ಬ್ರೇಕಿಂಗ್ ನ್ಯೂಸ್
17-10-21 11:51 am Headline Karnataka News Network ಕ್ರೈಂ
ಬೆಂಗಳೂರು, ಅ.17: ಬೆಂಗಳೂರಿಗೆ ಹೊರಟಿದ್ದ ಟ್ರಕ್ನಿಂದ 7 ಕೋಟಿ ರೂಪಾಯಿ ಮೌಲ್ಯದ ಸುಮಾರು 9,000 ಮೊಬೈಲ್ ಫೋನ್ಗಳನ್ನು ಲೂಟಿ ಮಾಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ದುಷ್ಕರ್ಮಿಗಳು ಚಾಲಕನನ್ನು ಥಳಿಸಿ ವಾಹನದಿಂದ ಹೊರಕ್ಕೆ ಎಸೆದು ಮೊಬೈಲ್ ಲೂಟಿ ಮಾಡಿದ್ದಾರೆ.
ಒಪ್ಪೋ ಮೊಬೈಲ್ ಕಂಪನಿಯ ಮ್ಯಾನೇಜರ್ ಸಚಿನ್ ಮಾನವ್ ಈ ಬಗ್ಗೆ ದೂರು ಸಲ್ಲಿಸಿದ್ದಾರೆ. ಫರೂಖಾಬಾದ್ ಜಿಲ್ಲೆಯ ಚಾಲಕ ಮುನೀಶ್ ಯಾದವ್ ಅವರು ಅಕ್ಟೋಬರ್ 5 ರಂದು ಬೆಳಗ್ಗೆ ಗ್ರೇಟರ್ ನೋಯ್ಡಾದಿಂದ ಮೊಬೈಲ್ಗಳನ್ನು ತುಂಬಿದ್ದ ಟ್ರಕ್ ಅನ್ನು ತೆಗೆದುಕೊಂಡು ಬೆಂಗಳೂರಿಗೆ ಹೊರಟಿದ್ದರು. ಗ್ವಾಲಿಯರ್ ಬೈಪಾಸ್ನಲ್ಲಿ ಇಬ್ಬರು ಪ್ರಯಾಣಿಕರ ಸೋಗಿನಲ್ಲಿ ವಾಹನವನ್ನು ಹತ್ತಿದ್ದಾರೆ.
ಟ್ರಕ್ ಝಾನ್ಸಿಯ ಬಬಿನಾ ಟೋಲ್ ಅನ್ನು ದಾಟಿದ ತಕ್ಷಣ, ದುಷ್ಕರ್ಮಿಗಳು ಚಾಲಕನನ್ನು ಥಳಿಸಿ ಮಧ್ಯಪ್ರದೇಶದ ಶಿಯೋಪುರ್ ಜಿಲ್ಲೆಯಲ್ಲಿ ವಾಹನದಿಂದ ಹೊರಗೆ ಎಸೆದು ಟ್ರಕ್ನೊಂದಿಗೆ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಆಬಳಿಕ ಶಿಯೋಪುರ್ ಜಿಲ್ಲೆಯ ಮಾನ್ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದುಷ್ಕರ್ಮಿಗಳು ಖಾಲಿ ಟ್ರಕ್ ಅನ್ನು ಬಿಟ್ಟು ಪರಾರಿಯಾಗಿದ್ದಾರೆ. ಈ ಸಂಬಂಧ ದೂರು ನೀಡಲು ಮಧ್ಯಪ್ರದೇಶ ಪೊಲೀಸರನ್ನು ಸಂಪರ್ಕಿಸಿದ್ದು, ದೂರು ದಾಖಲಿಸಿಕೊಳ್ಳಲು ಅವರು ನಿರಾಕರಿಸಿದರು ಎಂದು ದೂರುದಾರರು ಆರೋಪಿಸಿದ್ದಾರೆ. ಬಳಿಕ, ಆಗ್ರಾದಲ್ಲಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಿಗೆ ದೂರು ನೀಡಲಾಗಿದ್ದು, ನಂತರ ಪ್ರಕರಣ ದಾಖಲಿಸಲಾಗಿದೆ ಎಂದವರು ಹೇಳಿದ್ದಾರೆ.
ಸದ್ಯ, ಮಧ್ಯಪ್ರದೇಶದ ಮಾನ್ಪುರ್ ಪೊಲೀಸರ ವಶದಲ್ಲಿ ಟ್ರಕ್ ಇದೆ. ಟ್ರಕ್ನಲ್ಲಿ ರಿಯಾಲಿಟಿ ಮತ್ತು ಒಪ್ಪೊ ಕಂಪನಿಯ 8,990 ಮೊಬೈಲ್ ಫೋನ್ಗಳಿದ್ದವು. ಅವುಗಳ ಮೌಲ್ಯ ಸುಮಾರು ₹7 ಕೋಟಿ ಎಂದು ಎಸ್ಪಿ ತಿಳಿಸಿದ್ದಾರೆ.
Unidentified people looted nearly 9,000 mobile phones worth ₹ 7 crore from a Bengaluru-bound truck and allegedly attacked the driver by beating him up and throwing him out of the vehicle, police in Uttar Pradesh's Mathura said on Saturday. The incident took place on October 5 in Madhya Pradesh's Sheopur district but a case was registered in Uttar Pradesh's Mathura.
23-08-25 10:40 pm
Bangalore Correspondent
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
23-08-25 04:58 pm
HK News Desk
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
23-08-25 10:22 pm
Mangalore Correspondent
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
Veerendra Heggade Reacts, Dharmasthala News:...
23-08-25 07:25 pm
ಆನಂದಾಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ "ಡೆನ್ನ ಡೆ...
23-08-25 07:02 pm
Mask Man Dharmasthala, Arrest, SIT: ಧರ್ಮಸ್ಥಳ...
23-08-25 03:04 pm
23-08-25 10:49 pm
Mangalore Correspondent
Sujatha Bhat, SIT, Dharmasthala Case; "ಸುಳ್ಳಜ...
23-08-25 06:21 pm
Dharmasthala Mask Man Arrest, SIT: ಧರ್ಮಸ್ಥಳ ಪ...
23-08-25 11:11 am
ಕ್ಲಾಸ್ ನಲ್ಲಿ ಹೊಡೆದಿದ್ದಕ್ಕೆ ಶಿಕ್ಷಕನ ಮೇಲೆ 9ನೇ ತ...
22-08-25 09:57 pm
Lucky Scheme, Shine Enterprises, Arrest, Mang...
22-08-25 09:17 pm