ಬ್ರೇಕಿಂಗ್ ನ್ಯೂಸ್
19-10-21 12:15 pm Mangaluru Correspondent ಕ್ರೈಂ
ಉಳ್ಳಾಲ, ಅ.19: ಬೈಕಲ್ಲಿ ಹೊಂಚು ಹಾಕಿ ಕುಳಿತಿದ್ದ ಮೂವರು ಅಪರಿಚಿತರು ಬಿಜೆಪಿ ಪ್ರಮುಖನ ಮೇಲೆ ತಲವಾರು ದಾಳಿ ನಡೆಸಿ, ಕೊಲೆಗೆ ಯತ್ನಿಸಿದ ಘಟನೆ ನಿನ್ನೆ ರಾತ್ರಿ ಕೊಣಾಜೆ ವಿ.ವಿ ಕ್ಯಾಂಪಸ್ ಹಾಸ್ಟೆಲ್ ಬಳಿ ನಡೆದಿದೆ.
ಕೊಣಾಜೆ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಬಿಜೆಪಿ ಪ್ರಮುಖರಾದ ಪ್ರಕಾಶ್ ಶೆಟ್ಟಿ(41) ಎಂಬವರ ಮೇಲೆ ತಲವಾರು ದಾಳಿ ನಡೆದಿದೆ. ಸಮಯ ಪ್ರಜ್ಞೆ ಮೆರೆದ ಪ್ರಕಾಶ್ ಅವರು ಸಣ್ಣ ಪುಟ್ಟ ಗಾಯದಿಂದ ಪಾರಾಗಿದ್ದಾರೆ.
ಕೊಣಾಜೆ ವಿವಿ ಆವರಣದ ಹಾಸ್ಟೆಲ್ ಬಳಿಯ ದುರ್ಗಾ ಫ್ಯಾನ್ಸಿ & ಜನರಲ್ ಸ್ಟೋರ್ ನ ಮಾಲಕರಾದ ಪ್ರಕಾಶ್ ಅವರು ನಿನ್ನೆ ರಾತ್ರಿ 9.30 ಗಂಟೆಗೆ ಅಂಗಡಿ ಬಂದ್ ಮಾಡಿ ಮನೆ ಕಡೆಗೆ ಹೊರಟಿದ್ದರು. ಅಂಗಡಿಯ ಅನತಿ ದೂರದಲ್ಲಿ ಕಪ್ಪು ಪಲ್ಸರ್ ಬೈಕಿನಲ್ಲಿ ಕಾದು ಕುಳಿತಿದ್ದ ಮೂವರು ಯುವಕರನ್ನು ಪ್ರಕಾಶ್ ಮೊದಲೇ ಗಮನಿಸಿದ್ದರು ಎನ್ನಲಾಗಿದೆ. ಹೀಗಾಗಿ ಪ್ರಕಾಶ್ ಅವರು ಅಂಗಡಿ ಬಂದ್ ಮಾಡಿ ಪರಿಚಯಸ್ಥ ಮಂಜುನಾಥ್ ಎಂಬವರ ಬೈಕ್ ಏರಿ ಹೊರಟಾಗ ಹಿಂದಿನಿಂದ ಬೈಕ್ ನಲ್ಲಿ ಹಿಂಬಾಲಿಸಿದ ದುಷ್ಕರ್ಮಿಗಳು ಪ್ರಕಾಶ ಅವರನ್ನು ಗುರಿಯಾಗಿಸಿ ತಲವಾರು ಬೀಸಿದ್ದಾರೆ. ಅಪಾಯದ ಮುನ್ಸೂಚನೆ ಅರಿತಿದ್ದ ಪ್ರಕಾಶ್ ಶೆಟ್ಟಿ ತಲವಾರು ಏಟನ್ನು ತಪ್ಪಿಸಲು ಯತ್ನಿಸಿದಾಗ ಇವರ ಬೈಕ್ ಉರುಳಿ ಬಿದ್ದಿದೆ. ಕೂಡಲೇ ಬೈಕ್ ಚಾಲಕ ಮತ್ತು ಪ್ರಕಾಶ್ ಹತ್ತಿರದ ಜನ ವಸತಿ ಸ್ಥಳಕ್ಕೆ ಓಡಿ ಬಚಾವಾಗಿದ್ದಾರೆ. ಪ್ರಕಾಶ್ ಬಲ ಕೈಗೆ ತಲವಾರಿನ ಏಟು ತಗಲಿದ್ದು ಈ ಬಗ್ಗೆ ಅವರು ಕೊಣಾಜೆ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಸಿಸಿಟಿವಿ ಫೂಟೇಜ್ ಪರಿಶೀಲನೆ ನಡೆಸುತ್ತಿದ್ದಾರೆ.

ಪ್ರತೀಕಾರಕ್ಕೆ ದಾಳಿ ನಡೆದಿರುವ ಶಂಕೆ
ಕಳೆದ ವಾರ ಕೊಣಾಜೆ ಜಂಕ್ಷನ್ ನ ಕೊಣಾಜೆ ಸ್ಟೋರ್ಸ್ & ಸ್ವೀಟ್ಸ್ ಮಳಿಗೆಯ ಮಾಲಕ ಉಸ್ಮಾನ್ ಎಂಬಾತ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದು ಆರೋಪಿಯ ಬಂಧನಕ್ಕೆ ಪ್ರಕಾಶ್ ಶೆಟ್ಟಿ ಒತ್ತಡ ಹೇರಿದ್ದರು ಎನ್ನಲಾಗಿದೆ. ಇದಲ್ಲದೆ ಸಮಾಜ ಘಾತುಕ ದುಷ್ಕೃತ್ಯಗಳ ವಿರುದ್ಧ ಪ್ರಕಾಶ್ ಶೆಟ್ಟಿ ಹೋರಾಟ ನಡೆಸುತ್ತಾ ಬಂದಿದ್ದರು. ಇದೇ ನೆಲೆಯಲ್ಲಿ ಪ್ರತೀಕಾರ ತೀರಿಸಲು ತಲವಾರು ದಾಳಿ ನಡೆಸಲಾಗಿದೆ ಎನ್ನಲಾಗುತ್ತಿದೆ.
ಸ್ವೀಟ್ ಖರೀದಿಗೆ ಬಂದಿದ್ದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ; ಕೊಣಾಜೆ ಸ್ಟೋರ್ಸ್ ಮಾಲಕನ ಪುತ್ರನ ಬಂಧನ
Mangalore Konaje Bike Borne Miscreants attack BJP member Prakash Shetty in talwar last night, escapes from death. Konaje police are now investigating the case.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm