ಬ್ರೇಕಿಂಗ್ ನ್ಯೂಸ್
04-10-21 05:59 pm Headline Karnataka News Network ಕ್ರೈಂ
Photo credits : Representational
ಶಿವಮೊಗ್ಗ, ಅ.4: ಆಯುರ್ವೇದಿಕ್ ಉತ್ಪನ್ನ ಅಮೃತ್ ನೋನಿ ಬ್ರಾಂಡ್ ಹೆಸರಿನ ಔಷಧಿಯನ್ನು ನಕಲಿಯಾಗಿ ತಯಾರಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನು ಶಿವಮೊಗ್ಗ ಜಿಲ್ಲೆಯ ದೊಡ್ಡಪೇಟೆ ಪೊಲೀಸರು ಭೇದಿಸಿದ್ದಾರೆ.
ಲಕ್ಷಾಂತರ ಮೌಲ್ಯದ ನಕಲಿ ಅಮೃತ್ ನೋನಿ ಔಷಧಿ ಬಾಟಲಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 31 ಬಾಕ್ಸ್ ನಲ್ಲಿ ಇಡಲಾಗಿದ್ದ ಸುಮಾರು ಏಳು ಲಕ್ಷ ಮೌಲ್ಯದ 1100 ನಕಲಿ ನೋನಿ ಔಷಧಿ ಬಾಟಲಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಇತ್ತೀಚೆಗೆ ನಕಲಿ ಅಮೃತ್ ನೋನಿಯನ್ನು ಮಾರುಕಟ್ಟೆಗೆ ಮಾರಾಟ ಮಾಡಲಾಗುತ್ತಿದೆ ಎಂಬ ಅನುಮಾನ ಬಂದಿತ್ತು. ಈ ಬಗ್ಗೆ ಅಮೃತ್ ನೋನಿ ಕಂಪನಿಯ ವ್ಯಾಲ್ಯು ಪ್ರಾಡಕ್ಟ್ ವ್ಯವಸ್ಥಾಪಕ ನಿರ್ದೇಶಕ ಶಶಿಕಾಂತ್ ನಾಡಿಗ್ ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಮಾರ್ನಮಿ ಬೈಲಿನಲ್ಲಿರುವ ಅಶೋಕ್ ಎಂಬವರಿಗೆ ಸೇರಿದ ಫಾರ್ಮಾದಲ್ಲಿ ನಕಲಿ ನೋನಿ ಔಷಧಿಗಳಿರುವ ಖಚಿತ ಮಾಹಿತಿ ಮೇರೆಗೆ ಶಿವಮೊಗ್ಗ ಡಿಎಸ್ಪಿ ಪ್ರಶಾಂತ್ ಮುನ್ನೋಳಿ ಮತ್ತು ದೊಡ್ಡಪೇಟೆ ಇನ್ಸ್ ಸ್ಪೆಕ್ಟರ್ ಹರೀಶ್ ಪಟೇಲ್ ನೇತೃತ್ವದ ತಂಡ ದಾಳಿ ನಡೆಸಿದ್ದು 31 ಬಾಕ್ಸ್ ನಕಲಿ ನೋನಿ ಔಷಧಿಯನ್ನು ವಶಪಡಿಸಿಕೊಂಡಿದೆ.
ಇತ್ತೀಚಿನ ದಿನಗಳಲ್ಲಿ ಮಾರುಕಟ್ಟೆಯಲ್ಲಿ ಹೆಚ್ಚು ಜನಪ್ರಿಯತೆ ಪಡೆದಿರುವ ಅಮೃತ್ ನೋನಿ ಔಷಧಿಯ ಬ್ರಾಂಡಿಗೂ ಖದೀಮರು ಕನ್ನ ಹಾಕಿರುವುದು ಈ ಮೂಲಕ ಬಯಲಾಗಿದೆ. ಫಾರ್ಮಾಸಿಸ್ಟ್ ಅಶೋಕ್, ನಕಲಿ ಅಮೃತ್ ನೋನಿ ಔಷಧಿಯನ್ನು ಚಂಡೀಗಢದಿಂದ ತರಿಸುತ್ತಿರುವುದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ಚಂಡೀಗಢದಲ್ಲಿ ಯಾರು ನಕಲಿ ಔಷಧಿ ತಯಾರಿಸುತ್ತಿದ್ದಾರೆ, ಯಾರು ಪೂರೈಕೆ ಮಾಡುತ್ತಿದ್ದಾರೆ ಎನ್ನುವ ಬಗ್ಗೆ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.
Amruth Noni is said to be a fake health product Police bust fake factory in Chandigarh. 1100 bottles Amruth nony products seized in Shimoga for sale that was kept illegally.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm