ಬ್ರೇಕಿಂಗ್ ನ್ಯೂಸ್
24-10-21 02:24 pm Headline Karnataka News Network ಕ್ರೈಂ
ಹಾವೇರಿ, ಅ.24 : ನಿಧಿ ಆಸೆಗಾಗಿ ವೈದ್ಯನೊಬ್ಬ ಪತ್ನಿಯನ್ನೇ ಕೊಲೆ ಮಾಡಿದ್ದ ಪ್ರಕರಣವನ್ನು 9 ತಿಂಗಳ ಬಳಿಕ ಹೊನ್ನಾಳಿ ಪೊಲೀಸರು ಭೇದಿಸಿದ್ದು ಆರೋಪಿಯನ್ನು ಬಂಧಿಸಿದ್ದಾರೆ.
ತಾಲೂಕಿನ ಬೆಳಗುತ್ತಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವೈದ್ಯ ಚನ್ನೇಶಪ್ಪನಿಗೆ 18 ವರ್ಷಗಳ ಹಿಂದೆ ಹಾವೇರಿ ಜಿಲ್ಲೆ ಹಿರೇಕೆರೂರಿನ ಚಂದ್ರಪ್ಪ ಎಂಬುವರ ಮಗಳು ಶಿಲ್ಪಾ ಅವರನ್ನು ಮದುವೆ ಮಾಡಲಾಗಿತ್ತು. ಮದುವೆ ವೇಳೆ 700 ಗ್ರಾಂ ಬಂಗಾರ, 1 ಕೆ.ಜಿ. ಬೆಳ್ಳಿ, 7 ಲಕ್ಷ ನಗದು ವರದಕ್ಷಿಣೆ ಕೊಟ್ಟು ಮದುವೆ ಮಾಡಿದ್ದರು.

ವೃತ್ತಿಯಲ್ಲಿ ವೈದ್ಯನಾಗಿದ್ದರೂ ಚನ್ನೇಶಪ್ಪನಿಗೆ ವಾಮಾಚಾರ, ಮಾಟ, ಮಂತ್ರದಲ್ಲಿ ನಂಬಿಕೆ ಇತ್ತು. ಮನೆಗೆ ಪೂಜಾರಿಗಳನ್ನು ಕರೆಸಿ ಪೂಜೆ ಮಾಡಿಸುತ್ತಿದ್ದ. ನಿಧಿ ಆಸೆಗಾಗಿ ಕೆಲ ಪೂಜಾರಿಗಳ ಮಾತು ಕೇಳಿ, ಫೆ.11ರಂದು ಪತ್ನಿಗೆ ಹೈಡೋಸ್ ಚುಚ್ಚುಮದ್ದು ನೀಡಿ ಕೊಲೆ ಮಾಡಿದ್ದ. ಇದೀಗ ಎಫ್ಎಸ್ಎಲ್ ವರದಿ ಬಂದಿದ್ದು, ಆರೋಪ ಸಾಬೀತಾದ ಹಿನ್ನೆಲೆ ನ್ಯಾಮತಿ ಪೊಲೀಸರು ಆರೋಪಿಯನ್ನು ಬಂಧಿಸಿ ದಾವಣಗೆರೆ ಕಾರಾಗೃಹದಲ್ಲಿರಿಸಿ ಕಾನೂನು ಪ್ರಕ್ರಿಯೆ ಕೈಗೊಂಡಿದ್ದಾರೆ.
ಬಂಧಿತ ಆರೋಪಿ ವೈದ್ಯ ಡಾ.ಚನ್ನೇಶಪ್ಪ 38 ಎಕರೆ ಜಮೀನು ಹೊಂದಿದ್ದ. ಶ್ರೀಮಂತನಾಗಿದ್ದ ಆತ ಕುಡಿತ, ಕ್ಯಾಸಿನೋ, ಜೂಜಾಟದ ಚಟಕ್ಕೆ ಬಿದ್ದು ಹಣ ಕಳಕೊಂಡಿದ್ದ. ಪದೇ ಪದೆ ಪತ್ನಿ ಶಿಲ್ಪಾಗೆ ತವರು ಮನೆಯಿಂದ ಹಣ ತರುವಂತೆ ಪೀಡಿಸುತ್ತಿದ್ದ. ನಿಧಿ ಸಿಗುತ್ತದೆಂಬ ಆಸೆಯಲ್ಲಿ ರಾತ್ರೋರಾತ್ರಿ ತನ್ನ ಮನೆಯಲ್ಲೇ ಪೂಜೆ ಮಾಡಿಸುತ್ತಿದ್ದ. ಕೆಲ ಪೂಜಾರಿಗಳು ನಿಧಿಗಾಗಿ ಬಲಿ ಬೇಕಾಗಿರುವುದಾಗಿ ಹೇಳಿದ್ದರಿಂದ, ಪತ್ನಿ ಶಿಲ್ಪಾಳನ್ನೇ ಬಲಿ ನೀಡಿದ್ದಾನೆಂದು ಮೃತಳ ಪೋಷಕರು ಆರೋಪಿಸಿದ್ದಾರೆ.
Haveri Husband desires for Tressure and wealth kills his wife witchcraft suspected. Cops of arrested the accused husband after nine month of crime.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm