ಬ್ರೇಕಿಂಗ್ ನ್ಯೂಸ್
15-10-21 09:20 pm Headline Karnataka News Network ಕ್ರೈಂ
ಲಕ್ನೋ, ಅ.15: ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಾರ್ಟಿ ಜಿಲ್ಲಾಧ್ಯಕ್ಷನೇ ತನ್ನ ಪುತ್ರಿಯ ಮೇಲೆ ಅತ್ಯಾಚಾರ ನಡೆಸಿದ್ದಲ್ಲದೆ, ಹಣಕ್ಕಾಗಿ ರಾಜಕೀಯ ನಾಯಕರ ಜೊತೆಗೆ ಸಹಕರಿಸುವಂತೆ ಬಲವಂತ ಪಡಿಸಿದ ಘಟನೆ ಬೆಳಕಿಗೆ ಬಂದಿದ್ದು 28 ಮಂದಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಲಲಿತ್ ಪುರ ಜಿಲ್ಲೆಯಲ್ಲಿ ಘಟನೆ ಬೆಳಕಿಗೆ ಬಂದಿದೆ. 11ನೇ ಕ್ಲಾಸ್ ಓದುತ್ತಿರುವ ಅಪ್ರಾಪ್ತ ಬಾಲಕಿ ಸಂತ್ರಸ್ತೆಯಾಗಿದ್ದು, ತನ್ನ ಮೇಲೆ ಅತ್ಯಾಚಾರ ನಡೆಸಿರುವ 28 ಮಂದಿ ವಿರುದ್ಧ ದೂರು ನೀಡಿದ್ದಾಳೆ. ಈಕೆಯ ತಂದೆ ತಿಲಕ್ ಯಾದವ್ ಸಮಾಜವಾದಿ ಪಾರ್ಟಿ ಜಿಲ್ಲಾಧ್ಯಕ್ಷನಾಗಿದ್ದು, ಆತನೇ ಮೊದಲ ಬಾರಿಗೆ ಪುತ್ರಿಯ ಮೇಲೆ ಅತ್ಯಾಚಾರ ಎಸಗಿದ್ದ. 6ನೇ ತರಗತಿಯಲ್ಲಿದ್ದಾಗ ಮೊದಲ ಬಾರಿಗೆ ಅತ್ಯಾಚಾರ ಎಸಗಿದ್ದು, ಆನಂತರ ಆಗಿಂದಾಗ್ಗೆ ತನ್ನ ಮೇಲೆ ಅತ್ಯಾಚಾರ ನಡೆಸುತ್ತಿದ್ದ. ಆನಂತರ ತನ್ನ ರಾಜಕೀಯ ಸ್ನೇಹಿತರಿಗೆ ಹಣಕ್ಕಾಗಿ ತನ್ನನ್ನು ಒಪ್ಪಿಸಿದ್ದ ಎಂದು ದೂರಿನಲ್ಲಿ ತಿಳಿಸಿದ್ದಾಳೆ.
ಅಲ್ಲದೆ, ತಂದೆಯೇ ತಾನು ಹೇಳುತ್ತಿದ್ದ ಎಲ್ಲರ ಜೊತೆಗೂ ಲೈಂಗಿಕ ಸಂಬಂಧ ಒಪ್ಪಿಸುವಂತೆ ಬಲವಂತ ಪಡಿಸುತ್ತಿದ್ದ. ಸಮಾಜವಾದಿ ಪಾರ್ಟಿಯ ಜಿಲ್ಲಾಧ್ಯಕ್ಷ ತಿಲಕ್ ಯಾದವ್, ಆತನ ಮೂವರು ಕಿರಿಯ ಸೋದರರು, ಬಿಎಸ್ಪಿ ಪಕ್ಷದ ಜಿಲ್ಲಾಧ್ಯಕ್ಷ ದೀಪಕ್ ಅಹಿರ್ವಾರ್, ಮತ್ತೊಬ್ಬ ಬಿಎಸ್ಪಿ ಲೀಡರ್ ನೀರಜ್ ತಿವಾರಿ, ಆತನ ಸಂಬಂಧಿಕರು ಕೂಡ ಅತ್ಯಾಚಾರ ನಡೆಸಿದ ಆರೋಪಿಗಳಲ್ಲಿ ಸೇರಿದ್ದಾರೆ.
ಈ ಬಗ್ಗೆ ಯಾರಿಗಾದ್ರೂ ಮಾಹಿತಿ ನೀಡಿದರೆ, ತಾಯಿಯನ್ನು ಕೊಲ್ಲುವುದಾಗಿ ತಂದೆ ಬೆದರಿಸಿದ್ದ. ಬಾಲಕಿಯ ದೂರಿನಂತೆ ತಿಲಕ್ ಯಾದವ್ ಸೇರಿ 28 ಮಂದಿ ವಿರುದ್ಧ ಪೋಕ್ಸೋ ಕಾಯ್ದೆ ಸೇರಿದಂತೆ ಅತ್ಯಾಚಾರ, ಹಲ್ಲೆ, ಲೈಂಗಿಕ ಕಿರುಕುಳ ಆರೋಪದಲ್ಲಿ ಪ್ರಕರಣ ದಾಖಲಾಗಿದೆ.
ಬಾಲಕಿಯ ಹೇಳಿಕೆಯನ್ನು ದಾಖಲಿಸಿದ್ದೇವೆ. ವೈದ್ಯಕೀಯ ಪರೀಕ್ಷೆಯನ್ನು ನಡೆಸುತ್ತೇವೆ. ಗಂಭೀರ ವಿಚಾರ ಆಗಿರುವ ಕಾರಣ ಎಲ್ಲ ಕೋನಗಳಿಂದ ತನಿಖೆ ನಡೆಸಲಾಗುವುದು. ಸಾಕ್ಷ್ಯಾಧಾರ ಕಲೆಹಾಕಿ, ಕ್ರಮ ಜರುಗಿಸಲಾಗುವುದು ಎಎಸ್ಪಿ ಗಿರಿಜೇಶ್ ಕುಮಾರ್ ತಿಳಿಸಿದ್ದಾರೆ. ಇದೇ ವೇಳೆ, ಬಾಲಕಿಯ ತಂದೆ, ಸಮಾಜವಾದಿ ಪಾರ್ಟಿ ಜಿಲ್ಲಾಧ್ಯಕ್ಷ ತಿಲಕ್ ಯಾದವ್ ತನ್ನ ಮೇಲಿನ ಆರೋಪವನ್ನು ನಿರಾಕರಿಸಿದ್ದಾನೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಹೇಳಿಕೆಯ ವಿಡಿಯೋ ಹಂಚಿಕೊಂಡಿರುವ, ಆರೋಪಗಳೆಲ್ಲ ಆಧಾರರಹಿತ. ನನ್ನ ಹೆಸರು ಕೆಡಿಸಲು ಯಾರೋ ತಂತ್ರ ಹೆಣೆದಿದ್ದಾರೆ. ಆದರೂ ತನಿಖೆ ಎದುರಿಸುತ್ತೇನೆ ಎಂದಿದ್ದಾರೆ.
The Uttar Pradesh Police booked 28 people for allegedly raping a Class 11 student in the state's Lalitpur district. The father of the victim, the Samajwadi Party (SP) district president and Bahujan Samaj Party (BSP) district president are among the 28 accused.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm