ಬ್ರೇಕಿಂಗ್ ನ್ಯೂಸ್
09-11-21 08:53 pm Mangaluru Correspondent ಕ್ರೈಂ
ಮಂಗಳೂರು, ನ.9: ತಾನು ಪ್ರೀತಿಸುತ್ತಿದ್ದ ಹುಡುಗಿಯನ್ನು ಮನೆಯಲ್ಲಿ ಬಚ್ಚಿಟ್ಟುಕೊಂಡಿದ್ದ ಸಿಟ್ಟಿನಲ್ಲಿ ಆಕೆಯ ಚಿಕ್ಕಮ್ಮನಿಗೆ ತನ್ನದೇ ಅಶ್ಲೀಲ ವಿಡಿಯೋ ಕಳುಹಿಸಿ, ಅಶ್ಲೀಲವಾಗಿ ಮಾತನಾಡಿ ಮಾನಸಿಕ ಕಿರುಕುಳ ನೀಡಿರುವ ಬಗ್ಗೆ ಮಂಗಳೂರಿನ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣ ಸಂಬಂಧಿಸಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಮೂಲದ ನಿವಾಸಿ ಸಂತೋಷ್ ಎಂಬಾತನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಹುಡುಗಿಯ ಚಿಕ್ಕಮ್ಮ ಪೊಲೀಸ್ ದೂರು ನೀಡಿದ್ದಾರೆ. ಮಹಿಳೆಯ ಅಕ್ಕನ ಮಗಳನ್ನು ಮೂಡಿಗೆರೆ ಮೂಲದ, ಸದ್ಯ ಬೆಂಗಳೂರಿನಲ್ಲಿ ನೆಲೆಸಿರುವ ಸಂತೋಷ್ ಎಂಬಾತ ಪ್ರೀತಿಸುತ್ತಿದ್ದ. ಈ ವಿಚಾರ ಹುಡುಗಿಯ ಮನೆಯವರಿಗೆ ಗೊತ್ತಾಗಿ ವಿರೋಧ ವ್ಯಕ್ತಪಡಿಸಿದ್ದರು.
ಬಳಿಕ ಆಕೆಯನ್ನು ಮಂಗಳೂರಿನಲ್ಲಿರುವ ಚಿಕ್ಕಮ್ಮ ತನ್ನ ಮನೆಗೆ ಕರೆದುಕೊಂಡು ಬಂದು ಇರಿಸಿದ್ದರು. ಆದರೆ, ಅಲ್ಲಿಯೂ ಹುಡುಗಿಯ ನಂಬರ್ ಪಡೆದು ವಾಟ್ಸಪ್ ಸಂದೇಶ ಕಳುಹಿಸುವುದು ಮತ್ತು ಕರೆ ಮಾಡಿ ಮಾತನಾಡುವುದನ್ನು ಮುಂದುವರಿಸಿದ್ದ. ಇದನ್ನು ತಿಳಿದ ಚಿಕ್ಕಮ್ಮ, ಹುಡುಗಿಯ ಮೊಬೈಲಿನ ಸಿಮ್ ಕಾರ್ಡನ್ನು ತೆಗೆದಿಟ್ಟಿದ್ದರು. ಆನಂತರ ಆರೋಪಿ ಸಂತೋಷ್, ಹುಡುಗಿಯ ಚಿಕ್ಕಮ್ಮನ ಮೊಬೈಲ್ ನಂಬರ್ ಪಡೆದು ಬೇರೆ ಬೇರೆ ನಂಬರ್ ಗಳಿಂದ ಕರೆ ಮಾಡತೊಡಗಿದ್ದ. ಇದರಿಂದ ಬೇಸತ್ತ ಮಹಿಳೆ ಸಂತೋಷ್ ಕರೆ ಮಾಡುತ್ತಿದ್ದ ಎಲ್ಲ ನಂಬರ್ ಗಳನ್ನು ಬ್ಲಾಕ್ ಮಾಡಿದ್ದರು.
ಈ ನಡುವೆ, ಸಂತೋಷ್ ಬೇರೊಂದು ನಂಬರಿನಿಂದ ಚಿಕ್ಕಮ್ಮನ ಮೊಬೈಲಿಗೆ ಗಂಡಸಿನ ಗುಪ್ತಾಂಗದ ನಗ್ನ ಚಿತ್ರವನ್ನು ಕಳುಹಿಸಿದ್ದಾನೆ. ಅಲ್ಲದೆ, ತನ್ನದೇ ಅಶ್ಲೀಲ ವಿಡಿಯೋ ಒಂದನ್ನು ಕಳುಹಿಸಿದ್ದಲ್ಲದೆ, ಮಹಿಳೆಗೆ ಕರೆ ಮಾಡಿ ಅಶ್ಲೀಲವಾಗಿ ಮಾತನಾಡಿದ್ದಾನೆ. ಇದರಿಂದ ಮಾನಸಿಕ ಹಿಂಸೆಗೊಳಗಾದ ಮಹಿಳೆ ಮಂಗಳೂರಿನ ಸೈಬರ್ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
Man arrested for Sending his Nude video and obscene text messages to Women in Mangalore. The arrested has been identified as Santosh from Mudigere.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm