ಬ್ರೇಕಿಂಗ್ ನ್ಯೂಸ್
09-11-21 08:53 pm Mangaluru Correspondent ಕ್ರೈಂ
ಮಂಗಳೂರು, ನ.9: ತಾನು ಪ್ರೀತಿಸುತ್ತಿದ್ದ ಹುಡುಗಿಯನ್ನು ಮನೆಯಲ್ಲಿ ಬಚ್ಚಿಟ್ಟುಕೊಂಡಿದ್ದ ಸಿಟ್ಟಿನಲ್ಲಿ ಆಕೆಯ ಚಿಕ್ಕಮ್ಮನಿಗೆ ತನ್ನದೇ ಅಶ್ಲೀಲ ವಿಡಿಯೋ ಕಳುಹಿಸಿ, ಅಶ್ಲೀಲವಾಗಿ ಮಾತನಾಡಿ ಮಾನಸಿಕ ಕಿರುಕುಳ ನೀಡಿರುವ ಬಗ್ಗೆ ಮಂಗಳೂರಿನ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣ ಸಂಬಂಧಿಸಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಮೂಲದ ನಿವಾಸಿ ಸಂತೋಷ್ ಎಂಬಾತನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಹುಡುಗಿಯ ಚಿಕ್ಕಮ್ಮ ಪೊಲೀಸ್ ದೂರು ನೀಡಿದ್ದಾರೆ. ಮಹಿಳೆಯ ಅಕ್ಕನ ಮಗಳನ್ನು ಮೂಡಿಗೆರೆ ಮೂಲದ, ಸದ್ಯ ಬೆಂಗಳೂರಿನಲ್ಲಿ ನೆಲೆಸಿರುವ ಸಂತೋಷ್ ಎಂಬಾತ ಪ್ರೀತಿಸುತ್ತಿದ್ದ. ಈ ವಿಚಾರ ಹುಡುಗಿಯ ಮನೆಯವರಿಗೆ ಗೊತ್ತಾಗಿ ವಿರೋಧ ವ್ಯಕ್ತಪಡಿಸಿದ್ದರು.
ಬಳಿಕ ಆಕೆಯನ್ನು ಮಂಗಳೂರಿನಲ್ಲಿರುವ ಚಿಕ್ಕಮ್ಮ ತನ್ನ ಮನೆಗೆ ಕರೆದುಕೊಂಡು ಬಂದು ಇರಿಸಿದ್ದರು. ಆದರೆ, ಅಲ್ಲಿಯೂ ಹುಡುಗಿಯ ನಂಬರ್ ಪಡೆದು ವಾಟ್ಸಪ್ ಸಂದೇಶ ಕಳುಹಿಸುವುದು ಮತ್ತು ಕರೆ ಮಾಡಿ ಮಾತನಾಡುವುದನ್ನು ಮುಂದುವರಿಸಿದ್ದ. ಇದನ್ನು ತಿಳಿದ ಚಿಕ್ಕಮ್ಮ, ಹುಡುಗಿಯ ಮೊಬೈಲಿನ ಸಿಮ್ ಕಾರ್ಡನ್ನು ತೆಗೆದಿಟ್ಟಿದ್ದರು. ಆನಂತರ ಆರೋಪಿ ಸಂತೋಷ್, ಹುಡುಗಿಯ ಚಿಕ್ಕಮ್ಮನ ಮೊಬೈಲ್ ನಂಬರ್ ಪಡೆದು ಬೇರೆ ಬೇರೆ ನಂಬರ್ ಗಳಿಂದ ಕರೆ ಮಾಡತೊಡಗಿದ್ದ. ಇದರಿಂದ ಬೇಸತ್ತ ಮಹಿಳೆ ಸಂತೋಷ್ ಕರೆ ಮಾಡುತ್ತಿದ್ದ ಎಲ್ಲ ನಂಬರ್ ಗಳನ್ನು ಬ್ಲಾಕ್ ಮಾಡಿದ್ದರು.
ಈ ನಡುವೆ, ಸಂತೋಷ್ ಬೇರೊಂದು ನಂಬರಿನಿಂದ ಚಿಕ್ಕಮ್ಮನ ಮೊಬೈಲಿಗೆ ಗಂಡಸಿನ ಗುಪ್ತಾಂಗದ ನಗ್ನ ಚಿತ್ರವನ್ನು ಕಳುಹಿಸಿದ್ದಾನೆ. ಅಲ್ಲದೆ, ತನ್ನದೇ ಅಶ್ಲೀಲ ವಿಡಿಯೋ ಒಂದನ್ನು ಕಳುಹಿಸಿದ್ದಲ್ಲದೆ, ಮಹಿಳೆಗೆ ಕರೆ ಮಾಡಿ ಅಶ್ಲೀಲವಾಗಿ ಮಾತನಾಡಿದ್ದಾನೆ. ಇದರಿಂದ ಮಾನಸಿಕ ಹಿಂಸೆಗೊಳಗಾದ ಮಹಿಳೆ ಮಂಗಳೂರಿನ ಸೈಬರ್ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
Man arrested for Sending his Nude video and obscene text messages to Women in Mangalore. The arrested has been identified as Santosh from Mudigere.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm