ಬ್ರೇಕಿಂಗ್ ನ್ಯೂಸ್
05-10-21 04:24 pm Mangaluru Correspondent ಕ್ರೈಂ
ಉಳ್ಳಾಲ, ಅ.5: ಬಸ್ಸಿನಿಂದ ಇಳಿದು ಮನೆ ಕಡೆಗೆ ತೆರಳುತ್ತಿದ್ದ ಕಾಲೇಜು ವಿದ್ಯಾರ್ಥಿನಿಯನ್ನು ಅಡ್ಡಗಟ್ಟಿ ಐ ಲವ್ ಯೂ ಅಂತ ಹೇಳಿ ಕೈ ಎಳೆದು ಅಪ್ಪಿಕೊಳ್ಳಲೆತ್ನಿಸಿದ ಅನ್ಯಕೋಮಿನ ಯುವಕನನ್ನು ಕೊಣಾಜೆ ಪೊಲೀಸರು ವಶಕ್ಕೆ ಪಡೆದ ಘಟನೆ ಹರೇಕಳ ಗ್ರಾಮದಲ್ಲಿ ನಡೆದಿದೆ.
ಅಡ್ಯಾರ್ ಕಣ್ಣೂರು ನಿವಾಸಿ ಯಾಕೂಬ್ (43) ಬಂಧಿತ ಕಾಮುಕ. ವಿದ್ಯಾರ್ಥಿನಿ ಇಂದು ಮಧ್ಯಾಹ್ನ ಹರೇಕಳ ಗ್ರಾಮದ ಮಿಷನ್ ಕಂಪೌಂಡ್ ಬಸ್ ನಿಲ್ದಾಣದಲ್ಲಿ ಇಳಿದು ಕಲ್ಲೈ, ವಡ್ಡೆದಗುರಿ ದಾರಿಯಾಗಿ ಮನೆಯತ್ತ ಹೆಜ್ಜೆ ಹಾಕುತ್ತಿದ್ದ ವೇಳೆ ಯಾಕೂಬ್ ಅಡ್ಡಗಟ್ಟಿದ್ದಾನೆ. ಐ ಲವ್ ಯೂ ಅಂತ ಹೇಳಿ ಆಕೆಯ ಕೈ ಎಳೆದು ಅಪ್ಪಿಕೊಳ್ಳಲು ಮುಂದಾಗಿದ್ದು ಪ್ರತಿಭಟಿಸಿದ ಯುವತಿ ಕಾಮುಕನಿಂದ ತಪ್ಪಿಸಿ ಮಂದಕ್ಕೆ ಸಾಗಿದ್ದಾಳೆ. ಪಟ್ಟು ಬಿಡದ ಕಾಮುಕ ಯಾಕೂಬ್ ಪೊದೆಗಳಲ್ಲಿ ಅಡಗಿ ಯುವತಿಗೆ ಅಶ್ಲೀಲ ಸನ್ನೆಗೈದಿದ್ದು ಯುವತಿ ಬೊಬ್ಬೆ ಹೊಡೆದಿದ್ದಾಳೆ. ಯುವತಿಯ ಬೊಬ್ಬೆ ಕೇಳಿದ ಗ್ರಾಮಸ್ಥರು ಕಾಮುಕನನ್ನ ಹಿಡಿಯಲು ಯತ್ನಿಸಿದ್ದು ಕೊಣಾಜೆ ಪೊಲೀಸರಿಗೂ ಮಾಹಿತಿ ನೀಡಿದ್ದಾರೆ. ಬಳಿಕ ಎಲಿಯಾರ್ ಪದವು ಎಂಬಲ್ಲಿ ಆರೋಪಿ ಯಾಕೂಬನನ್ನ ಗ್ರಾಮಸ್ಥರು ಹಿಡಿದು ಕೊಣಾಜೆ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.
ಬಂಧಿತ ಆರೋಪಿ ಯಾಕೂಬ್ ಗೆ ದೇರಳಕಟ್ಟೆಯ ಅಡ್ಕರೆ ಎಂಬಲ್ಲಿ ಸಂಬಂಧಿಗಳ ಮನೆಯಿದೆ. ಅಲ್ಲಿಗೆ ಬಂದಿದ್ದ ವೇಳೆ ಘಟನೆ ನಡೆದಿದೆ. ಲಾಕ್ಡೌನ್ ವೇಳೆ ಯಾಕೂಬ್ ಕೊಣಾಜೆ ಪರಂಡೆಯ ಉಳ್ಳಾಲ್ತಿ ಅಮ್ಮನವರ ಕ್ಷೇತ್ರದಲ್ಲಿ ಕಳ್ಳತನಕ್ಕೆ ಯತ್ನಿಸಿ ಮಾನಸಿಕ ಅಸ್ವಸ್ಥನಂತೆ ನಟಿಸಿದ್ದ. ಈತನ ವಿರುದ್ಧ ಕೊಣಾಜೆ ಠಾಣೆಯಲ್ಲಿ ಈ ಹಿಂದೆಯೂ ಲೈಂಗಿಕ ಕಿರುಕುಳ ಪ್ರಕರಣವೂ ದಾಖಲಾಗಿತ್ತು.
Mangalore Man tries to Misbehave with Interfaith college-going Girl while getting down from the Bus. Konaje Police who reached the spot has taken him to Custody. Adyar Resident Ayub (43) is the man taken to custody.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 02:16 pm
HK News Staffer
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm