ಬ್ರೇಕಿಂಗ್ ನ್ಯೂಸ್
28-10-21 03:49 pm Mangaluru correspondent ಕ್ರೈಂ
ಉಡುಪಿ, ಅ.28: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಪ್ತ, ಬೈಂದೂರು ತಾಲೂಕಿನ ಉಪ್ಪುಂದ ಮೂಲದ ಗುತ್ತಿಗೆದಾರ ಯು.ಬಿ ಶೆಟ್ಟಿ ಮನಯ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಉಪ್ಪುಂದದ ಮನೆಯ ಮನೆಗೆ ಒಂಬತ್ತು ಮಂದಿ ಅಧಿಕಾರಿಗಳು ದಾಳಿ ನಡೆಸಿದ್ದು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಉಪ್ಪುಂದ ಮೂಲದ ಯುಬಿ ಶೆಟ್ಟಿ ಧಾರವಾಡದಲ್ಲಿ ನೆಲೆಸಿದ್ದು, ಅಲ್ಲಿಯೇ ಗುತ್ತಿಗೆದಾರನಾಗಿದ್ದಾರೆ. ಆದರೆ, ಇತ್ತೀಚಿನ ವರ್ಷಗಳಲ್ಲಿ ಗುತ್ತಿಗೆ ವಹಿವಾಟಿನಲ್ಲಿ ನಷ್ಟ ಅನುಭವಿಸಿದ್ದರು. ಆನಂತರ, ಡಿಕೆ ಶಿವಕುಮಾರ್ ನೆರವಿನಲ್ಲಿ ಶೆಟ್ಟಿಯವರು ವ್ಯವಹಾರದಲ್ಲಿ ಮುನ್ನಡೆದಿದ್ದರು.

ವರ್ಷದ ಹಿಂದೆ ಬೈಂದೂರು ತಾಲೂಕಿನಲ್ಲಿ ಎರಡು ಶಾಲೆಗಳನ್ನು ಖರೀದಿಸಿದ್ದ ಯುಬಿ ಶೆಟ್ಟಿ, ಜೊತೆಗೆ ಮತ್ತೊಂದು ಶಾಲೆಯನ್ನು ದತ್ತು ಪಡೆದು ಅಭಿವೃದ್ಧಿ ಪಡಿಸಿದ್ದರು. ಎಚ್ಎಮ್ಎಸ್ ಆಂಗ್ಲ ಮಾಧ್ಯಮ ಶಾಲೆ ಮತ್ತು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯನ್ನು ಶೆಟ್ಟಿ ಖರೀದಿಸಿದ್ದರು. ಉಪ್ಪುಂದದಲ್ಲಿ ಬಂಗಲೆಯನ್ನೂ ಹೊಂದಿದ್ದಾರೆ. ಮೊದಲಿನಿಂದಲೂ ಶ್ರೀಮಂತರಾಗಿದ್ದ ಶೆಟ್ಟಿ ಆಬಳಿಕ ಉತ್ತರ ಕರ್ನಾಟಕದಲ್ಲಿ ಗುತ್ತಿಗೆದಾರನಾಗಿ ಹೆಸರು ಮಾಡಿದ್ದರು.
ಹೆತ್ತವರ ನಿಧನದ ಬಳಿಕ ಉಪ್ಪುಂದದ ಮನೆಯಲ್ಲಿ ಕೆಲವೊಮ್ಮೆ ಬಂದು ಉಳಿದುಕೊಳ್ಳುತ್ತಿದ್ದರು. ಸೋದರರು ಕೂಡ ಅದೇ ಮನೆಯಲ್ಲಿ ಉಳಿದುಕೊಂಡಿದ್ದರು. ಇದೀಗ ಆ ಮನೆಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು ಪರಿಶೀಲನೆ ನಡೆಸಿದ್ದಾರೆ. ಉಪ ಚುನಾವಣೆಯಲ್ಲಿ ಡಿಕೆಶಿ ಪರವಾಗಿ ನಿಂತ ಕಾರಣವೋ ಏನೋ, ಐಟಿ ಅಧಿಕಾರಿಗಳ ಕಣ್ಣು ಇವರ ಮೇಲೆ ಬಿದ್ದಿದೆ.
Income tax raids Kpcc president DK Shivakumar aide U B Shetty house in Udupi.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 02:56 pm
HK News Staffer
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm