ಬ್ರೇಕಿಂಗ್ ನ್ಯೂಸ್
18-10-21 09:21 pm Headline Karnataka News Network ಕ್ರೈಂ
ಲಕ್ನೋ, ಅ.18: ಕೋರ್ಟ್ ಕಾಂಪ್ಲೆಕ್ಸ್ ಒಳಗಡೆಯೇ ಹಾಡಹಗಲೇ ವಕೀಲರೊಬ್ಬರನ್ನು ಗುಂಡಿಟ್ಟು ಸಾಯಿಸಿದ ಘಟನೆ ಉತ್ತರ ಪ್ರದೇಶದ ಶಹಜಾನ್ ಪುರ್ ಜಿಲ್ಲಾ ನ್ಯಾಯಾಲಯದಲ್ಲಿ ನಡೆದಿದೆ. ಮೃತ ವಕೀಲರನ್ನು ಭೂಪೇಂದ್ರ ಪ್ರತಾಪ್ ಸಿಂಗ್ ಎಂದು ಗುರುತಿಸಲಾಗಿದೆ.
ಕೋರ್ಟ್ ಕಾಂಪ್ಲೆಕ್ಸ್ ನ ಮೂರನೇ ಮಹಡಿಯಲ್ಲಿ ಘಟನೆ ನಡೆದಿದೆ. ಜಲಾಲಬಾದ್ ನಿವಾಸಿಯಾಗಿರುವ ಭೂಪೇಂದ್ರ ಸಿಂಗ್ ಇಂದು ಮಧ್ಯಾಹ್ನ ಕೋರ್ಟ್ ಮಹಡಿಗೆ ಬಂದಿದ್ದು, ಮೂರನೇ ಮಹಡಿಯಲ್ಲಿರುವ ಎಸಿಜೆಎಂಎಫ್ ಕೋರ್ಟ್ ಕಚೇರಿಗೆ ತೆರಳಿದ್ದರು. ಪ್ರಕರಣ ಒಂದಕ್ಕೆ ಸಂಬಂಧಿಸಿ ಕೋರ್ಟ್ ಕ್ಲರ್ಕ್ ಅನ್ನು ಭೇಟಿಯಾಗಲೆಂದು ತೆರಳಿದ್ದರು. ಇದೇ ವೇಳೆ, ಗುಂಡಿನ ಸದ್ದು ಕೇಳಿಬಂದಿದ್ದು , ಭೂಪೇಂದ್ರ ಸಿಂಗ್ ಮೃತರಾಗಿದ್ದರು.
ಶವದ ಬಳಿಯಿಂದ ದೇಸೀ ಪಿಸ್ತೂಲ್ ಒಂದನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರಂಭದಲ್ಲಿ ಆತ್ಮಹತ್ಯೆಯೇ ಅನ್ನುವ ಅನುಮಾನ ಕೇಳಿಬಂದಿತ್ತು. ಆದರೆ, ಕೆಲವರು ಕೊಲೆ ಎನ್ನುತ್ತಲೇ ವಕೀಲರು ಕೋರ್ಟ್ ಆವರಣದಲ್ಲಿಯೇ ಪ್ರತಿಭಟನೆ ಆರಂಭಿಸಿದ್ದಾರೆ. ಕೂಡಲೇ ಪೊಲೀಸರು ಅಲ್ಲಿನ ಸಿಸಿಟಿವಿ ಪರಿಶೀಲನೆ ನಡೆಸಿದ್ದು, ಹಂತಕ ವಕೀಲನನ್ನು ಬಂಧಿಸಿದ್ದಾರೆ. ವಿಚಾರಣೆ ನಡೆಸಿದಾಗ ಆರೋಪಿ ತನ್ನ ಕೃತ್ಯ ಬಾಯಿಬಿಟ್ಟಿದ್ದಾನೆ. ಪೂರ್ವ ದ್ವೇಷದಲ್ಲಿ ಭೂಪೇಂದ್ರ ಸಿಂಗ್ ನನ್ನು ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ಬಗ್ಗೆ ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಾರ್ಟಿ ಮತ್ತು ಕಾಂಗ್ರೆಸ್ ನಾಯಕರು ಕಿಡಿಕಾರಿದ್ದಾರೆ. ಪದೇ ಪದೇ ಈ ರೀತಿಯ ಕೃತ್ಯ ಮರುಕಳಿಸುತ್ತಿರುವುದು ಯೋಗಿ ಆದಿತ್ಯನಾಥ್ ಸರಕಾರದ ಕಾನೂನು ಸುವ್ಯವಸ್ಥೆ ಹೇಗಿದೆ ಅನ್ನುವುದನ್ನು ತೋರಿಸುತ್ತಿದೆ ಎಂದು ನಾಯಕರು ದೂರಿದ್ದಾರೆ.
A lawyer was allegedly shot dead inside a district court complex in Uttar Pradesh’s Shahjahanpur on Monday. The deceased lawyer has been identified as Bhupendra Pratap Singh. The body of the lawyer was found on the third floor of the court. A country-made pistol has been recovered from near the body of the deceased lawyer.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm