ಬ್ರೇಕಿಂಗ್ ನ್ಯೂಸ್
06-11-21 12:46 pm HK Desk ಕ್ರೈಂ
ಪುಣೆ, ನ.6: ಅಪರಾಧ ಪ್ರಕರಣಗಳಲ್ಲಿ ಸಣ್ಣ ಕೂದಲು, ರಕ್ತದ ಕಲೆ ಸಿಕ್ಕರೂ, ಅದು ಹಂತಕನ ಸುಳಿವು ನೀಡುತ್ತದೆ ಎನ್ನುತ್ತಾರೆ. ಅದಕ್ಕಾಗಿ ಯಾವುದೇ ಪ್ರಕರಣ ದಾಖಲಾದ ಕೂಡಲೇ ಪೊಲೀಸರು ಮೊದಲಿಗೆ ಏನಾದ್ರೂ ಕುರುಹು ಸಿಗುತ್ತಾ ಎಂದು ಹುಡುಕಾಟ ನಡೆಸುತ್ತಾರೆ. ಇಲ್ಲೊಂದು ಪ್ರಕರಣದಲ್ಲಿ ಬೇರಾವುದೇ ಸಾಕ್ಷ್ಯ ಇಲ್ಲದಿದ್ದರೂ, ಕೊಲೆಯಾದ ಯುವಕನ ಒಂದು ಚಪ್ಪಲಿಯೇ ಹಂತಕರ ಬಗ್ಗೆ ಸುಳಿವು ನೀಡಿತ್ತು.
ಅಕ್ಟೋಬರ್ 22ರಂದು 27 ವರ್ಷದ ಯುವಕ ನಾಪತ್ತೆಯಾದ ಬಗ್ಗೆ ಚಿಂಚ್ವಾಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಯುವಕನ ತಾಯಿಯೇ ಕೊಲೆ ಬಗ್ಗೆ ಶಂಕಿಸಿ ಪೊಲೀಸರಿಗೆ ದೂರು ನೀಡಿದ್ದರು. ತನಿಖೆ ಆರಂಭಿಸಿದ ಪೊಲೀಸರಿಗೆ ಯುವಕನ ಮೊಬೈಲ್ ಕರೆ ಆಧರಿಸಿ ಕೆಲವು ಸುಳಿವುಗಳು ಲಭಿಸಿದ್ದವು. ವಿವಾಹಿತ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಇರಿಸಿಕೊಂಡಿದ್ದ ಬಗ್ಗೆ ಶಂಕೆಯ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಆದರೆ, ಮಹಿಳೆಯ ಮನೆ ಬಳಿಗೆ ಹೋದವರಿಗೆ ಕೊಲೆಯಾದ ಯುವಕನ ಚಪ್ಪಲಿ ಸಿಕ್ಕಿತ್ತು.
ಪೊಲೀಸರು ಚಪ್ಪಲಿ ಆಧರಿಸಿ ತನಿಖೆ ಆರಂಭಿಸಿದ್ದರು. ಅದರಂತೆ, ಅ.21ರಂದು ಮಹಿಳೆಗೆ ಯುವಕ ಕರೆ ಮಾಡಿದ್ದು ಕಂಡುಬಂದಿದೆ. ಮಹಿಳೆಯನ್ನು ವಿಚಾರಿಸಿದಾಗ, ಅದೇ ದಿನ ರಾತ್ರಿ ಯುವಕ ಮಹಿಳೆಯ ಮನೆ ಬಳಿಗೆ ಬಂದಿದ್ದ ಅನ್ನೋದು ತಿಳಿದುಬಂದಿದೆ. ಅಷ್ಟೇ ಅಲ್ಲ, ತನ್ನ ಪತ್ನಿಯನ್ನು ಭೇಟಿಯಾಗಲು ಬಂದಿದ್ದ ಯುವಕನನ್ನು ಆಕೆಯ ಪತಿ ತನ್ನಿಬ್ಬರು ಗೆಳೆಯರ ಜೊತೆ ಸೇರಿ ಚೂರಿಯಿಂದ ಇರಿದು ಕೊಲೆ ಮಾಡಿದ್ದರು.
ಆನಂತರ, ಮಹಿಳೆಯ ಪತಿಗೆ ಸೇರಿದ ಕಳ್ಳಭಟ್ಟಿ ತಯಾರಿಕಾ ಕೇಂದ್ರಕ್ಕೆ ಶವ ಒಯ್ದು ಅಲ್ಲಿ ದೇಹವನ್ನು ತುಂಡು ಮಾಡಿ ಸುಟ್ಟು ಹಾಕಿದ್ದಾರೆ. ಸುಟ್ಟು ಹೋದ ದೇಹದ ಭಾಗಗಳನ್ನು ವಿವಿಧ ಕಡೆ ಎಸೆದು ತಮ್ಮ ಪಾಡಿಗೆ ಕೆಲಸದಲ್ಲಿ ತೊಡಗಿದ್ದರು. ಆದರೆ, ಇತ್ತ ಪೊಲೀಸ್ ದೂರು ದಾಖಲಾಗಿದ್ದು ಗೊತ್ತಾಗುತ್ತಲೇ ಆರೋಪಿಗಳು ತಲೆಮರೆಸಿಕೊಂಡಿದ್ದರು. ಹಂತಕರು ಯಾರೆಂದು ಗೊತ್ತಾಗುತ್ತಲೇ ಬೆನ್ನುಬಿದ್ದ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಇಬ್ಬರನ್ನು ಮಧ್ಯಪ್ರದೇಶದಲ್ಲಿ ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿಯನ್ನು ಪುಣೆಯಲ್ಲಿ ಬಂಧಿಸಿದ್ದಾರೆ.
A 27-year-old man, who had gone missing in mid-October, was allegedly murdered by the husband of the woman he was having an affair with, said Pune police. Three people, including the main accused, were arrested in connection with the matter.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm