gandhi Jayanti.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm