ಬ್ರೇಕಿಂಗ್ ನ್ಯೂಸ್
02-10-21 10:51 pm Mangaluru Correspondent ಕ್ರೈಂ
ಮಂಗಳೂರು, ಅ.2: ಪಿಎಚ್ಡಿ ಮಾಡುತ್ತಿದ್ದ ವಿದ್ಯಾರ್ಥಿನಿಯ ಫೋಟೊ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಟ್ಟಿದ್ದಲ್ಲದೆ ಆಕೆಗೆ ಕರೆ ಮಾಡಿ ಕಿರುಕುಳ ನೀಡುತ್ತಿದ್ದ ಆರೋಪದಲ್ಲಿ ಆಂಧ್ರಪ್ರದೇಶ ಮೂಲದ ಪ್ರಾಧ್ಯಾಪಕನನ್ನು ಮಂಗಳೂರಿನ ಸೈಬರ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಆಂಧ್ರಪ್ರದೇಶದ ಆಚಾರ್ಯ ನಾಗಾರ್ಜುನ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಡಾ. ಕೊಂಡೂರು ಸುಧೀರ್ ಕುಮಾರ್ ಬಂಧಿತ ಆರೋಪಿ.
ವಿದ್ಯಾರ್ಥಿನಿ 2019ರಿಂದ ಮಂಗಳೂರಿನ ಪ್ರಾಧ್ಯಾಪಕಿಯೊಬ್ಬರ ಮಾರ್ಗದರ್ಶನದಲ್ಲಿ ಪಿಎಚ್ಡಿ ಮಾಡುತ್ತಿದ್ದರು. ಇದಕ್ಕೂ ಮುನ್ನ 2018ರಲ್ಲಿ ಪರಿಚಯವಾಗಿದ್ದ ಆರೋಪಿ ಡಾ.ಕೊಂಡೂರು, ತನ್ನನ್ನು ಮಾರ್ಗದರ್ಶಕನನ್ನಾಗಿ ಮಾಡಿಕೊಳ್ಳುವಂತೆ ವಿದ್ಯಾರ್ಥಿನಿಯಲ್ಲಿ ಒತ್ತಾಯಿಸಿದ್ದ. ಅದಕ್ಕೆ ಒಪ್ಪಿ ವಿಶ್ವವಿದ್ಯಾನಿಲಯಕ್ಕೆ ಅನುಮತಿಗಾಗಿ ಕಳುಹಿಸಿದ್ದು ಆ ವ್ಯಕ್ತಿಗೆ ಅರ್ಹತೆಯಿಲ್ಲ ಎನ್ನುವ ಕಾರಣಕ್ಕೆ ಕೋರಿಕೆಯನ್ನು ನಿರಾಕರಿಸಲಾಗಿತ್ತು. ಇದಾದ ಬಳಿಕ ಪ್ರಾಧ್ಯಾಪಕ ವಿದ್ಯಾರ್ಥಿನಿಗೆ ಮತ್ತು ಆಕೆಯ ಮನೆಯವರಿಗೆ ಕಿರುಕುಳ ನೀಡಲು ಆರಂಭಿಸಿದ್ದ.
ಈ ನಡುವೆ, ವಿದ್ಯಾರ್ಥಿನಿಗೆ ತಿಳಿಯದಂತೆ ಆಕೆಯ ಭಾವಚಿತ್ರವನ್ನು ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾನೆ ಎಂದು ಆರೋಪಿಸಿ ಮನೆಯವರು ಮಂಗಳೂರಿನ ಸೈಬರ್ ಠಾಣೆಗೆ 2021ರ ಮಾರ್ಚ್ 10ರಂದು ದೂರು ನೀಡಿದ್ದರು.
ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಆಂಧ್ರಪ್ರದೇಶದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಷರತ್ತು ಬದ್ಧ ಜಾಮೀನಿನಲ್ಲಿ ಬಿಡುಗಡೆಗೊಳಿಸಿದೆ.
Mangalore Sexual Harassment to girl over Phone Calls Andhra Pradesh Professor arrested by Cyber police. The arrested has been idemtoef as Dr Kondoor Sudheer Kumar from Guntur who claims to be a professor at Acharya Nagarjuna University in Andhra.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 02:16 pm
HK News Staffer
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm