ಬ್ರೇಕಿಂಗ್ ನ್ಯೂಸ್
02-10-21 10:51 pm Mangaluru Correspondent ಕ್ರೈಂ
ಮಂಗಳೂರು, ಅ.2: ಪಿಎಚ್ಡಿ ಮಾಡುತ್ತಿದ್ದ ವಿದ್ಯಾರ್ಥಿನಿಯ ಫೋಟೊ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಟ್ಟಿದ್ದಲ್ಲದೆ ಆಕೆಗೆ ಕರೆ ಮಾಡಿ ಕಿರುಕುಳ ನೀಡುತ್ತಿದ್ದ ಆರೋಪದಲ್ಲಿ ಆಂಧ್ರಪ್ರದೇಶ ಮೂಲದ ಪ್ರಾಧ್ಯಾಪಕನನ್ನು ಮಂಗಳೂರಿನ ಸೈಬರ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಆಂಧ್ರಪ್ರದೇಶದ ಆಚಾರ್ಯ ನಾಗಾರ್ಜುನ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಡಾ. ಕೊಂಡೂರು ಸುಧೀರ್ ಕುಮಾರ್ ಬಂಧಿತ ಆರೋಪಿ.
ವಿದ್ಯಾರ್ಥಿನಿ 2019ರಿಂದ ಮಂಗಳೂರಿನ ಪ್ರಾಧ್ಯಾಪಕಿಯೊಬ್ಬರ ಮಾರ್ಗದರ್ಶನದಲ್ಲಿ ಪಿಎಚ್ಡಿ ಮಾಡುತ್ತಿದ್ದರು. ಇದಕ್ಕೂ ಮುನ್ನ 2018ರಲ್ಲಿ ಪರಿಚಯವಾಗಿದ್ದ ಆರೋಪಿ ಡಾ.ಕೊಂಡೂರು, ತನ್ನನ್ನು ಮಾರ್ಗದರ್ಶಕನನ್ನಾಗಿ ಮಾಡಿಕೊಳ್ಳುವಂತೆ ವಿದ್ಯಾರ್ಥಿನಿಯಲ್ಲಿ ಒತ್ತಾಯಿಸಿದ್ದ. ಅದಕ್ಕೆ ಒಪ್ಪಿ ವಿಶ್ವವಿದ್ಯಾನಿಲಯಕ್ಕೆ ಅನುಮತಿಗಾಗಿ ಕಳುಹಿಸಿದ್ದು ಆ ವ್ಯಕ್ತಿಗೆ ಅರ್ಹತೆಯಿಲ್ಲ ಎನ್ನುವ ಕಾರಣಕ್ಕೆ ಕೋರಿಕೆಯನ್ನು ನಿರಾಕರಿಸಲಾಗಿತ್ತು. ಇದಾದ ಬಳಿಕ ಪ್ರಾಧ್ಯಾಪಕ ವಿದ್ಯಾರ್ಥಿನಿಗೆ ಮತ್ತು ಆಕೆಯ ಮನೆಯವರಿಗೆ ಕಿರುಕುಳ ನೀಡಲು ಆರಂಭಿಸಿದ್ದ.
ಈ ನಡುವೆ, ವಿದ್ಯಾರ್ಥಿನಿಗೆ ತಿಳಿಯದಂತೆ ಆಕೆಯ ಭಾವಚಿತ್ರವನ್ನು ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾನೆ ಎಂದು ಆರೋಪಿಸಿ ಮನೆಯವರು ಮಂಗಳೂರಿನ ಸೈಬರ್ ಠಾಣೆಗೆ 2021ರ ಮಾರ್ಚ್ 10ರಂದು ದೂರು ನೀಡಿದ್ದರು.
ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಆಂಧ್ರಪ್ರದೇಶದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಷರತ್ತು ಬದ್ಧ ಜಾಮೀನಿನಲ್ಲಿ ಬಿಡುಗಡೆಗೊಳಿಸಿದೆ.
Mangalore Sexual Harassment to girl over Phone Calls Andhra Pradesh Professor arrested by Cyber police. The arrested has been idemtoef as Dr Kondoor Sudheer Kumar from Guntur who claims to be a professor at Acharya Nagarjuna University in Andhra.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm