ಬ್ರೇಕಿಂಗ್ ನ್ಯೂಸ್
28-10-21 03:49 pm Mangaluru correspondent ಕ್ರೈಂ
ಉಡುಪಿ, ಅ.28: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಪ್ತ, ಬೈಂದೂರು ತಾಲೂಕಿನ ಉಪ್ಪುಂದ ಮೂಲದ ಗುತ್ತಿಗೆದಾರ ಯು.ಬಿ ಶೆಟ್ಟಿ ಮನಯ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಉಪ್ಪುಂದದ ಮನೆಯ ಮನೆಗೆ ಒಂಬತ್ತು ಮಂದಿ ಅಧಿಕಾರಿಗಳು ದಾಳಿ ನಡೆಸಿದ್ದು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಉಪ್ಪುಂದ ಮೂಲದ ಯುಬಿ ಶೆಟ್ಟಿ ಧಾರವಾಡದಲ್ಲಿ ನೆಲೆಸಿದ್ದು, ಅಲ್ಲಿಯೇ ಗುತ್ತಿಗೆದಾರನಾಗಿದ್ದಾರೆ. ಆದರೆ, ಇತ್ತೀಚಿನ ವರ್ಷಗಳಲ್ಲಿ ಗುತ್ತಿಗೆ ವಹಿವಾಟಿನಲ್ಲಿ ನಷ್ಟ ಅನುಭವಿಸಿದ್ದರು. ಆನಂತರ, ಡಿಕೆ ಶಿವಕುಮಾರ್ ನೆರವಿನಲ್ಲಿ ಶೆಟ್ಟಿಯವರು ವ್ಯವಹಾರದಲ್ಲಿ ಮುನ್ನಡೆದಿದ್ದರು.

ವರ್ಷದ ಹಿಂದೆ ಬೈಂದೂರು ತಾಲೂಕಿನಲ್ಲಿ ಎರಡು ಶಾಲೆಗಳನ್ನು ಖರೀದಿಸಿದ್ದ ಯುಬಿ ಶೆಟ್ಟಿ, ಜೊತೆಗೆ ಮತ್ತೊಂದು ಶಾಲೆಯನ್ನು ದತ್ತು ಪಡೆದು ಅಭಿವೃದ್ಧಿ ಪಡಿಸಿದ್ದರು. ಎಚ್ಎಮ್ಎಸ್ ಆಂಗ್ಲ ಮಾಧ್ಯಮ ಶಾಲೆ ಮತ್ತು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯನ್ನು ಶೆಟ್ಟಿ ಖರೀದಿಸಿದ್ದರು. ಉಪ್ಪುಂದದಲ್ಲಿ ಬಂಗಲೆಯನ್ನೂ ಹೊಂದಿದ್ದಾರೆ. ಮೊದಲಿನಿಂದಲೂ ಶ್ರೀಮಂತರಾಗಿದ್ದ ಶೆಟ್ಟಿ ಆಬಳಿಕ ಉತ್ತರ ಕರ್ನಾಟಕದಲ್ಲಿ ಗುತ್ತಿಗೆದಾರನಾಗಿ ಹೆಸರು ಮಾಡಿದ್ದರು.
ಹೆತ್ತವರ ನಿಧನದ ಬಳಿಕ ಉಪ್ಪುಂದದ ಮನೆಯಲ್ಲಿ ಕೆಲವೊಮ್ಮೆ ಬಂದು ಉಳಿದುಕೊಳ್ಳುತ್ತಿದ್ದರು. ಸೋದರರು ಕೂಡ ಅದೇ ಮನೆಯಲ್ಲಿ ಉಳಿದುಕೊಂಡಿದ್ದರು. ಇದೀಗ ಆ ಮನೆಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು ಪರಿಶೀಲನೆ ನಡೆಸಿದ್ದಾರೆ. ಉಪ ಚುನಾವಣೆಯಲ್ಲಿ ಡಿಕೆಶಿ ಪರವಾಗಿ ನಿಂತ ಕಾರಣವೋ ಏನೋ, ಐಟಿ ಅಧಿಕಾರಿಗಳ ಕಣ್ಣು ಇವರ ಮೇಲೆ ಬಿದ್ದಿದೆ.
Income tax raids Kpcc president DK Shivakumar aide U B Shetty house in Udupi.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 05:20 pm
Mangalore Correspondent
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm