ಬ್ರೇಕಿಂಗ್ ನ್ಯೂಸ್
17-10-21 03:26 pm Mangaluru Correspondent ಕ್ರೈಂ
ಮಂಗಳೂರು, ಅ.17: ನಗರ ಹೊರವಲಯದ ಬೈಕಂಪಾಡಿಯ ಕರ್ಕೇರ ಮೂಲಸ್ಥಾನ ಜಾರಂದಾಯ ದೈವಸ್ಥಾನ ಮತ್ತು ನಾಗಬ್ರಹ್ಮ ಪೀಠಕ್ಕೆ ದುಷ್ಕರ್ಮಿಗಳು ಹಾನಿಗೈದ ಘಟನೆ ಶನಿವಾರ ರಾತ್ರಿ ನಡೆದಿದೆ.
ಯಾರೋ ಕಿಡಿಗೇಡಿಗಳು ದೈವಸ್ಥಾನದ ಬಾಗಿಲು ಒಡೆದು ನುಗ್ಗಿದ್ದು ಕಳವಿಗೆ ಯತ್ನಿಸಿದ್ದಾರೆ. ಕಾಣಿಕೆ ಡಬ್ಬಿ ಒಡೆದು ಹಣ ಇದೆಯೇ ಎಂದು ತಡಕಾಡಿದ್ದಾರೆ. ಅಲ್ಲದೆ, ದೈವಸ್ಥಾನದ ಅಂಗಣದಲ್ಲಿದ್ದ ನಂದಿ ವಿಗ್ರಹ ಮತ್ತು ನಾಗನ ಕಲ್ಲಿಗೆ ಕಲ್ಲೆಸೆದು ಹಾನಿ ಮಾಡಿದ್ದಾರೆ. ಒಳಗಿದ್ದ ಇನ್ನಿತರ ವಸ್ತುಗಳನ್ನು ಹೊರಗೆ ಎಸೆದಿದ್ದಾರೆ.
ಧಾರ್ಮಿಕ ಕೇಂದ್ರವನ್ನು ಅಪವಿತ್ರಗೊಳಿಸುವ ಉದ್ದೇಶದಿಂದಲೇ ಹಾನಿ ಮಾಡಿರುವಂತೆ ಕಂಡುಬಂದಿದೆ. ದೈವಸ್ಥಾನದ ಬಾಗಿಲು ಒಡೆದು ಹಾಕಿದ್ದು ಹಾನಿ ಮಾಡಿದ್ದಾರೆ. ಇಂದು ಬೆಳಗ್ಗೆ ಸ್ಥಳೀಯ ಭಕ್ತರು ಕೃತ್ಯ ಗಮನಿಸಿದ್ದು ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಪಣಂಬೂರು ಪೊಲೀಸರು ಸ್ಥಳಕ್ಕಾಗಮಿಸಿ, ಪರಿಶೀಲನೆ ನಡೆಸಿದ್ದಾರೆ. ಘಟನೆ ಬಗ್ಗೆ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು ಕಿಡಿಗೇಡಿಗಳ ಬಂಧನಕ್ಕೆ ಒತ್ತಾಯಿಸಿದ್ದಾರೆ.
ನಾಲ್ಕು ತಿಂಗಳ ಹಿಂದೆ, ಇದೇ ರೀತಿ ಮಂಗಳೂರು ನಗರ ಆಸುಪಾಸಿನಲ್ಲಿ ದೈವಸ್ಥಾನದ ಅಪವಿತ್ರಗೊಳಿಸಿದ ಕೃತ್ಯಗಳು ನಡೆದಿದ್ದವು. ಉಳ್ಳಾಲದಲ್ಲಿ ಇಬ್ಬರನ್ನು ಬಂಧಿಸಿದ್ದು ಬಿಟ್ಟರೆ ಬೇರೆ ಬೇರೆ ಕಡೆ ನಡೆದಿರುವ ಕೃತ್ಯಗಳ ಆರೋಪಿಗಳ ಪತ್ತೆ ಆಗಿಲ್ಲ..
Miscreants damaged the Baikampady Karkera Moolasthana Jarandaya Daivastana and Naga Brahma Peeta, reportedly late night on Saturday October 16. Many incidents of vandalizing religious places are taking place in and around the city of late. This hurts the sentiments of people belonging to respective religion.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm