ಬ್ರೇಕಿಂಗ್ ನ್ಯೂಸ್
27-10-21 03:03 pm Mangalore Reporter ಕ್ರೈಂ
ಬಂಟ್ವಾಳ, ಅ.27: ಬಿಜೆಪಿ ಕಾರ್ಯಕರ್ತನ ಮೇಲೆ ಅದೇ ಪಕ್ಷದ ಕಾರ್ಯಕರ್ತರು ತಲವಾರು ದಾಳಿ ನಡೆಸಿ, ಕೊಲೆಗೆ ಯತ್ನಿಸಿದ ಘಟನೆ ಗ್ರಾಮಾಂತರ ಠಾಣೆ ವ್ಯಾಪ್ತಿಯ ಬಡಗಬೆಳ್ಳೂರಿನಲ್ಲಿ ನಡೆದಿದೆ. ಬಡಗಬೆಳ್ಳೂರು ಬಿಜೆಪಿ ಬೂತ್ ಕಮಿಟಿ ಅಧ್ಯಕ್ಷ ಪ್ರಕಾಶ್ ಬೆಳ್ಳೂರು ಮೇಲೆ ಆತನ ಮನೆಗೇ ನುಗ್ಗಿ ಹಲ್ಲೆ ನಡೆಸಿ, ತಲವಾರು ದಾಳಿ ನಡೆಸಲಾಗಿದೆ.
ಕಿವಿಯ ಭಾಗಕ್ಕೆ ತಲವಾರು ಏಟು ಬಿದ್ದು ಗಾಯಗೊಂಡಿರುವ ಪ್ರಕಾಶ್, ಆಸ್ಪತ್ರೆಗೆ ದಾಖಲಾಗಿದ್ದಾರೆ. ಅದೇ ಪರಿಸರದ ನಿತಿನ್, ನಿಶಾಂತ್ ಮತ್ತಿತರ ಯುವಕರು ಸೇರಿ ಹಲ್ಲೆ ನಡೆಸಿದ್ದಾರೆ. ಇವರ ನಡುವೆ, ಹಣದ ವಿಚಾರದಲ್ಲಿ ಗಲಾಟೆ ನಡೆದಿತ್ತು. ವರ್ಷದ ಹಿಂದೆ ನಿತಿನ್ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಕೊಲೆಯತ್ನ ಕೇಸು ದಾಖಲಾಗಿತ್ತು. ಪ್ರಕರಣವನ್ನು ರಾಜಿಯಲ್ಲಿ ಮುಗಿಸಲೆಂದು ಸ್ಥಳೀಯ ಪುಢಾರಿ ಆಗಿರುವ ಪ್ರಕಾಶ್ ಬೆಳ್ಳೂರುಗೆ ನಿತಿನ್ 25 ಸಾವಿರ ರೂ. ಹಣವನ್ನು ನೀಡಿದ್ದಾನೆ ಎನ್ನಲಾಗಿದೆ.
ಇದೇ ವಿಚಾರದಲ್ಲಿ ಸ್ಥಳೀಯ ಮಟ್ಟದಲ್ಲಿ ನಡೆಯುತ್ತಿದ್ದ ವಾಗ್ವಾದ, ಫೇಸ್ಬುಕ್ ನಲ್ಲೂ ಮುಂದುವರಿದಿತ್ತು. ಪ್ರಕಾಶ್ ಬೆಳ್ಳೂರು ತಾನು ಹಣ ಪಡೆದಿಲ್ಲ. ಬೇಕಾದರೆ ಪಣೋಲಿಬೈಲಿಗೆ ಬಂದು ಪ್ರಮಾಣ ಮಾಡುತ್ತೇನೆ. ಹಣ ಕೊಟ್ಟಿದ್ದಾರೆ ಎಂದವರು ಅಲ್ಲಿಗೆ ಬಂದು ಪ್ರಮಾಣ ಮಾಡಲಿ ಎಂದು ಫೇಸ್ಬುಕ್ ನಲ್ಲಿ ಸವಾಲು ಹಾಕಿದ್ದಾರೆ. ಅದೇ ಪೋಸ್ಟ್ ನಲ್ಲಿ ನಿಶಾಂತ್ ಮತ್ತು ಆತನ ಗೆಳೆಯರು ಹೀನಾಯವಾಗಿ ನಿಂದಿಸಿ ಪ್ರಕಾಶ್ ಬಗ್ಗೆ ಬರೆದಿದ್ದರು. ಇದೇ ವಿಚಾರ ಮಾತಿಗೆ ಮಾತು ಬೆಳೆದಿದ್ದು, ನಿತಿನ್, ನಿಶಾಂತ್ ಮತ್ತಿತರರು ಮಂಗಳವಾರ ಸಂಜೆ ಪ್ರಕಾಶ್ ಬೆಳ್ಳೂರು ಮನೆಗೆ ನುಗ್ಗಿ ತಲವಾರು ದಾಳಿ ನಡೆಸಿದ್ದಾರೆ.
ಆದರೆ, ಈ ವೇಳೆ ಪ್ರಕಾಶ್ ತಲವಾರು ಕಡಿತದಿಂದ ತಪ್ಪಿಸಿಕೊಂಡಿದ್ದು ಕಿವಿಗೆ ಮಾತ್ರ ಗಾಯವಾಗಿತ್ತು. ಆನಂತರ, ನೆಲಕ್ಕೆ ಹಾಕಿ ತುಳಿದು ಹಲ್ಲೆ ನಡೆಸಿದ್ದಾರೆ. ಬಳಿಕ ಪ್ರಕಾಶ್ ಸಂಬಂಧಿಕರು ಬಂದು ಸಮಾಧಾನ ಹೇಳಿ, ಕಡಿಯಲು ಬಂದವರನ್ನು ಕಳಿಸಿಕೊಟ್ಟಿದ್ದರು. ಘಟನೆ ಸಂಬಂಧಿಸಿ ಗ್ರಾಮಾಂತರ ಠಾಣೆಯಲ್ಲಿ ಕೊಲೆಯತ್ನ, ಜೀವ ಬೆದರಿಕೆ ಪ್ರಕರಣ ದಾಖಲಾಗಿದೆ. ಆರೋಪಿಗಳು ಪರಾರಿಯಾಗಿದ್ದಾರೆ.
Mangalore Bjp member attacked by BJP members in Bantwal over financial dispute. Prakash is said to be admitted in the hospital and is said to be out of danger.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 05:20 pm
Mangalore Correspondent
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm