ಬ್ರೇಕಿಂಗ್ ನ್ಯೂಸ್
07-11-21 10:40 am Mangaluru Correspondent ಕ್ರೈಂ
ಪುತ್ತೂರು, ನ.7: ಉಪ್ಪಿನಂಗಡಿ ಬಳಿಯ ಇಳಂತಿಲ ಗ್ರಾಮದ ಗುಡ್ಡದಲ್ಲಿ ಹ್ಯಾಂಡ್ ಗ್ರೆನೇಡ್ ಮಾದರಿಯ ಬಾಂಬ್ ಪತ್ತೆಯಾಗಿದ್ದು ಇದನ್ನು ಗಮನಿಸಿದ ನಿವೃತ್ತ ಸೈನಿಕರೊಬ್ಬರು ಪೊಲೀಸರ ಗಮನಕ್ಕೆ ತಂದಿದ್ದಾರೆ.
ಇಳಂತಿಲ ಗ್ರಾಮದ ನಿವಾಸಿ ಜಯಕುಮಾರ್ ನಿವೃತ್ತ ಯೋಧರಾಗಿದ್ದು ಶನಿವಾರ ಸಂಜೆ 6 ಗಂಟೆ ವೇಳೆಗೆ ಉಪ್ಪಿನಂಗಡಿಯಿಂದ ತನ್ನ ಮನೆಗೆ ನಡೆದುಕೊಂಡು ತೆರಳುತ್ತಿದ್ದಾಗ ಗುಡ್ಡದ ಇಳಿಜಾರಿನಲ್ಲಿ ಗ್ರೆನೇಡ್ ಮಾದರಿಯ ಸ್ಫೋಟಕ ವಸ್ತು ಕಂಡುಬಂದಿದೆ. ಅದರಲ್ಲಿ ಹಳದಿ ಬಣ್ಣದ ಪ್ಲಾಸ್ಟಿಕ್ ಕವರಿನಲ್ಲಿ ಒಂದು ಗ್ರೆನೇಡ್ ಇದ್ದು ಇತರ ನಾಲ್ಕು ಗ್ರೆನೇಡ್ ಗಳು ಪರಿಸರದಲ್ಲಿ ಹರಡಿಕೊಂಡ ರೀತಿ ಬಿದ್ದಿತ್ತು.
ಜಯಕುಮಾರ್ ಭಾರತೀಯ ಸೇನೆಯ ಭೂಸೇನಾ ರೆಜಿಮೆಂಟಿನಲ್ಲಿ ಎಸ್ ಸಿ ಓ ಆಗಿ ನಿವೃತ್ತಿ ಹೊಂದಿದ್ದು ಆ ವಸ್ತುಗಳನ್ನು ನೋಡಿ ಗ್ರೆನೇಡ್ ಎಂಬುದನ್ನು ಕಂಡುಕೊಂಡಿದ್ದಾರೆ. ಸ್ಪೋಟಕ ವಸ್ತುಗಳನ್ನು ಕಾಡು ಪ್ರಾಣಿಗಳು ಬೇರೆಡೆಗೆ ಕಚ್ಚಿಕೊಂಡು ಹೋಗಿ ಸಾರ್ವಜನಿಕರಿಗೆ ಅಪಾಯ ಆಗುವುದನ್ನು ಅರಿತ ಜಯಕುಮಾರ್, ಅವುಗಳನ್ನು ತನ್ನ ಮನೆಯ ಅಂಗಳದ ಮೂಲೆಯಲ್ಲಿಟ್ಟು ಉಪ್ಪಿನಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಗ್ರೆನೇಡ್ ಸ್ಫೋಟಗಳನ್ನು ಯಾರೋ ದುಷ್ಕರ್ಮಿಗಳು ಜನರು ಸಂಚರಿಸುವ ದಾರಿಯ ಬದಿಯಲ್ಲಿ ಹಾಕಿದ್ದು ಈ ಕೃತ್ಯ ಎಸಗಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಯಕುಮಾರ್ ದೂರು ನೀಡಿದ್ದಾರೆ.
ಈ ಬಗ್ಗೆ ಎಸ್ಪಿ ಋಷಿಕುಮಾರ್ ಸೋನವಾಣೆ ಬಳಿ ಮಾಹಿತಿ ಕೇಳಿದಾಗ, ಅವು ಹ್ಯಾಂಡ್ ಗ್ರೆನೇಡ್ ಎಂಬುದಾಗಿ ಹೇಳಿದ್ದಾರೆ. ತುಕ್ಕು ಹಿಡಿದಿದ್ದು ಹಲವಾರು ವರ್ಷಗಳ ಹಿಂದಿನದ್ದಾಗಿರುವ ಸಾಧ್ಯತೆಯಿದೆ. ಯುದ್ಧ ಸಂದರ್ಭದಲ್ಲಿ ಇದನ್ನು ಬಳಸಲಾಗುತ್ತದೆ. ಕಾಶ್ಮೀರದಲ್ಲಿ ಉಗ್ರರು ಕೂಡ ಇದನ್ನು ಯೋಧರ ವಿರುದ್ಧ ಬಳಕೆ ಮಾಡುತ್ತಾರೆ. ಗ್ರೆನೇಡ್ ಉಪ್ಪಿನಂಗಡಿಗೆ ಹೇಗೆ ಬಂತೆಂಬುದನ್ನು ತನಿಖೆ ನಡೆಸುತ್ತೇವೆ ಎಂದಿದ್ದಾರೆ.
In a curious incident, five grenades were found placed near a wire fence at Ilanthila of the taluk. A case is filed in this regard by Jayakumar Poojary (66), who noticed the grenades. According to the details, the complainant Jayakumar was walking towards his house from Uppinangady at around 6 pm on Saturday, November 6, when he noticed five things resembling grenades kept near the left hand side of the wire fence that is located on a downward slope area.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 01:01 pm
HK News Staffer
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm