ಬ್ರೇಕಿಂಗ್ ನ್ಯೂಸ್
27-10-21 03:03 pm Mangalore Reporter ಕ್ರೈಂ
ಬಂಟ್ವಾಳ, ಅ.27: ಬಿಜೆಪಿ ಕಾರ್ಯಕರ್ತನ ಮೇಲೆ ಅದೇ ಪಕ್ಷದ ಕಾರ್ಯಕರ್ತರು ತಲವಾರು ದಾಳಿ ನಡೆಸಿ, ಕೊಲೆಗೆ ಯತ್ನಿಸಿದ ಘಟನೆ ಗ್ರಾಮಾಂತರ ಠಾಣೆ ವ್ಯಾಪ್ತಿಯ ಬಡಗಬೆಳ್ಳೂರಿನಲ್ಲಿ ನಡೆದಿದೆ. ಬಡಗಬೆಳ್ಳೂರು ಬಿಜೆಪಿ ಬೂತ್ ಕಮಿಟಿ ಅಧ್ಯಕ್ಷ ಪ್ರಕಾಶ್ ಬೆಳ್ಳೂರು ಮೇಲೆ ಆತನ ಮನೆಗೇ ನುಗ್ಗಿ ಹಲ್ಲೆ ನಡೆಸಿ, ತಲವಾರು ದಾಳಿ ನಡೆಸಲಾಗಿದೆ.
ಕಿವಿಯ ಭಾಗಕ್ಕೆ ತಲವಾರು ಏಟು ಬಿದ್ದು ಗಾಯಗೊಂಡಿರುವ ಪ್ರಕಾಶ್, ಆಸ್ಪತ್ರೆಗೆ ದಾಖಲಾಗಿದ್ದಾರೆ. ಅದೇ ಪರಿಸರದ ನಿತಿನ್, ನಿಶಾಂತ್ ಮತ್ತಿತರ ಯುವಕರು ಸೇರಿ ಹಲ್ಲೆ ನಡೆಸಿದ್ದಾರೆ. ಇವರ ನಡುವೆ, ಹಣದ ವಿಚಾರದಲ್ಲಿ ಗಲಾಟೆ ನಡೆದಿತ್ತು. ವರ್ಷದ ಹಿಂದೆ ನಿತಿನ್ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಕೊಲೆಯತ್ನ ಕೇಸು ದಾಖಲಾಗಿತ್ತು. ಪ್ರಕರಣವನ್ನು ರಾಜಿಯಲ್ಲಿ ಮುಗಿಸಲೆಂದು ಸ್ಥಳೀಯ ಪುಢಾರಿ ಆಗಿರುವ ಪ್ರಕಾಶ್ ಬೆಳ್ಳೂರುಗೆ ನಿತಿನ್ 25 ಸಾವಿರ ರೂ. ಹಣವನ್ನು ನೀಡಿದ್ದಾನೆ ಎನ್ನಲಾಗಿದೆ.
ಇದೇ ವಿಚಾರದಲ್ಲಿ ಸ್ಥಳೀಯ ಮಟ್ಟದಲ್ಲಿ ನಡೆಯುತ್ತಿದ್ದ ವಾಗ್ವಾದ, ಫೇಸ್ಬುಕ್ ನಲ್ಲೂ ಮುಂದುವರಿದಿತ್ತು. ಪ್ರಕಾಶ್ ಬೆಳ್ಳೂರು ತಾನು ಹಣ ಪಡೆದಿಲ್ಲ. ಬೇಕಾದರೆ ಪಣೋಲಿಬೈಲಿಗೆ ಬಂದು ಪ್ರಮಾಣ ಮಾಡುತ್ತೇನೆ. ಹಣ ಕೊಟ್ಟಿದ್ದಾರೆ ಎಂದವರು ಅಲ್ಲಿಗೆ ಬಂದು ಪ್ರಮಾಣ ಮಾಡಲಿ ಎಂದು ಫೇಸ್ಬುಕ್ ನಲ್ಲಿ ಸವಾಲು ಹಾಕಿದ್ದಾರೆ. ಅದೇ ಪೋಸ್ಟ್ ನಲ್ಲಿ ನಿಶಾಂತ್ ಮತ್ತು ಆತನ ಗೆಳೆಯರು ಹೀನಾಯವಾಗಿ ನಿಂದಿಸಿ ಪ್ರಕಾಶ್ ಬಗ್ಗೆ ಬರೆದಿದ್ದರು. ಇದೇ ವಿಚಾರ ಮಾತಿಗೆ ಮಾತು ಬೆಳೆದಿದ್ದು, ನಿತಿನ್, ನಿಶಾಂತ್ ಮತ್ತಿತರರು ಮಂಗಳವಾರ ಸಂಜೆ ಪ್ರಕಾಶ್ ಬೆಳ್ಳೂರು ಮನೆಗೆ ನುಗ್ಗಿ ತಲವಾರು ದಾಳಿ ನಡೆಸಿದ್ದಾರೆ.
ಆದರೆ, ಈ ವೇಳೆ ಪ್ರಕಾಶ್ ತಲವಾರು ಕಡಿತದಿಂದ ತಪ್ಪಿಸಿಕೊಂಡಿದ್ದು ಕಿವಿಗೆ ಮಾತ್ರ ಗಾಯವಾಗಿತ್ತು. ಆನಂತರ, ನೆಲಕ್ಕೆ ಹಾಕಿ ತುಳಿದು ಹಲ್ಲೆ ನಡೆಸಿದ್ದಾರೆ. ಬಳಿಕ ಪ್ರಕಾಶ್ ಸಂಬಂಧಿಕರು ಬಂದು ಸಮಾಧಾನ ಹೇಳಿ, ಕಡಿಯಲು ಬಂದವರನ್ನು ಕಳಿಸಿಕೊಟ್ಟಿದ್ದರು. ಘಟನೆ ಸಂಬಂಧಿಸಿ ಗ್ರಾಮಾಂತರ ಠಾಣೆಯಲ್ಲಿ ಕೊಲೆಯತ್ನ, ಜೀವ ಬೆದರಿಕೆ ಪ್ರಕರಣ ದಾಖಲಾಗಿದೆ. ಆರೋಪಿಗಳು ಪರಾರಿಯಾಗಿದ್ದಾರೆ.
Mangalore Bjp member attacked by BJP members in Bantwal over financial dispute. Prakash is said to be admitted in the hospital and is said to be out of danger.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 02:16 pm
HK News Staffer
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm