ಬ್ರೇಕಿಂಗ್ ನ್ಯೂಸ್
17-10-21 03:53 pm Headline Karnataka News Network ಕ್ರೈಂ
ರಾಮನಗರ, ಅ.17: ನಗರ ವಾಸದ ಗೀಳಿಗೆ ಬಿದ್ದ ಪತ್ನಿ ಹಾಗೂ ಪತಿಯ ನಡುವಿನ ಜಗಳಕ್ಕೆ ಎರಡು ಜೀವಗಳು ಬಲಿಯಾಗಿವೆ. ಪಟ್ಟಣ ವಾಸದ ಆಸೆಗೆ ಬಿದ್ದ ಪತ್ನಿಯನ್ನು ಕೊಂದು ಪತಿ ತಾನೂ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆಗೆ ಶರಣಾದ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನಲ್ಲಿ ನಡೆದಿದೆ.
ಕೋಡಿಹಳ್ಳಿ ಹೋಬಳಿ, ಗುಡ್ಡೆ ವೀರನ ಹೊಸಹಳ್ಳಿ ನಿವಾಸಿ ದೇಸೀಗೌಡ (38), ಪತ್ನಿ ಇಂದಿರಮ್ಮ (31) ಳನ್ನು ಹತ್ಯೆಗೈದು ಬಳಿಕ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಊರಿನಲ್ಲಿ ಅಂಗಡಿ ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ದಂಪತಿ ನಡುವೆ ಬೆಂಗಳೂರಿಗೆ ಹೋಗುವ ಕುರಿತು ಜಗಳ ನಡೆಯುತ್ತಿತ್ತು.
ಇಂದಿರಮ್ಮ ಮತ್ತು ದೇಸೀಗೌಡ ಮಗನೊಂದಿಗೆ ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಕಳೆದ ಎರಡು ವರ್ಷಗಳ ಹಿಂದೆ ಕೋವಿಡ್ನಿಂದಾಗಿ ದಂಪತಿ ಬೆಂಗಳೂರು ಬಿಟ್ಟು ಸ್ವಗ್ರಾಮ ಗುಡ್ಡೆವೀರನಹೊಸಹಳ್ಳಿ ಗ್ರಾಮಕ್ಕೆ ಬಂದು ನೆಲೆಸಿದ್ದರು.
ಇತ್ತೀಚೆಗೆ ಕೋವಿಡ್ ಪರಿಸ್ಥಿತಿ ಹತೋಟಿಗೆ ಬಂದಿದ್ದು, ನಗರ ವಾಸದ ಗೀಳಿಗೆ ಬಿದ್ದ ಪತ್ನಿ ಇಂದಿರಾ ಪದೇ ಪದೇ ಗಂಡನನ್ನು ಮತ್ತೆ ಬೆಂಗಳೂರಿಗೆ ಹೋಗುವಂತೆ ಪೀಡಿಸುತ್ತಿದ್ದಳು. ಗ್ರಾಮದಲ್ಲಿ ಚಿಲ್ಲರೆ ಹಾಗೂ ಕೋಳಿ ಅಂಗಡಿ ಇಟ್ಟುಕೊಂಡು ಜೀವನ ಸಾಗಿಸುತ್ತಿದ್ದರು. ಇತ್ತೀಚೆಗೆ ಗಂಡನನ್ನು ಮೂಲೆಗುಂಪು ಮಾಡಿ ಇಂದಿರಾ ತಾನೇ ಸ್ವತಃ ಅಂಗಡಿಯ ಜವಾಬ್ದಾರಿ ನೋಡಿಕೊಳ್ಳುತ್ತಿದ್ದಳು.
ಕೆಲವು ದಿನಗಳ ಹಿಂದೆ ಮತ್ತೆ ಬೆಂಗಳೂರಿಗೆ ಹೋಗೋಣ ಎಂದು ಕ್ಯಾತೆ ತೆಗೆದಿದ್ದ ಪತ್ನಿಯೊಂದಿಗೆ ದೇಸೀಗೌಡ ಜಗಳ ಮಾಡಿಕೊಂಡಿದ್ದ. ಗ್ರಾಮದ ಹಿರಿಯರು ರಾಜಿ ಪಂಚಾಯಿತಿ ಮಾಡಿಸಿದ್ದರು. ಇದರ ಮಧ್ಯೆ ಹೆಂಡತಿಯ ಉಪಟಳದಿಂದ ಬೇಸತ್ತಿದ್ದ ದೇಸೀಗೌಡ ಇಬ್ಬರೂ ಜೀವಂತ ಇರಬಾರದು ಎಂಬ ನಿಧಾರಕ್ಕೆ ಬಂದು ತನ್ನ ಪತ್ನಿಯನ್ನು ಚೂರಿಯಿಂದ ಕತ್ತು ಕೊಯ್ದು ಕೊಲೆಗೈದು, ತಾನು ಊರ ಹೊರಗಿನ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿದ್ದಾನೆ.
ಕ್ಷುಲ್ಲಕ ವಿಚಾರ ವಿಕೋಪಕ್ಕೆ ತಿರುಗಿ ದಂಪತಿ ಜೀವ ಕಳೆದುಕೊಂಡ ದೃಶ್ಯ ಗ್ರಾಮಸ್ಥರ ಮನಕಲಕುವಂತಿತ್ತು. ಕೋಡಿಹಳ್ಳಿ ಪೋಲೀಸರು ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಂಡಿದ್ದಾರೆ.
Ramanagara Husband Kills Wife and Commits Suicide in a matter of going to Bangalore.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 02:56 pm
HK News Staffer
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm