ಬ್ರೇಕಿಂಗ್ ನ್ಯೂಸ್
18-10-21 02:07 pm Headline Karnataka News Network ಕ್ರೈಂ
ಕೋಲ್ಕತ್ತಾ, ಅ 18: ಪಶ್ಚಿಮ ಬಂಗಾಳದ ಬಿಜೆಪಿ ಯುವ ಮೋರ್ಚಾದ ನಾಯಕನನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.
ಪಶ್ಚಿಮಬಂಗಾಳದ ಉತ್ತರ ದಿನಾಜ್ಪುರ ಜಿಲ್ಲೆಯ ಇಟಾಹಾರ್ನ ಬಿಜೆಪಿ ಯುವ ನಾಯಕ ಮಿಥುನ್ ಘೋಷ್ ಮೃತ ದುರ್ದೈವಿ.
ರಾಜ್ಗ್ರಾಮ ಹಳ್ಳಿಯಲ್ಲಿರುವ ತಮ್ಮ ಮನೆ ಎದುರು ಭಾನುವಾರ ರಾತ್ರಿ 11 ಗಂಟೆಗೆ ಘೋಷ್ ಹೊರಗೆ ನಿಂತಿದ್ದರು. ಬೈಕ್ನಲ್ಲಿ ಬಂದ ಆಗಂತುಕರು ಮಿಥುನ್ ಹೊಟ್ಟೆಗೆ ಗುಂಡು ಹೊಡೆದಿದ್ದಾರೆ, ಕೂಡಲೇ ಸ್ಥಳೀಯರು ಸಮೀಪದ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಿದ್ದರೂ ಪ್ರಯೋಜನವಾಗಲಿಲ್ಲ.
ಈ ಕೃತ್ಯ ಟಿಎಂಸಿ ಕಾರ್ಯಕರ್ತರದ್ದೇ ಎಂದು ಬಿಜೆಪಿ ಆರೋಪಿಸಿದೆ. ಈ ಬಗ್ಗೆ ಬಿಜೆಪಿ ನಾಯಕ ಸುವೇಂದು ಟ್ವೀಟ್ ಮಾಡಿ, ಮಿಥುನ್ ಘೋಷ್ ಅವರು ಬಿಜೆಪಿ ಯುವ ಮೋರ್ಚಾದ ಉತ್ತರ ದಿನಾಜ್ಪುರ ಜಿಲ್ಲೆಯ ಉಪಾಧ್ಯಕ್ಷರಾಗಿದ್ದರು. ಇಟಾಹಾರ್ನಲ್ಲಿ ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಇದರಲ್ಲಿ ಖಂಡಿತ ಟಿಎಂಸಿ ಕೈವಾಡವಿದೆ. ಅವರು ತಮ್ಮ ಯಜಮಾನನ ಅಣತಿಗೆ ಅನುಸಾರವಾಗಿ ಇಂಥ ಕೃತ್ಯ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಟಿಎಂಸಿ ಇಟಾಹಾರ್ ಶಾಸಕ ಮೊಹಾರಾಫ್ ಹುಸ್ಸೇನ್, ನಮ್ಮ ತೃಣಮೂಲ ಕಾಂಗ್ರೆಸ್ಗೂ, ಮಿಥುನ್ ಘೋಷ್ ಹತ್ಯೆಗೂ ಯಾವುದೇ ಸಂಬಂಧವಿಲ್ಲ. ಬೇರೆ ಯಾರಾದರೂ, ಇನ್ಯಾವುದೇ ದ್ವೇಷದ ಕಾರಣಕ್ಕೆ ಈ ಹತ್ಯೆ ಮಾಡಿಬಹುದು. ಪೊಲೀಸರ ತನಿಖೆಯಿಂದ ಸತ್ಯ ಹೊರಬರುತ್ತದೆ ಎಂದಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ.
ಹಲವು ಬಾರಿ ಮಿಥುನ್ ಅವರ ಮೇಲೆ ಹಲ್ಲೆ ಪ್ರಯತ್ನವೂ ಆಗಿತ್ತು. ಪೊಲೀಸರಿಗೆ ಈ ಬಗ್ಗೆ ದೂರು ಕೂಡ ನೀಡಿದ್ದೇವೆ ಆದರೂ ಪೊಲಿಸರು ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎಂದು ಉತ್ತರ ದಿನಾಜ್ಪುರ ಬಿಜೆಪಿ ಅಧ್ಯಕ್ಷ ವಸುದೇವ್ ಸರ್ಕಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
Mithun Ghosh, a youth BJP leader from Itahar in the North Dinajpur district of West Bengal, was killed by unknown miscreants outside his home in the Rajgram village on Sunday. According to the BJP, Trinamool Congress anti-socials are responsible for the murder. However, the Trinamool Congress has dismissed the allegation.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm