ಬ್ರೇಕಿಂಗ್ ನ್ಯೂಸ್
19-10-21 06:50 pm Mangaluru Correspondent ಕ್ರೈಂ
ಉಳ್ಳಾಲ, ಅ.19: ಸ್ಥಳೀಯ ಗಾಂಜಾ ಮಾಫಿಯಾದ ವಿರುದ್ಧ ಪದೇ ಪದೇ ಪೊಲೀಸ್ ದೂರು ನೀಡುತ್ತಿದ್ದ ಕರಾಟೆ ಮಾಸ್ಟರ್ ಓರ್ವರನ್ನ ಹಾಡು ಹಗಲೇ ಮಾರಕಾಸ್ತ್ರದಿಂದ ಮಾರಣಾಂತಿಕವಾಗಿ ಇರಿದ ಘಟನೆ ಉಳ್ಳಾಲದಲ್ಲಿ ನಡೆದಿದೆ.
ಉಳ್ಳಾಲ ಉಳಿಯ ನಿವಾಸಿ ಹರೀಶ್ ಗಾಣಿಗ(42) ಇರಿತಕ್ಕೊಳಗಾದ ವ್ಯಕ್ತಿ. ಉಳ್ಳಾಲ ವೀರಭದ್ರ ದೇವಸ್ಥಾನದ ಬಳಿಯಲ್ಲಿರುವ ಹರೀಶ್ ಅವರ ಗ್ಯಾಸ್ ಅಕ್ಸೆಸರೀಸ್ ಅಂಗಡಿಯಲ್ಲಿ ಇರಿತ ನಡೆದಿದೆ.
ಸ್ಥಳೀಯ ನಿವಾಸಿ ಗಾಂಜಾ ವ್ಯಸನಿ ವಿಶಾಲ್ ಯಾನೆ ವಿಕಾಸ್ ಎಂಬಾತ ಇಂದು ಸಂಜೆ ಹರೀಶ್ ಅವರ ಅಂಗಡಿಗೆ ನುಗ್ಗಿ ಸೀಯಾಳ ಕೆತ್ತುವ ಕತ್ತಿ ಮತ್ತು ಹರಿತ ಚಾಕುವಿನಿಂದ ಇರಿದಿದ್ದಾನೆಂದು ಆರೋಪಿಸಲಾಗಿದೆ. ಗಾಯಾಳು ಹರೀಶ್ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.



ಪೊಲೀಸ್ ದೂರು ಕೊಟ್ಟಿದ್ದಕ್ಕೇ ಪ್ರತೀಕಾರ;
ಉಳ್ಳಾಲದ ಉಳಿಯದಲ್ಲಿ ವಿಶಾಲ್ ಸೇರಿದಂತೆ ಯುವಕರು ಗಾಂಜಾ ವ್ಯಸನಕ್ಕೆ ಬಲಿಯಾಗಿ ಕುಕೃತ್ಯಗಳನ್ನ ನಡೆಸುತ್ತಿದ್ದು ಈ ಬಗ್ಗೆ ಉಳಿಯ ನಿವಾಸಿ ಕರಾಟೆ ಮಾಸ್ಟರ್ ಆಗಿರುವ ಹರೀಶ್ ಅವರು ಎರಡು ಬಾರಿ ಉಳ್ಳಾಲ ಠಾಣೆಗೆ ದೂರು ನೀಡಿದ್ದು ಜೀವ ಬೆದರಿಕೆ ಇದೆ ಎಂದೂ ಪೊಲೀಸರಿಗೆ ತಿಳಿಸಿದ್ದರು. ಆದರೆ ಪೊಲೀಸರು ಗಾಂಜಾ ಮಾಫಿಯಾದ ವಿರುದ್ಧ ಯಾವುದೇ ಕಟ್ಟುನಿಟ್ಟಿನ ಕ್ರಮ ಕೈಗೊಂಡಿರಲಿಲ್ಲ. ಒಂದು ತಿಂಗಳ ಹಿಂದೆ ಗಾಂಜಾ ವ್ಯಸನಿ ವಿಶಾಲ್ ವಿರುದ್ಧ ಹರೀಶ್ ಅವರು ಉಳ್ಳಾಲ ಠಾಣೆಗೆ ದೂರು ನೀಡಿದ್ದು ಅಸಡ್ಡೆ ತೋರಿದ ಪೊಲೀಸರು ಇಂದು ಬೆಳಗ್ಗೆ ವಿಶಾಲನ್ನ ಠಾಣೆಗೆ ವಿಚಾರಣೆಗೆ ಕರೆಸಿದ್ದರು. ಅಷ್ಟಕ್ಕೇ ವ್ಯಘ್ರನಾದ ವಿಶಾಲ್ ಇಂದು ಸಂಜೆ ಒಬ್ಬನೇ ಎರಡು ಮಾರಕಾಸ್ತ್ರಗಳನ್ನ ಹಿಡಿದು ಹರೀಶ್ ಅವರ ಅಂಗಡಿಗೆ ನುಗ್ಗಿ ಇರಿದಿದ್ದಾನೆ.
ಉಳ್ಳಾಲದಲ್ಲಿ ಗಾಂಜಾ ಮಾಫಿಯಾ ವ್ಯಾಪಕವಾಗಿದ್ದು ಪೊಲೀಸರು ವ್ಯಸನಿಗಳ ವಿರುದ್ಧ ದೂರು ನೀಡಿ ಅಂತ ಒಂದು ಕಡೆ ಹೇಳುತ್ತಿದ್ದರೆ, ದೂರು ಕೊಟ್ಟವರು ಹೀನಾಯವಾಗಿ ಇರಿತಕ್ಕೊಳಗಾಗುತ್ತಿದ್ದು ಪೊಲೀಸರ ಬಗ್ಗೆ ಜನರು ಅನುಮಾನ ಪಡುವಂತಾಗಿದೆ.
Mangalore Karate Master Stabbed by Drug addict youth at his shop in Ullal. Harish Ganiga is the person being stabbed. Recently Harish had lodged a complaint against Drug addicts in the locality to Ullal Police but the cops who failed to take action had to witness a stabbing incident. Drug addict Vishal is the youth who came to the shop of Harish and stabbed him using sharp weapons.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
02-11-25 11:12 pm
HK News Desk
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
03-11-25 12:37 pm
Mangalore Correspondent
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm