ಬ್ರೇಕಿಂಗ್ ನ್ಯೂಸ್
17-10-21 03:53 pm Headline Karnataka News Network ಕ್ರೈಂ
ರಾಮನಗರ, ಅ.17: ನಗರ ವಾಸದ ಗೀಳಿಗೆ ಬಿದ್ದ ಪತ್ನಿ ಹಾಗೂ ಪತಿಯ ನಡುವಿನ ಜಗಳಕ್ಕೆ ಎರಡು ಜೀವಗಳು ಬಲಿಯಾಗಿವೆ. ಪಟ್ಟಣ ವಾಸದ ಆಸೆಗೆ ಬಿದ್ದ ಪತ್ನಿಯನ್ನು ಕೊಂದು ಪತಿ ತಾನೂ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆಗೆ ಶರಣಾದ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನಲ್ಲಿ ನಡೆದಿದೆ.
ಕೋಡಿಹಳ್ಳಿ ಹೋಬಳಿ, ಗುಡ್ಡೆ ವೀರನ ಹೊಸಹಳ್ಳಿ ನಿವಾಸಿ ದೇಸೀಗೌಡ (38), ಪತ್ನಿ ಇಂದಿರಮ್ಮ (31) ಳನ್ನು ಹತ್ಯೆಗೈದು ಬಳಿಕ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಊರಿನಲ್ಲಿ ಅಂಗಡಿ ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ದಂಪತಿ ನಡುವೆ ಬೆಂಗಳೂರಿಗೆ ಹೋಗುವ ಕುರಿತು ಜಗಳ ನಡೆಯುತ್ತಿತ್ತು.
ಇಂದಿರಮ್ಮ ಮತ್ತು ದೇಸೀಗೌಡ ಮಗನೊಂದಿಗೆ ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಕಳೆದ ಎರಡು ವರ್ಷಗಳ ಹಿಂದೆ ಕೋವಿಡ್ನಿಂದಾಗಿ ದಂಪತಿ ಬೆಂಗಳೂರು ಬಿಟ್ಟು ಸ್ವಗ್ರಾಮ ಗುಡ್ಡೆವೀರನಹೊಸಹಳ್ಳಿ ಗ್ರಾಮಕ್ಕೆ ಬಂದು ನೆಲೆಸಿದ್ದರು.
ಇತ್ತೀಚೆಗೆ ಕೋವಿಡ್ ಪರಿಸ್ಥಿತಿ ಹತೋಟಿಗೆ ಬಂದಿದ್ದು, ನಗರ ವಾಸದ ಗೀಳಿಗೆ ಬಿದ್ದ ಪತ್ನಿ ಇಂದಿರಾ ಪದೇ ಪದೇ ಗಂಡನನ್ನು ಮತ್ತೆ ಬೆಂಗಳೂರಿಗೆ ಹೋಗುವಂತೆ ಪೀಡಿಸುತ್ತಿದ್ದಳು. ಗ್ರಾಮದಲ್ಲಿ ಚಿಲ್ಲರೆ ಹಾಗೂ ಕೋಳಿ ಅಂಗಡಿ ಇಟ್ಟುಕೊಂಡು ಜೀವನ ಸಾಗಿಸುತ್ತಿದ್ದರು. ಇತ್ತೀಚೆಗೆ ಗಂಡನನ್ನು ಮೂಲೆಗುಂಪು ಮಾಡಿ ಇಂದಿರಾ ತಾನೇ ಸ್ವತಃ ಅಂಗಡಿಯ ಜವಾಬ್ದಾರಿ ನೋಡಿಕೊಳ್ಳುತ್ತಿದ್ದಳು.
ಕೆಲವು ದಿನಗಳ ಹಿಂದೆ ಮತ್ತೆ ಬೆಂಗಳೂರಿಗೆ ಹೋಗೋಣ ಎಂದು ಕ್ಯಾತೆ ತೆಗೆದಿದ್ದ ಪತ್ನಿಯೊಂದಿಗೆ ದೇಸೀಗೌಡ ಜಗಳ ಮಾಡಿಕೊಂಡಿದ್ದ. ಗ್ರಾಮದ ಹಿರಿಯರು ರಾಜಿ ಪಂಚಾಯಿತಿ ಮಾಡಿಸಿದ್ದರು. ಇದರ ಮಧ್ಯೆ ಹೆಂಡತಿಯ ಉಪಟಳದಿಂದ ಬೇಸತ್ತಿದ್ದ ದೇಸೀಗೌಡ ಇಬ್ಬರೂ ಜೀವಂತ ಇರಬಾರದು ಎಂಬ ನಿಧಾರಕ್ಕೆ ಬಂದು ತನ್ನ ಪತ್ನಿಯನ್ನು ಚೂರಿಯಿಂದ ಕತ್ತು ಕೊಯ್ದು ಕೊಲೆಗೈದು, ತಾನು ಊರ ಹೊರಗಿನ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿದ್ದಾನೆ.
ಕ್ಷುಲ್ಲಕ ವಿಚಾರ ವಿಕೋಪಕ್ಕೆ ತಿರುಗಿ ದಂಪತಿ ಜೀವ ಕಳೆದುಕೊಂಡ ದೃಶ್ಯ ಗ್ರಾಮಸ್ಥರ ಮನಕಲಕುವಂತಿತ್ತು. ಕೋಡಿಹಳ್ಳಿ ಪೋಲೀಸರು ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಂಡಿದ್ದಾರೆ.
Ramanagara Husband Kills Wife and Commits Suicide in a matter of going to Bangalore.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 02:16 pm
HK News Staffer
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm