ಬ್ರೇಕಿಂಗ್ ನ್ಯೂಸ್
27-10-21 03:03 pm Mangalore Reporter ಕ್ರೈಂ
ಬಂಟ್ವಾಳ, ಅ.27: ಬಿಜೆಪಿ ಕಾರ್ಯಕರ್ತನ ಮೇಲೆ ಅದೇ ಪಕ್ಷದ ಕಾರ್ಯಕರ್ತರು ತಲವಾರು ದಾಳಿ ನಡೆಸಿ, ಕೊಲೆಗೆ ಯತ್ನಿಸಿದ ಘಟನೆ ಗ್ರಾಮಾಂತರ ಠಾಣೆ ವ್ಯಾಪ್ತಿಯ ಬಡಗಬೆಳ್ಳೂರಿನಲ್ಲಿ ನಡೆದಿದೆ. ಬಡಗಬೆಳ್ಳೂರು ಬಿಜೆಪಿ ಬೂತ್ ಕಮಿಟಿ ಅಧ್ಯಕ್ಷ ಪ್ರಕಾಶ್ ಬೆಳ್ಳೂರು ಮೇಲೆ ಆತನ ಮನೆಗೇ ನುಗ್ಗಿ ಹಲ್ಲೆ ನಡೆಸಿ, ತಲವಾರು ದಾಳಿ ನಡೆಸಲಾಗಿದೆ.
ಕಿವಿಯ ಭಾಗಕ್ಕೆ ತಲವಾರು ಏಟು ಬಿದ್ದು ಗಾಯಗೊಂಡಿರುವ ಪ್ರಕಾಶ್, ಆಸ್ಪತ್ರೆಗೆ ದಾಖಲಾಗಿದ್ದಾರೆ. ಅದೇ ಪರಿಸರದ ನಿತಿನ್, ನಿಶಾಂತ್ ಮತ್ತಿತರ ಯುವಕರು ಸೇರಿ ಹಲ್ಲೆ ನಡೆಸಿದ್ದಾರೆ. ಇವರ ನಡುವೆ, ಹಣದ ವಿಚಾರದಲ್ಲಿ ಗಲಾಟೆ ನಡೆದಿತ್ತು. ವರ್ಷದ ಹಿಂದೆ ನಿತಿನ್ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಕೊಲೆಯತ್ನ ಕೇಸು ದಾಖಲಾಗಿತ್ತು. ಪ್ರಕರಣವನ್ನು ರಾಜಿಯಲ್ಲಿ ಮುಗಿಸಲೆಂದು ಸ್ಥಳೀಯ ಪುಢಾರಿ ಆಗಿರುವ ಪ್ರಕಾಶ್ ಬೆಳ್ಳೂರುಗೆ ನಿತಿನ್ 25 ಸಾವಿರ ರೂ. ಹಣವನ್ನು ನೀಡಿದ್ದಾನೆ ಎನ್ನಲಾಗಿದೆ.
ಇದೇ ವಿಚಾರದಲ್ಲಿ ಸ್ಥಳೀಯ ಮಟ್ಟದಲ್ಲಿ ನಡೆಯುತ್ತಿದ್ದ ವಾಗ್ವಾದ, ಫೇಸ್ಬುಕ್ ನಲ್ಲೂ ಮುಂದುವರಿದಿತ್ತು. ಪ್ರಕಾಶ್ ಬೆಳ್ಳೂರು ತಾನು ಹಣ ಪಡೆದಿಲ್ಲ. ಬೇಕಾದರೆ ಪಣೋಲಿಬೈಲಿಗೆ ಬಂದು ಪ್ರಮಾಣ ಮಾಡುತ್ತೇನೆ. ಹಣ ಕೊಟ್ಟಿದ್ದಾರೆ ಎಂದವರು ಅಲ್ಲಿಗೆ ಬಂದು ಪ್ರಮಾಣ ಮಾಡಲಿ ಎಂದು ಫೇಸ್ಬುಕ್ ನಲ್ಲಿ ಸವಾಲು ಹಾಕಿದ್ದಾರೆ. ಅದೇ ಪೋಸ್ಟ್ ನಲ್ಲಿ ನಿಶಾಂತ್ ಮತ್ತು ಆತನ ಗೆಳೆಯರು ಹೀನಾಯವಾಗಿ ನಿಂದಿಸಿ ಪ್ರಕಾಶ್ ಬಗ್ಗೆ ಬರೆದಿದ್ದರು. ಇದೇ ವಿಚಾರ ಮಾತಿಗೆ ಮಾತು ಬೆಳೆದಿದ್ದು, ನಿತಿನ್, ನಿಶಾಂತ್ ಮತ್ತಿತರರು ಮಂಗಳವಾರ ಸಂಜೆ ಪ್ರಕಾಶ್ ಬೆಳ್ಳೂರು ಮನೆಗೆ ನುಗ್ಗಿ ತಲವಾರು ದಾಳಿ ನಡೆಸಿದ್ದಾರೆ.
ಆದರೆ, ಈ ವೇಳೆ ಪ್ರಕಾಶ್ ತಲವಾರು ಕಡಿತದಿಂದ ತಪ್ಪಿಸಿಕೊಂಡಿದ್ದು ಕಿವಿಗೆ ಮಾತ್ರ ಗಾಯವಾಗಿತ್ತು. ಆನಂತರ, ನೆಲಕ್ಕೆ ಹಾಕಿ ತುಳಿದು ಹಲ್ಲೆ ನಡೆಸಿದ್ದಾರೆ. ಬಳಿಕ ಪ್ರಕಾಶ್ ಸಂಬಂಧಿಕರು ಬಂದು ಸಮಾಧಾನ ಹೇಳಿ, ಕಡಿಯಲು ಬಂದವರನ್ನು ಕಳಿಸಿಕೊಟ್ಟಿದ್ದರು. ಘಟನೆ ಸಂಬಂಧಿಸಿ ಗ್ರಾಮಾಂತರ ಠಾಣೆಯಲ್ಲಿ ಕೊಲೆಯತ್ನ, ಜೀವ ಬೆದರಿಕೆ ಪ್ರಕರಣ ದಾಖಲಾಗಿದೆ. ಆರೋಪಿಗಳು ಪರಾರಿಯಾಗಿದ್ದಾರೆ.
Mangalore Bjp member attacked by BJP members in Bantwal over financial dispute. Prakash is said to be admitted in the hospital and is said to be out of danger.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm