ಬ್ರೇಕಿಂಗ್ ನ್ಯೂಸ್
22-10-21 10:30 pm Mangalore Reporter ಕ್ರೈಂ
ಮಂಗಳೂರು, ಅ.22 : ಮನೆಯೊಂದರಲ್ಲಿ ಪ್ರತಿ ವಾರ ಗೋವುಗಳನ್ನು ಕಡಿದು ಮಾಂಸ ಮಾಡಿ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದು ಮೂಲ್ಕಿ ಹಾಗೂ ಮೂಡುಬಿದಿರೆ ಪ್ರಖಂಡದ ಬಜರಂಗದಳದ ಕಾರ್ಯಕರ್ತರು ದಾಳಿ ನಡೆಸಿದ್ದು ಕಿನ್ನಿಗೋಳಿಯ ಸಂಕಲಕರಿಯದಲ್ಲಿ ನಡೆಯುತ್ತಿದ್ದ ಅಕ್ರಮ ಕಸಾಯಿಖಾನೆಯನ್ನು ಪತ್ತೆ ಮಾಡಿದ್ದಾರೆ.
ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಮಾರುತಿ ಓಮ್ನಿ ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 50 ಕೆ.ಜಿ. ಗೋಮಾಂಸವನ್ನು ಪತ್ತೆ ಮಾಡಿದ್ದಾರೆ. ಬಳಿಕ ಅದರಲ್ಲಿದ್ದ ಆರೋಪಿಗಳು ನೀಡಿದ ಮಾಹಿತಿಯಂತೆ ಮೂಲ್ಕಿ ಪೊಲೀಸರಿಗೆ ಬಜರಂಗದಳ ಕಾರ್ಯಕರ್ತರು ಮಾಹಿತಿ ನೀಡಿದ್ದಾರೆ. ಆಬಳಿಕ ಕಸಾಯಿಖಾನೆ ಇದ್ದ ಜಾಗ ಕಾರ್ಕಳ ಠಾಣೆ ವ್ಯಾಪ್ತಿಗೆ ಬರುತ್ತಿದ್ದ ಕಾರಣ ಅಲ್ಲಿನ ಪೊಲೀಸರಿಗೂ ಮಾಹಿತಿ ನೀಡಿದ್ದಾರೆ.

ಕಸಾಯಿಖಾನೆಗೆಂದು ಮನೆಯ ಬಳಿಯಲ್ಲೇ ಹಟ್ಟಿಯನ್ನು ರಚಿಸಿದ್ದು ಅಲ್ಲಿ ಪ್ರತಿವಾರ ಗೋವನ್ನು ಖರೀದಿಸಿ ತಂದು ಕಟ್ಟಿ ಹಾಕುತ್ತಿದ್ದರು. ಬಳಿಕ ಅದನ್ನು ಪ್ರತಿ ವಾರ ಅಗತ್ಯ ಇದ್ದಷ್ಟು ಮಾಂಸ ಮಾಡುತ್ತಿದ್ದರು. ಸುತ್ತಲಲ್ಲಿ ಹಿಂದುಗಳ ಮನೆಯೇ ಇದ್ದರೂ, ಗೋವನ್ನು ಮಾಂಸ ಮಾಡಿ ಮೂಲ್ಕಿ ವ್ಯಾಪ್ತಿಯ ಹಲವು ಕಡೆಗಳಿಗೆ ಮಾಂಸವನ್ನು ವ್ಯವಸ್ಥಿತವಾಗಿ ಪೂರೈಕೆ ಮಾಡಲಾಗುತ್ತಿತ್ತು. ಈ ಬಗ್ಗೆ ಸ್ಥಳೀಯರಿಗೆ ಮಾಹಿತಿ ಇದ್ದರೂ, ಪೊಲೀಸ್ ದೂರು ನೀಡಿರಲಿಲ್ಲ.

ದಾಳಿ ನಡೆಸಿದ ವೇಳೆ, ಆರೋಪಿಯ ಮನೆಯ ಒಳಗೇ ಕಸಾಯಿಖಾನೆ ನಡೆಸುತ್ತಿದ್ದುದು ಪತ್ತೆಯಾಗಿದೆ. ಹೊರಗಡೆ ಇದ್ದ ಹಟ್ಟಿಯಲ್ಲಿ ಎಂಟು ಗೋವುಗಳಿದ್ದು ಅವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಲ್ಲದೆ, ಮನೆಯ ಒಳಗಡೆಯೂ ಮಾಂಸ ಮತ್ತು ಮಾಂಸ ಮಾಡಲು ಬಳಸಿದ್ದ ಪರಿಕರಗಳನ್ನೂ ವಶಕ್ಕೆ ಪಡೆದಿದ್ದಾರೆ. ಒಟ್ಟು ಒಂದು ಕ್ವಿಂಟಾಲ್ನಷ್ಟು ಗೋಮಾಂಸ ಹಾಗೂ ನಾಲ್ಕು ಆರೋಪಿಗಳನ್ನು ಮೂಲ್ಕಿ ಮತ್ತು ಕಾರ್ಕಳ ಪೋಲೀಸರು ವಶಕ್ಕೆ ಪಡೆದಿದ್ದಾರೆ.

ಮಹಮ್ಮದ್ ಹಸನಬ್ಬ, ರಫೀಕ್, ಇದಿನಬ್ಬ ಹಾಗೂ ಇಬ್ರಾಹಿಂ ಬಂಧಿತರು. ಈ ಪೈಕಿ ಇಬ್ರಾಹಿಂ ಕಸಾಯಿಖಾನೆ ರೂವಾರಿಯಾಗಿದ್ದು ಆತನ ಮನೆಯಲ್ಲೇ ಮಾಂಸ ಮಾಡಿ ರವಾನೆ ಮಾಡಲಾಗುತ್ತಿತ್ತು ಎನ್ನಲಾಗಿದೆ.
Mangalore House converted into slaughter house flesh illegally being traded Bagarang Dal members raid house four arrested near Kinnigoli.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 12:37 pm
Mangalore Correspondent
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm