ಬ್ರೇಕಿಂಗ್ ನ್ಯೂಸ್
04-10-21 11:00 am Headline Karnataka News Network ಕ್ರೈಂ
ಮುಂಬೈ, ಅ.4 : ಡ್ರಗ್ಸ್ ಪ್ರಕರಣದಲ್ಲಿ ಶಾರುಖ್ ಖಾನ್ ಪುತ್ರನ ಬಂಧನ. ಬಾಲಿವುಡ್ ಬಾದ್ಶಾ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಅನ್ನು ಎನ್ಸಿಬಿಯು ಡ್ರಗ್ಸ್ ಪ್ರಕರಣದಲ್ಲಿ ಬಂಧಿಸಿದೆ. ಮುಂಬೈನಲ್ಲಿ ಕ್ರೂಸ್ ಶಿಪ್ ಒಂದರ ಮೇಲೆ ನಿನ್ನೆ ರಾತ್ರಿ ಎನ್ಸಿಬಿ ಹಾಗೂ ಮುಂಬೈ ಪೊಲೀಸರು ದಾಳಿ ನಡೆಸಿದ್ದರು. ಆ ಕ್ರೂಸ್ ಶಿಪ್ ಪಾರ್ಟಿಯಲ್ಲಿ ಶಾರುಖ್ ಖಾನ್ ಪುತ್ರ ಆರ್ಯನ್ ಸಹ ಇದ್ದರು. ಆರ್ಯನ್ ಹಾಗೂ ಇತರ 8 ಮಂದಿಯನ್ನು ನಿನ್ನೆಯೇ ವಶಕ್ಕೆ ಪಡೆದಿದ್ದ ಎನ್ಸಿಬಿ ಇಂದು ಬಂಧಿಸಿದೆ.
ಹಲವು ಗಂಟೆಗಳ ವಿಚಾರಣೆ ಬಳಿಕ ಇಂದು ಮಧ್ಯಾಹ್ನದ ಬಳಿಕ ಆರ್ಯನ್ ಅನ್ನು ಬಂಧಿಸಲಾಗಿದ್ದು, ಜೆಜೆ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ಮಾಡಿಸಲಾಗಿದೆ. ನಾಳೆ ಆರ್ಯನ್ ಹಾಗೂ ಇತರರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ. ಆರ್ಯನ್ ಪರ ವಕೀಲ ಸತೀಶ್ ಮಾನೆಶಿಂಧೆ ಎನ್ಸಿಬಿ ಕಚೇರಿಗೆ ಆಗಮಿಸಿದ್ದಾರೆ.




ಆರ್ಯನ್ ಅನ್ನು ನಿನ್ನೆಯೇ ಪೊಲೀಸರು ವಶಕ್ಕೆ ಪಡೆದು ಸತತ 7 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ. ಆರ್ಯನ್ನ ಮೊಬೈಲ್ ಮಾಹಿತಿಗಳನ್ನು ಸಹ ಪರಿಶೀಲನೆ ಮಾಡಲಾಗಿದೆ. ಈ ವೇಳೆ ಡ್ರಗ್ಸ್ ಜಾಲದೊಂದಿಗೆ ಆರ್ಯನ್ಗೆ ಸಂಪರ್ಕವಿದೆಯಂದು ತಿಳಿದು ಬಂದಿದೆ.
ಆರ್ಯನ್ ಹಾಗೂ ಇತರರ ವಿಚಾರಣೆ ನಡೆವ ವೇಳೆಯೇ ಮುಂಬೈ ಎನ್ಸಿಬಿ ಕಚೇರಿಗೆ ಡ್ರಗ್ಸ್ ಪೆಡ್ಲರ್ ಒಬ್ಬನನ್ನು ಎನ್ಸಿಬಿ ಸಿಬ್ಬಂದಿ ಕರೆತಂದರು. ಅದೇ ವ್ಯಕ್ತಿ ನಿನ್ನೆ ನಡೆದ ಪಾರ್ಟಿಗೆ ಡ್ರಗ್ಸ್ ಪೂರೈಕೆ ಮಾಡಿದ್ದ ಎನ್ನಲಾಗುತ್ತಿದೆ. ಎನ್ಡಿಪಿಎಸ್ ಸೆಕ್ಷನ್ 27ರ ಅನ್ವಯ ಆರ್ಯನ್ ಅನ್ನು ಬಂಧಿಸಲಾಗಿದ್ದು, ಆರ್ಯನ್ ಜೊತೆಗೆ ಮೂವರನ್ನು ಸಹ ಬಂಧಿಸಲಾಗಿದೆ. ಅರ್ಬಾಜ್ ಖಾನ್ ಹಾಗೂ ಮುನ್-ಮುನ್ ಧಮೇಚ್ಛ ಸಹ ಬಂಧನಕ್ಕೆ ಒಳಪಟ್ಟಿದ್ದಾರೆ. ಇವರ ಜೊತೆಗೆ ಮಹಿಳೆಯೊಬ್ಬರು ಸಹ ಇದ್ದಾರೆ ಎನ್ನಲಾಗುತ್ತಿದೆ. ಬಂಧಿತರಿಗೆ ಜೆಜೆ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ಮಾಡಿಸಲಾಗುತ್ತಿದೆ. ಇಂದೇ ಈ ಮೂವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ.
On October 2, the NCB busted a rave party on the Cordelia cruise ship and detained 8 persons. Shah Rukh Khan's son Aryan Khan is among those being questioned in the Mumbai cruise drug bust case.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm