ಬ್ರೇಕಿಂಗ್ ನ್ಯೂಸ್
07-11-21 10:40 am Mangaluru Correspondent ಕ್ರೈಂ
ಪುತ್ತೂರು, ನ.7: ಉಪ್ಪಿನಂಗಡಿ ಬಳಿಯ ಇಳಂತಿಲ ಗ್ರಾಮದ ಗುಡ್ಡದಲ್ಲಿ ಹ್ಯಾಂಡ್ ಗ್ರೆನೇಡ್ ಮಾದರಿಯ ಬಾಂಬ್ ಪತ್ತೆಯಾಗಿದ್ದು ಇದನ್ನು ಗಮನಿಸಿದ ನಿವೃತ್ತ ಸೈನಿಕರೊಬ್ಬರು ಪೊಲೀಸರ ಗಮನಕ್ಕೆ ತಂದಿದ್ದಾರೆ.
ಇಳಂತಿಲ ಗ್ರಾಮದ ನಿವಾಸಿ ಜಯಕುಮಾರ್ ನಿವೃತ್ತ ಯೋಧರಾಗಿದ್ದು ಶನಿವಾರ ಸಂಜೆ 6 ಗಂಟೆ ವೇಳೆಗೆ ಉಪ್ಪಿನಂಗಡಿಯಿಂದ ತನ್ನ ಮನೆಗೆ ನಡೆದುಕೊಂಡು ತೆರಳುತ್ತಿದ್ದಾಗ ಗುಡ್ಡದ ಇಳಿಜಾರಿನಲ್ಲಿ ಗ್ರೆನೇಡ್ ಮಾದರಿಯ ಸ್ಫೋಟಕ ವಸ್ತು ಕಂಡುಬಂದಿದೆ. ಅದರಲ್ಲಿ ಹಳದಿ ಬಣ್ಣದ ಪ್ಲಾಸ್ಟಿಕ್ ಕವರಿನಲ್ಲಿ ಒಂದು ಗ್ರೆನೇಡ್ ಇದ್ದು ಇತರ ನಾಲ್ಕು ಗ್ರೆನೇಡ್ ಗಳು ಪರಿಸರದಲ್ಲಿ ಹರಡಿಕೊಂಡ ರೀತಿ ಬಿದ್ದಿತ್ತು.
ಜಯಕುಮಾರ್ ಭಾರತೀಯ ಸೇನೆಯ ಭೂಸೇನಾ ರೆಜಿಮೆಂಟಿನಲ್ಲಿ ಎಸ್ ಸಿ ಓ ಆಗಿ ನಿವೃತ್ತಿ ಹೊಂದಿದ್ದು ಆ ವಸ್ತುಗಳನ್ನು ನೋಡಿ ಗ್ರೆನೇಡ್ ಎಂಬುದನ್ನು ಕಂಡುಕೊಂಡಿದ್ದಾರೆ. ಸ್ಪೋಟಕ ವಸ್ತುಗಳನ್ನು ಕಾಡು ಪ್ರಾಣಿಗಳು ಬೇರೆಡೆಗೆ ಕಚ್ಚಿಕೊಂಡು ಹೋಗಿ ಸಾರ್ವಜನಿಕರಿಗೆ ಅಪಾಯ ಆಗುವುದನ್ನು ಅರಿತ ಜಯಕುಮಾರ್, ಅವುಗಳನ್ನು ತನ್ನ ಮನೆಯ ಅಂಗಳದ ಮೂಲೆಯಲ್ಲಿಟ್ಟು ಉಪ್ಪಿನಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಗ್ರೆನೇಡ್ ಸ್ಫೋಟಗಳನ್ನು ಯಾರೋ ದುಷ್ಕರ್ಮಿಗಳು ಜನರು ಸಂಚರಿಸುವ ದಾರಿಯ ಬದಿಯಲ್ಲಿ ಹಾಕಿದ್ದು ಈ ಕೃತ್ಯ ಎಸಗಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಯಕುಮಾರ್ ದೂರು ನೀಡಿದ್ದಾರೆ.
ಈ ಬಗ್ಗೆ ಎಸ್ಪಿ ಋಷಿಕುಮಾರ್ ಸೋನವಾಣೆ ಬಳಿ ಮಾಹಿತಿ ಕೇಳಿದಾಗ, ಅವು ಹ್ಯಾಂಡ್ ಗ್ರೆನೇಡ್ ಎಂಬುದಾಗಿ ಹೇಳಿದ್ದಾರೆ. ತುಕ್ಕು ಹಿಡಿದಿದ್ದು ಹಲವಾರು ವರ್ಷಗಳ ಹಿಂದಿನದ್ದಾಗಿರುವ ಸಾಧ್ಯತೆಯಿದೆ. ಯುದ್ಧ ಸಂದರ್ಭದಲ್ಲಿ ಇದನ್ನು ಬಳಸಲಾಗುತ್ತದೆ. ಕಾಶ್ಮೀರದಲ್ಲಿ ಉಗ್ರರು ಕೂಡ ಇದನ್ನು ಯೋಧರ ವಿರುದ್ಧ ಬಳಕೆ ಮಾಡುತ್ತಾರೆ. ಗ್ರೆನೇಡ್ ಉಪ್ಪಿನಂಗಡಿಗೆ ಹೇಗೆ ಬಂತೆಂಬುದನ್ನು ತನಿಖೆ ನಡೆಸುತ್ತೇವೆ ಎಂದಿದ್ದಾರೆ.
In a curious incident, five grenades were found placed near a wire fence at Ilanthila of the taluk. A case is filed in this regard by Jayakumar Poojary (66), who noticed the grenades. According to the details, the complainant Jayakumar was walking towards his house from Uppinangady at around 6 pm on Saturday, November 6, when he noticed five things resembling grenades kept near the left hand side of the wire fence that is located on a downward slope area.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm