ಬ್ರೇಕಿಂಗ್ ನ್ಯೂಸ್
27-10-21 04:37 pm Mangalore Reporter ಕ್ರೈಂ
ಉಡುಪಿ, ಅ.27 : ನೆರೆಮನೆಗೆ ಆಟವಾಡಲು ಹೋಗಿದ್ದ 5 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣದಲ್ಲಿ ಆರೋಪಿಗೆ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯ 10 ವರ್ಷ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ವೆಂಕಟೇಶ(30) ಎಂಬಾತ ಶಿಕ್ಷೆಗೊಳಗಾದ ಅಪರಾಧಿ. ಉಡುಪಿಯ ಪೋಕ್ಸೋ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ. ರಾಘವೇಂದ್ರ ಅವರು ಪ್ರಾಸಿಕ್ಯೂಶನ್ ಪರ ವಾದ ಮಂಡಿಸಿದ್ದರು.
ಕಾರ್ಕಳ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ 2018ರಲ್ಲಿ ಘಟನೆ ನಡೆದಿತ್ತು. ವೆಂಕಟೇಶ್ ತನ್ನ ಮನೆಗೆ ಆಟ ಆಡಲೆಂದು ಬಂದಿದ್ದ ಐದು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ. ಮಗು ಮನೆಯಲ್ಲಿ ಅಸ್ವಸ್ಥಳಾಗಿದ್ದರಿಂದ ತಾಯಿ ಕಷಾಯ ಮಾಡಿ ಕೊಟ್ಟಿದ್ದರು. ಆದರೆ ಬಾಲಕಿ ವಿಪರೀತ ಅನಾರೋಗ್ಯಕ್ಕೀಡಾಗಿದ್ದು ಕಾರ್ಕಳ ಆಸ್ಪತ್ರೆಗೆ ಕರೆದೊಯ್ದು ಅಲ್ಲಿಂದ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಈ ವೇಳೆ, ಮಗು ತನ್ನ ಮೇಲೆ ನಡೆದ ದೌರ್ಜನ್ಯದ ಕುರಿತು ಮಾಹಿತಿ ನೀಡಿದ್ದು ಈ ಬಗ್ಗೆ ಕಾರ್ಕಳ ಠಾಣೆಗೆ ದೂರು ನೀಡಲಾಗಿತ್ತು. ಅಂದಿನ ಉಪನಿರೀಕ್ಷಕ ನಂಜಾ ನಾಯ್ಕ್ ಪ್ರಕರಣ ದಾಖಲಿಸಿದ್ದರು. ಅಂದಿನ ಕಾರ್ಕಳ ಸಿಪಿಐ ಜಾಯ್ ಅಂತೋನಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ನ್ಯಾಯಾಲಯ ಒಟ್ಟು19 ಮಂದಿ ಸಾಕ್ಷಿಗಳ ಪೈಕಿ 12 ಮಂದಿಯನ್ನು ವಿಚಾರಣೆಗೆ ಗುರಿಪಡಿಸಿತ್ತು. ವೈದ್ಯಕೀಯ ದಾಖಲೆಗಳು, ನೊಂದ ಬಾಲಕಿ ಹಾಗೂ ಇತರ ಸಾಕ್ಷಿಗಳು ಹೇಳಿದ ಸಾಕ್ಷ್ಯಾಧಾರಗಳು ಅಭಿಯೋಜನೆ ಪರವಾಗಿತ್ತು. ಪೋಕ್ಸೋ ಕಾಯ್ದೆಯಡಿ 10 ವರ್ಷ ಕಠಿಣ ಸಜೆ, 20 ಸಾವಿರ ದಂಡ ಮತ್ತು ಸಂತ್ರಸ್ತೆಗೆ 75 ಸಾವಿರ ಪರಿಹಾರ ನೀಡಲು ಸರಕಾರಕ್ಕೆ ನ್ಯಾಯಾಲಯ ಆದೇಶಿಸಿದೆ.
Judge of the district additional and sessions court which also is the fast track court for cases under the Protection of Children from Sexual Offences (POCSO) Act, sentenced an accused to ten years jail term. Judge of the court, Yermal Kalpana, who found that the charge of sexual atrocity committed by the accused on a five-year-old girl who had been to neighbouring house to play, has been proved, awarded the above sentence.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm