ಬ್ರೇಕಿಂಗ್ ನ್ಯೂಸ್
22-10-21 10:30 pm Mangalore Reporter ಕ್ರೈಂ
ಮಂಗಳೂರು, ಅ.22 : ಮನೆಯೊಂದರಲ್ಲಿ ಪ್ರತಿ ವಾರ ಗೋವುಗಳನ್ನು ಕಡಿದು ಮಾಂಸ ಮಾಡಿ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದು ಮೂಲ್ಕಿ ಹಾಗೂ ಮೂಡುಬಿದಿರೆ ಪ್ರಖಂಡದ ಬಜರಂಗದಳದ ಕಾರ್ಯಕರ್ತರು ದಾಳಿ ನಡೆಸಿದ್ದು ಕಿನ್ನಿಗೋಳಿಯ ಸಂಕಲಕರಿಯದಲ್ಲಿ ನಡೆಯುತ್ತಿದ್ದ ಅಕ್ರಮ ಕಸಾಯಿಖಾನೆಯನ್ನು ಪತ್ತೆ ಮಾಡಿದ್ದಾರೆ.
ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಮಾರುತಿ ಓಮ್ನಿ ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 50 ಕೆ.ಜಿ. ಗೋಮಾಂಸವನ್ನು ಪತ್ತೆ ಮಾಡಿದ್ದಾರೆ. ಬಳಿಕ ಅದರಲ್ಲಿದ್ದ ಆರೋಪಿಗಳು ನೀಡಿದ ಮಾಹಿತಿಯಂತೆ ಮೂಲ್ಕಿ ಪೊಲೀಸರಿಗೆ ಬಜರಂಗದಳ ಕಾರ್ಯಕರ್ತರು ಮಾಹಿತಿ ನೀಡಿದ್ದಾರೆ. ಆಬಳಿಕ ಕಸಾಯಿಖಾನೆ ಇದ್ದ ಜಾಗ ಕಾರ್ಕಳ ಠಾಣೆ ವ್ಯಾಪ್ತಿಗೆ ಬರುತ್ತಿದ್ದ ಕಾರಣ ಅಲ್ಲಿನ ಪೊಲೀಸರಿಗೂ ಮಾಹಿತಿ ನೀಡಿದ್ದಾರೆ.

ಕಸಾಯಿಖಾನೆಗೆಂದು ಮನೆಯ ಬಳಿಯಲ್ಲೇ ಹಟ್ಟಿಯನ್ನು ರಚಿಸಿದ್ದು ಅಲ್ಲಿ ಪ್ರತಿವಾರ ಗೋವನ್ನು ಖರೀದಿಸಿ ತಂದು ಕಟ್ಟಿ ಹಾಕುತ್ತಿದ್ದರು. ಬಳಿಕ ಅದನ್ನು ಪ್ರತಿ ವಾರ ಅಗತ್ಯ ಇದ್ದಷ್ಟು ಮಾಂಸ ಮಾಡುತ್ತಿದ್ದರು. ಸುತ್ತಲಲ್ಲಿ ಹಿಂದುಗಳ ಮನೆಯೇ ಇದ್ದರೂ, ಗೋವನ್ನು ಮಾಂಸ ಮಾಡಿ ಮೂಲ್ಕಿ ವ್ಯಾಪ್ತಿಯ ಹಲವು ಕಡೆಗಳಿಗೆ ಮಾಂಸವನ್ನು ವ್ಯವಸ್ಥಿತವಾಗಿ ಪೂರೈಕೆ ಮಾಡಲಾಗುತ್ತಿತ್ತು. ಈ ಬಗ್ಗೆ ಸ್ಥಳೀಯರಿಗೆ ಮಾಹಿತಿ ಇದ್ದರೂ, ಪೊಲೀಸ್ ದೂರು ನೀಡಿರಲಿಲ್ಲ.

ದಾಳಿ ನಡೆಸಿದ ವೇಳೆ, ಆರೋಪಿಯ ಮನೆಯ ಒಳಗೇ ಕಸಾಯಿಖಾನೆ ನಡೆಸುತ್ತಿದ್ದುದು ಪತ್ತೆಯಾಗಿದೆ. ಹೊರಗಡೆ ಇದ್ದ ಹಟ್ಟಿಯಲ್ಲಿ ಎಂಟು ಗೋವುಗಳಿದ್ದು ಅವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಲ್ಲದೆ, ಮನೆಯ ಒಳಗಡೆಯೂ ಮಾಂಸ ಮತ್ತು ಮಾಂಸ ಮಾಡಲು ಬಳಸಿದ್ದ ಪರಿಕರಗಳನ್ನೂ ವಶಕ್ಕೆ ಪಡೆದಿದ್ದಾರೆ. ಒಟ್ಟು ಒಂದು ಕ್ವಿಂಟಾಲ್ನಷ್ಟು ಗೋಮಾಂಸ ಹಾಗೂ ನಾಲ್ಕು ಆರೋಪಿಗಳನ್ನು ಮೂಲ್ಕಿ ಮತ್ತು ಕಾರ್ಕಳ ಪೋಲೀಸರು ವಶಕ್ಕೆ ಪಡೆದಿದ್ದಾರೆ.

ಮಹಮ್ಮದ್ ಹಸನಬ್ಬ, ರಫೀಕ್, ಇದಿನಬ್ಬ ಹಾಗೂ ಇಬ್ರಾಹಿಂ ಬಂಧಿತರು. ಈ ಪೈಕಿ ಇಬ್ರಾಹಿಂ ಕಸಾಯಿಖಾನೆ ರೂವಾರಿಯಾಗಿದ್ದು ಆತನ ಮನೆಯಲ್ಲೇ ಮಾಂಸ ಮಾಡಿ ರವಾನೆ ಮಾಡಲಾಗುತ್ತಿತ್ತು ಎನ್ನಲಾಗಿದೆ.
Mangalore House converted into slaughter house flesh illegally being traded Bagarang Dal members raid house four arrested near Kinnigoli.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm