ಬ್ರೇಕಿಂಗ್ ನ್ಯೂಸ್
27-10-21 04:37 pm Mangalore Reporter ಕ್ರೈಂ
ಉಡುಪಿ, ಅ.27 : ನೆರೆಮನೆಗೆ ಆಟವಾಡಲು ಹೋಗಿದ್ದ 5 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣದಲ್ಲಿ ಆರೋಪಿಗೆ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯ 10 ವರ್ಷ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ವೆಂಕಟೇಶ(30) ಎಂಬಾತ ಶಿಕ್ಷೆಗೊಳಗಾದ ಅಪರಾಧಿ. ಉಡುಪಿಯ ಪೋಕ್ಸೋ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ. ರಾಘವೇಂದ್ರ ಅವರು ಪ್ರಾಸಿಕ್ಯೂಶನ್ ಪರ ವಾದ ಮಂಡಿಸಿದ್ದರು.
ಕಾರ್ಕಳ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ 2018ರಲ್ಲಿ ಘಟನೆ ನಡೆದಿತ್ತು. ವೆಂಕಟೇಶ್ ತನ್ನ ಮನೆಗೆ ಆಟ ಆಡಲೆಂದು ಬಂದಿದ್ದ ಐದು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ. ಮಗು ಮನೆಯಲ್ಲಿ ಅಸ್ವಸ್ಥಳಾಗಿದ್ದರಿಂದ ತಾಯಿ ಕಷಾಯ ಮಾಡಿ ಕೊಟ್ಟಿದ್ದರು. ಆದರೆ ಬಾಲಕಿ ವಿಪರೀತ ಅನಾರೋಗ್ಯಕ್ಕೀಡಾಗಿದ್ದು ಕಾರ್ಕಳ ಆಸ್ಪತ್ರೆಗೆ ಕರೆದೊಯ್ದು ಅಲ್ಲಿಂದ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಈ ವೇಳೆ, ಮಗು ತನ್ನ ಮೇಲೆ ನಡೆದ ದೌರ್ಜನ್ಯದ ಕುರಿತು ಮಾಹಿತಿ ನೀಡಿದ್ದು ಈ ಬಗ್ಗೆ ಕಾರ್ಕಳ ಠಾಣೆಗೆ ದೂರು ನೀಡಲಾಗಿತ್ತು. ಅಂದಿನ ಉಪನಿರೀಕ್ಷಕ ನಂಜಾ ನಾಯ್ಕ್ ಪ್ರಕರಣ ದಾಖಲಿಸಿದ್ದರು. ಅಂದಿನ ಕಾರ್ಕಳ ಸಿಪಿಐ ಜಾಯ್ ಅಂತೋನಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ನ್ಯಾಯಾಲಯ ಒಟ್ಟು19 ಮಂದಿ ಸಾಕ್ಷಿಗಳ ಪೈಕಿ 12 ಮಂದಿಯನ್ನು ವಿಚಾರಣೆಗೆ ಗುರಿಪಡಿಸಿತ್ತು. ವೈದ್ಯಕೀಯ ದಾಖಲೆಗಳು, ನೊಂದ ಬಾಲಕಿ ಹಾಗೂ ಇತರ ಸಾಕ್ಷಿಗಳು ಹೇಳಿದ ಸಾಕ್ಷ್ಯಾಧಾರಗಳು ಅಭಿಯೋಜನೆ ಪರವಾಗಿತ್ತು. ಪೋಕ್ಸೋ ಕಾಯ್ದೆಯಡಿ 10 ವರ್ಷ ಕಠಿಣ ಸಜೆ, 20 ಸಾವಿರ ದಂಡ ಮತ್ತು ಸಂತ್ರಸ್ತೆಗೆ 75 ಸಾವಿರ ಪರಿಹಾರ ನೀಡಲು ಸರಕಾರಕ್ಕೆ ನ್ಯಾಯಾಲಯ ಆದೇಶಿಸಿದೆ.
Judge of the district additional and sessions court which also is the fast track court for cases under the Protection of Children from Sexual Offences (POCSO) Act, sentenced an accused to ten years jail term. Judge of the court, Yermal Kalpana, who found that the charge of sexual atrocity committed by the accused on a five-year-old girl who had been to neighbouring house to play, has been proved, awarded the above sentence.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 02:16 pm
HK News Staffer
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm