ಬ್ರೇಕಿಂಗ್ ನ್ಯೂಸ್
22-10-21 02:43 pm Mangalore Reporter ಕ್ರೈಂ
ಉಡುಪಿ, ಅ.22 : ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಸ್ನೇಹಿತರ ಜೊತೆ ಸೇರಿ ಪತ್ನಿಯೇ ಕೊಲೆಗೈದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆತ್ಮಹತ್ಯೆ ಎಂದು ಬಿಂಬಿಸಲಾಗಿದ್ದ ಪ್ರಕರಣದಲ್ಲಿ ರೋಚಕ ಟ್ವಿಸ್ಟ್ ಸಿಕ್ಕಿದ್ದು, ಪತ್ನಿ ಹಾಗೂ ಸ್ನೇಹಿತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಅಂಪಾರಿನ ವಿವೇಕನಗರದ ನಾಗರಾಜ(36) ಅ.19 ರಂದು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದ. ಪತ್ನಿ ಮಮತಾ ತನ್ನ ಗಂಡ ವಿಪರೀತ ಕುಡಿತದ ಚಟ ಹೊಂದಿದ್ದು ಅದೇ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿದ್ದರು ಎಂದು ದೂರು ನೀಡಿದ್ದಳು. ಇದೀಗ ಮಮತಾ ಮತ್ತು ಆಕೆಯ ಸ್ನೇಹಿತರಾದ ಕುಮಾರ್ ಮತ್ತು ದಿನಕರ್ ಅವರನ್ನು ಪೊಲೀಸರು ಬಂಧಿಸಿದ್ದು ಕೊಲೆ ನಡೆಸಿರುವುದನ್ನು ಪತ್ತೆ ಮಾಡಿದ್ದಾರೆ.

ವಿಪರೀತ ಮದ್ಯ ವ್ಯಸನಿಯಾಗಿದ್ದ ನಾಗರಾಜ್ ತನ್ನ ಜೀವನದ ಬಗ್ಗೆ ಜಿಗುಪ್ಸೆಗೊಂಡಿದ್ದು ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿತ್ತು. ಆದರೆ ಮೃತರ ಸಹೋದರಿ ಶಿವಮೊಗ್ಗದ ಸಾಗರ ತಾಲೂಕಿನ ಮಾಲ್ವೆಯ ನಿವಾಸಿ ನಾಗರತ್ನ ಮತ್ತು ಇತರ ಕೆಲವು ಸಂಬಂಧಿಕರು ಸಾವಿನ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದರು.
ಶಂಕರನಾರಾಯಣ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಶವಾಗಾರದಲ್ಲಿ ಇರಿಸಲಾಗಿದ್ದ ಮೃತದೇಹದಲ್ಲಿ ಕತ್ತಿನ ಭಾಗದಲ್ಲಿ ಗಾಯದ ಗುರುತು ಇರುವುದನ್ನು ಕುಟುಂಬ ಸದಸ್ಯರು ಗಮನಿಸಿದ್ದು ಕೊಲೆ ಬಗ್ಗೆ ಶಂಕಿಸಿ ನಾಗರತ್ನ ಪೊಲೀಸರಿಗೆ ದೂರು ನೀಡಿದ್ದರು.
ಇದಕ್ಕೂ ಮುನ್ನ ನಾಗರಾಜ್ ತನ್ನ ಪತ್ನಿ ಮತ್ತು ಇತರರು ಸೇರಿ ತನಗೆ ಹಲ್ಲೆ ನಡೆಸಿದ್ದಾಗಿ ಸಹೋದರಿಗೆ ಕರೆ ಮಾಡಿ ನೋವು ತೋಡಿಕೊಂಡಿದ್ದರು. ಇದೇ ಶಂಕೆಯಲ್ಲಿ ನಾಗರತ್ನ ದೂರಿನಲ್ಲಿ ತಿಳಿಸಿದ್ದರು. ನಾಗರಾಜ್ ಶಿವಮೊಗ್ಗ ಜಿಲ್ಲೆಯವರಾಗಿದ್ದು, ಮಮತಾಳನ್ನು ಪ್ರೀತಿಸಿ ಹತ್ತು ವರ್ಷಗಳ ಹಿಂದೆ ಮದುವೆಯಾಗಿದ್ದ. ದಂಪತಿಗೆ ಮೂವರು ಮಕ್ಕಳಿದ್ದಾರೆ. ಆದರೆ ನಾಗರಾಜ್ ನಿತ್ಯ ಕುಡುಕನಾಗಿದ್ದು, ಮನೆಯಲ್ಲಿ ದಿನವೂ ಗಲಾಟೆ ಮಾಡುತ್ತಿದ್ದ ಎನ್ನಲಾಗಿದೆ.
ಕೊಲೆ ಪ್ರಕರಣದಲ್ಲಿ ಐವರು ಆರೋಪಿಗಳಿದ್ದು ಇಬ್ಬರು ಅಪ್ರಾಪ್ತರಾಗಿದ್ದು ರಿಮಾಂಡ್ ಹೋಮ್ ಗೆ ಕಳಿಸಲಾಗಿದೆ. ಮಮತಾಗೆ ಆರೋಪಿಗಳ ಜೊತೆ ಅಕ್ರಮ ಸಂಬಂಧ ಇತ್ತೆನ್ನುವ ಅನುಮಾನ ಉಂಟಾಗಿದ್ದು ಶಂಕರನಾರಾಯಣ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
What was believed to be a case of suicide, reported four days ago, has taken a new twist with the arrest of five accused including wife and two minors under the Shankernarayana Police station limits of Byndoor Taluk.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 02:16 pm
HK News Staffer
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm