ಬ್ರೇಕಿಂಗ್ ನ್ಯೂಸ್
17-10-21 03:53 pm Headline Karnataka News Network ಕ್ರೈಂ
ರಾಮನಗರ, ಅ.17: ನಗರ ವಾಸದ ಗೀಳಿಗೆ ಬಿದ್ದ ಪತ್ನಿ ಹಾಗೂ ಪತಿಯ ನಡುವಿನ ಜಗಳಕ್ಕೆ ಎರಡು ಜೀವಗಳು ಬಲಿಯಾಗಿವೆ. ಪಟ್ಟಣ ವಾಸದ ಆಸೆಗೆ ಬಿದ್ದ ಪತ್ನಿಯನ್ನು ಕೊಂದು ಪತಿ ತಾನೂ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆಗೆ ಶರಣಾದ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನಲ್ಲಿ ನಡೆದಿದೆ.
ಕೋಡಿಹಳ್ಳಿ ಹೋಬಳಿ, ಗುಡ್ಡೆ ವೀರನ ಹೊಸಹಳ್ಳಿ ನಿವಾಸಿ ದೇಸೀಗೌಡ (38), ಪತ್ನಿ ಇಂದಿರಮ್ಮ (31) ಳನ್ನು ಹತ್ಯೆಗೈದು ಬಳಿಕ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಊರಿನಲ್ಲಿ ಅಂಗಡಿ ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ದಂಪತಿ ನಡುವೆ ಬೆಂಗಳೂರಿಗೆ ಹೋಗುವ ಕುರಿತು ಜಗಳ ನಡೆಯುತ್ತಿತ್ತು.
ಇಂದಿರಮ್ಮ ಮತ್ತು ದೇಸೀಗೌಡ ಮಗನೊಂದಿಗೆ ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಕಳೆದ ಎರಡು ವರ್ಷಗಳ ಹಿಂದೆ ಕೋವಿಡ್ನಿಂದಾಗಿ ದಂಪತಿ ಬೆಂಗಳೂರು ಬಿಟ್ಟು ಸ್ವಗ್ರಾಮ ಗುಡ್ಡೆವೀರನಹೊಸಹಳ್ಳಿ ಗ್ರಾಮಕ್ಕೆ ಬಂದು ನೆಲೆಸಿದ್ದರು.
ಇತ್ತೀಚೆಗೆ ಕೋವಿಡ್ ಪರಿಸ್ಥಿತಿ ಹತೋಟಿಗೆ ಬಂದಿದ್ದು, ನಗರ ವಾಸದ ಗೀಳಿಗೆ ಬಿದ್ದ ಪತ್ನಿ ಇಂದಿರಾ ಪದೇ ಪದೇ ಗಂಡನನ್ನು ಮತ್ತೆ ಬೆಂಗಳೂರಿಗೆ ಹೋಗುವಂತೆ ಪೀಡಿಸುತ್ತಿದ್ದಳು. ಗ್ರಾಮದಲ್ಲಿ ಚಿಲ್ಲರೆ ಹಾಗೂ ಕೋಳಿ ಅಂಗಡಿ ಇಟ್ಟುಕೊಂಡು ಜೀವನ ಸಾಗಿಸುತ್ತಿದ್ದರು. ಇತ್ತೀಚೆಗೆ ಗಂಡನನ್ನು ಮೂಲೆಗುಂಪು ಮಾಡಿ ಇಂದಿರಾ ತಾನೇ ಸ್ವತಃ ಅಂಗಡಿಯ ಜವಾಬ್ದಾರಿ ನೋಡಿಕೊಳ್ಳುತ್ತಿದ್ದಳು.
ಕೆಲವು ದಿನಗಳ ಹಿಂದೆ ಮತ್ತೆ ಬೆಂಗಳೂರಿಗೆ ಹೋಗೋಣ ಎಂದು ಕ್ಯಾತೆ ತೆಗೆದಿದ್ದ ಪತ್ನಿಯೊಂದಿಗೆ ದೇಸೀಗೌಡ ಜಗಳ ಮಾಡಿಕೊಂಡಿದ್ದ. ಗ್ರಾಮದ ಹಿರಿಯರು ರಾಜಿ ಪಂಚಾಯಿತಿ ಮಾಡಿಸಿದ್ದರು. ಇದರ ಮಧ್ಯೆ ಹೆಂಡತಿಯ ಉಪಟಳದಿಂದ ಬೇಸತ್ತಿದ್ದ ದೇಸೀಗೌಡ ಇಬ್ಬರೂ ಜೀವಂತ ಇರಬಾರದು ಎಂಬ ನಿಧಾರಕ್ಕೆ ಬಂದು ತನ್ನ ಪತ್ನಿಯನ್ನು ಚೂರಿಯಿಂದ ಕತ್ತು ಕೊಯ್ದು ಕೊಲೆಗೈದು, ತಾನು ಊರ ಹೊರಗಿನ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿದ್ದಾನೆ.
ಕ್ಷುಲ್ಲಕ ವಿಚಾರ ವಿಕೋಪಕ್ಕೆ ತಿರುಗಿ ದಂಪತಿ ಜೀವ ಕಳೆದುಕೊಂಡ ದೃಶ್ಯ ಗ್ರಾಮಸ್ಥರ ಮನಕಲಕುವಂತಿತ್ತು. ಕೋಡಿಹಳ್ಳಿ ಪೋಲೀಸರು ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಂಡಿದ್ದಾರೆ.
Ramanagara Husband Kills Wife and Commits Suicide in a matter of going to Bangalore.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm