ಬ್ರೇಕಿಂಗ್ ನ್ಯೂಸ್
07-10-21 12:23 pm Mangaluru Correspondent ಕ್ರೈಂ
ಉಳ್ಳಾಲ, ಅ.7: ರಬ್ಬರ್ ತೋಟದ ನಡುವಲ್ಲಿರುವ ಒಂಟಿ ಬಂಗಲೆಗೆ ನುಗ್ಗಿದ ಕಳ್ಳರು ಸುಮಾರು ಒಂದೂವರೆ ಲಕ್ಷಕ್ಕೂ ಹೆಚ್ಚು ಬೆಲೆ ಬಾಳುವ 5 ಹಿತ್ತಾಳೆಯ ದೀಪಗಳನ್ನ ಕದ್ದೊಯ್ದ ಘಟನೆ ಬಬ್ಬುಕಟ್ಟೆ ಸಮೀಪದ ಚಂದಪ್ಪ ಎಸ್ಟೇಟ್ ನಲ್ಲಿ ನಡೆದಿದೆ.
ದುಬೈನಲ್ಲಿ ವಾಸವಿರುವ ಸುಜಾತ ಎಂಬವರಿಗೆ ಸೇರಿದ ಯಾರೂ ವಾಸವಿಲ್ಲದ ಒಂಟಿ ಬಂಗಲೆ ಮನೆಯ ಹಿಂಬಾಗಿಲನ್ನ ಪಿಕ್ಕಾಸಲ್ಲಿ ಮುರಿದು ಕಳ್ಳತನ ನಡೆಸಲಾಗಿದೆ. ಮೊನ್ನೆ ರಾತ್ರಿ ಘಟನೆ ನಡೆದಿದೆ ಎಂದು ಶಂಕಿಸಲಾಗಿದೆ. ನಿನ್ನೆ ರಾತ್ರಿ ಬಂಗಲೆಯ ಕೋಣೆಯ ದೀಪ ಉರಿಯುವುದನ್ನ ಹತ್ತಿರದ ನಿವಾಸಿಯಾಗಿರುವ ಸುಜಾತ ಅವರ ಅಣ್ಣ ವಕೀಲ ಗಂಗಾಧರ್ ಉಳ್ಳಾಲ್ ಅವರು ಗಮಿನಿಸಿದ್ದು ಬಂಗಲೆಯೊಳಗೆ ಹೋದಾಗ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ.









ಬಂಗಲೆಯ ಹಿಂಬಾಗಿಲಿನ ಬಳಿಯಲ್ಲೇ ಇದ್ದ ಪಿಕ್ಕಾಸಿನಲ್ಲಿ ಕಬ್ಬಿಣದ ಸಲಾಕೆಯ ಗೇಟನ್ನು ಮುರಿದು ಕಳ್ಳರು ಒಳ ಹೊಕ್ಕಿದ್ದಾರೆ. ಮನೆಯ ಹಾಲಲ್ಲಿದ್ದ ಎತ್ತರದ ಮೂರು ಹಿತ್ತಾಳೆಯ ದೀಪ ಮತ್ತು ದೇವರ ಕೋಣೆಯಲ್ಲಿದ್ದ ಎರಡು ಸಣ್ಣ ಹಿತ್ತಾಳೆಯ ದೀಪಗಳನ್ನ ಕದ್ದೊಯ್ದಿದ್ದಾರೆ. ಮನೆಯ ಕಪಾಟುಗಳನ್ನ ಕಳ್ಳರು ತಡಕಾಡಿದ್ದು ಮನೆಯೊಳಗೆ ಯಾವುದೇ ನಗ, ನಗದು ಸಿಗದೆ ದೀಪಗಳನ್ನ ಎಗರಿಸಿ ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಉಳ್ಳಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿದ್ದಾರೆ.
ನಿರ್ಜನ ಎಸ್ಟೇಟಲ್ಲಿ ಸಿಸಿ ಕ್ಯಾಮೆರಾ ವರ್ಕಿಂಗ್ ಇಲ್ಲ
ಬಬ್ಬಕಟ್ಟೆಯಿಂದ-ರಾಣಿಪುರ ಸಂಪರ್ಕದ ಒಳ ನಿರ್ಜನ ರಸ್ತೆಯ ನಡುವಲ್ಲಿ ಚಂದಪ್ಪ ಎಸ್ಟೇಟ್ ಇದ್ದು ಇಲ್ಲಿ ಉಳ್ಳಾಲ ನಗರಸಭೆ ಆಡಳಿತ ಹಾಕಿಸಿದ್ದ ಸಿಸಿ ಕ್ಯಾಮೆರಾಗಳು ಕೆಲಸ ಮಾಡುತ್ತಿಲ್ಲ ಎನ್ನಲಾಗುತ್ತಿದೆ. ಇಂತಹ ನಿರ್ಜನ ಪ್ರದೇಶದಲ್ಲಿ ಕೂಡಲೇ ಸಿಸಿ ಕ್ಯಾಮೆರಾ ಅಳವಡಿಸಬೇಕೆಂದು ಕಳ್ಳತನ ನಡೆದ ಮನೆ ಮಾಲಕಿ ಸುಜಾತ ಅವರ ಸಹೋದರ ನಗರ ಸದಸ್ಯರಾದ ದಿನಕರ ಉಳ್ಳಾಲ್ ಆಗ್ರಹಿಸಿದ್ದಾರೆ.
Thokottu Burglars enter bungalow, FIve steal brass lamps worth lakhs have been stolen. Ullal police have visited the spot and are now investigating the case.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 04:31 pm
HK News Staffer
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm