ಬ್ರೇಕಿಂಗ್ ನ್ಯೂಸ್
28-10-21 03:49 pm Mangaluru correspondent ಕ್ರೈಂ
ಉಡುಪಿ, ಅ.28: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಪ್ತ, ಬೈಂದೂರು ತಾಲೂಕಿನ ಉಪ್ಪುಂದ ಮೂಲದ ಗುತ್ತಿಗೆದಾರ ಯು.ಬಿ ಶೆಟ್ಟಿ ಮನಯ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಉಪ್ಪುಂದದ ಮನೆಯ ಮನೆಗೆ ಒಂಬತ್ತು ಮಂದಿ ಅಧಿಕಾರಿಗಳು ದಾಳಿ ನಡೆಸಿದ್ದು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಉಪ್ಪುಂದ ಮೂಲದ ಯುಬಿ ಶೆಟ್ಟಿ ಧಾರವಾಡದಲ್ಲಿ ನೆಲೆಸಿದ್ದು, ಅಲ್ಲಿಯೇ ಗುತ್ತಿಗೆದಾರನಾಗಿದ್ದಾರೆ. ಆದರೆ, ಇತ್ತೀಚಿನ ವರ್ಷಗಳಲ್ಲಿ ಗುತ್ತಿಗೆ ವಹಿವಾಟಿನಲ್ಲಿ ನಷ್ಟ ಅನುಭವಿಸಿದ್ದರು. ಆನಂತರ, ಡಿಕೆ ಶಿವಕುಮಾರ್ ನೆರವಿನಲ್ಲಿ ಶೆಟ್ಟಿಯವರು ವ್ಯವಹಾರದಲ್ಲಿ ಮುನ್ನಡೆದಿದ್ದರು.

ವರ್ಷದ ಹಿಂದೆ ಬೈಂದೂರು ತಾಲೂಕಿನಲ್ಲಿ ಎರಡು ಶಾಲೆಗಳನ್ನು ಖರೀದಿಸಿದ್ದ ಯುಬಿ ಶೆಟ್ಟಿ, ಜೊತೆಗೆ ಮತ್ತೊಂದು ಶಾಲೆಯನ್ನು ದತ್ತು ಪಡೆದು ಅಭಿವೃದ್ಧಿ ಪಡಿಸಿದ್ದರು. ಎಚ್ಎಮ್ಎಸ್ ಆಂಗ್ಲ ಮಾಧ್ಯಮ ಶಾಲೆ ಮತ್ತು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯನ್ನು ಶೆಟ್ಟಿ ಖರೀದಿಸಿದ್ದರು. ಉಪ್ಪುಂದದಲ್ಲಿ ಬಂಗಲೆಯನ್ನೂ ಹೊಂದಿದ್ದಾರೆ. ಮೊದಲಿನಿಂದಲೂ ಶ್ರೀಮಂತರಾಗಿದ್ದ ಶೆಟ್ಟಿ ಆಬಳಿಕ ಉತ್ತರ ಕರ್ನಾಟಕದಲ್ಲಿ ಗುತ್ತಿಗೆದಾರನಾಗಿ ಹೆಸರು ಮಾಡಿದ್ದರು.
ಹೆತ್ತವರ ನಿಧನದ ಬಳಿಕ ಉಪ್ಪುಂದದ ಮನೆಯಲ್ಲಿ ಕೆಲವೊಮ್ಮೆ ಬಂದು ಉಳಿದುಕೊಳ್ಳುತ್ತಿದ್ದರು. ಸೋದರರು ಕೂಡ ಅದೇ ಮನೆಯಲ್ಲಿ ಉಳಿದುಕೊಂಡಿದ್ದರು. ಇದೀಗ ಆ ಮನೆಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು ಪರಿಶೀಲನೆ ನಡೆಸಿದ್ದಾರೆ. ಉಪ ಚುನಾವಣೆಯಲ್ಲಿ ಡಿಕೆಶಿ ಪರವಾಗಿ ನಿಂತ ಕಾರಣವೋ ಏನೋ, ಐಟಿ ಅಧಿಕಾರಿಗಳ ಕಣ್ಣು ಇವರ ಮೇಲೆ ಬಿದ್ದಿದೆ.
Income tax raids Kpcc president DK Shivakumar aide U B Shetty house in Udupi.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm